Jeremiah 21:6 in Kannada

Kannada Kannada Bible Jeremiah Jeremiah 21 Jeremiah 21:6

Jeremiah 21:6
ಈ ಪಟ್ಟಣದ ನಿವಾಸಿಗಳನ್ನೂ ಮನುಷ್ಯರನ್ನೂ ಮೃಗ ಗಳನ್ನೂ ಸಹಿತವಾಗಿ ಹೊಡೆಯುವೆನು; ಅವರು ದೊಡ್ಡ ಜಾಡ್ಯದಿಂದ ಸಾಯುವರು.

Jeremiah 21:5Jeremiah 21Jeremiah 21:7

Jeremiah 21:6 in Other Translations

King James Version (KJV)
And I will smite the inhabitants of this city, both man and beast: they shall die of a great pestilence.

American Standard Version (ASV)
And I will smite the inhabitants of this city, both man and beast: they shall die of a great pestilence.

Bible in Basic English (BBE)
And I will send a great disease on the people living in this town, on man and on beast, causing their death.

Darby English Bible (DBY)
And I will smite the inhabitants of this city, both man and beast: they shall die of a great pestilence.

World English Bible (WEB)
I will strike the inhabitants of this city, both man and animal: they shall die of a great pestilence.

Young's Literal Translation (YLT)
And I have smitten the inhabitants of this city, Both man and beast, By a great pestilence do they die.

And
I
will
smite
וְהִכֵּיתִ֗יwĕhikkêtîveh-hee-kay-TEE

אֶתʾetet
inhabitants
the
יֽוֹשְׁבֵי֙yôšĕbēyyoh-sheh-VAY
of
this
הָעִ֣ירhāʿîrha-EER
city,
הַזֹּ֔אתhazzōtha-ZOTE
man
both
וְאֶתwĕʾetveh-ET
and
beast:
הָאָדָ֖םhāʾādāmha-ah-DAHM
die
shall
they
וְאֶתwĕʾetveh-ET
of
a
great
הַבְּהֵמָ֑הhabbĕhēmâha-beh-hay-MA
pestilence.
בְּדֶ֥בֶרbĕdeberbeh-DEH-ver
גָּד֖וֹלgādôlɡa-DOLE
יָמֻֽתוּ׃yāmutûya-moo-TOO

Cross Reference

Zephaniah 1:3
ಮನುಷ್ಯರನ್ನೂ ಮೃಗಗಳನ್ನೂ ನಾಶ ಮಾಡುವೆನು. ಆಕಾಶದ ಪಕ್ಷಿಗಳನ್ನೂ ಸಮುದ್ರದ ವಿಾನುಗಳನ್ನೂ ದುಷ್ಟರ ಸಂಗಡ ಅಭ್ಯಂತರ ಮಾಡುವ ವುಗಳನ್ನೂ ಹಾಳುಮಾಡುವೆನು: ಮನುಷ್ಯರನ್ನು ದೇಶದೊಳಗಿಂದ ಕಡಿದುಬಿಡುವೆನು ಎಂದು ಕರ್ತನು ಅನ್ನುತ್ತಾನೆ.

Isaiah 6:11
ಆಗ ನಾನು ಕರ್ತನೇ, ಇದು ಎಷ್ಟರ ವರೆಗೆ ಅಂದೆನು. ಅದಕ್ಕೆ ಆತನು--ಪಟ್ಟಣಗಳು ನಿವಾಸಿಗಳಿಲ್ಲದೆ, ಮನೆಗಳು ಮನುಷ್ಯ ನಿಲ್ಲದೆ ದೇಶವು ಸಂಪೂರ್ಣವಾಗಿ ಹಾಳಾಗುವ ವರೆಗೆ

Jeremiah 12:3
ಓ ಕರ್ತನೇ, ನೀನು ನನ್ನನ್ನು ತಿಳಿದಿದ್ದೀ; ನನ್ನನ್ನು ನೋಡಿ ನನ್ನ ಹೃದಯವು ನಿನ್ನ ಕಡೆಗೆ ಶೋಧಿಸಿದ್ದೀ; ಕೊಲೆಗೆ ಕುರಿಗಳಂತೆ ಅವ ರನ್ನು ಎಳೆದುಬಿಡು, ಸಂಹಾರದ ದಿನಕ್ಕೆ ಅವರನ್ನು ಸಿದ್ಧಮಾಡು.

Jeremiah 32:24
ಇಗೋ, ಪರ್ವತಗಳು ಪಟ್ಟಣದ ಬಳಿಗೆ ಅದನ್ನು ಹಿಡಿಯುವ ಹಾಗೆ ಬಂದಿವೆ; ಪಟ್ಟಣವು ಅದಕ್ಕೆ ವಿರೋಧವಾಗಿ ಯುದ್ಧ ಮಾಡುವ ಕಸ್ದೀಯರ ಕೈಯಲ್ಲಿ ಕತ್ತಿ, ಕ್ಷಾಮ, ಜಾಡ್ಯಗಳ ಮೂಲಕವಾಗಿ ಒಪ್ಪಿಸಲ್ಪಟ್ಟಿದೆ; ನೀನು ಹೇಳಿದ್ದು ಉಂಟಾಯಿತು; ಇಗೋ, ನೀನು ಅದನ್ನು ನೋಡುತ್ತೀ.

Jeremiah 33:12
ಸೈನ್ಯಗಳ ಕರ್ತನು ಹೇಳುವದೇನಂದರೆ--ಮನುಷ್ಯರೂ ಪಶುಗಳೂ ಇಲ್ಲದೆ ಹಾಳಾದ ಈ ಸ್ಥಳದಲ್ಲಿಯೂ ಅದರ ಎಲ್ಲಾ ಪಟ್ಟಣಗಳಲ್ಲಿಯೂ ಇನ್ನು ಮೇಲೆ ತಮ್ಮ ಮಂದೆಗಳನ್ನು ಮಲಗಿಸುವ ಕುರುಬರ ನಿವಾಸಗಳು ಇರುವವು.

Ezekiel 14:13
ಮನುಷ್ಯಪುತ್ರನೇ, ದೇಶವು ದೊಡ್ಡ ಅಪರಾಧದಿಂದ ನನಗೆ ವಿರುದ್ಧವಾಗಿ ಪಾಪಮಾಡಿದೆ, ನಾನು ಅದರ ಮೇಲೆ ನನ್ನ ಕೈಚಾಚಿ ಅದರ ಜೀವನಾಧಾ ರವನ್ನು ತೆಗೆದುಹಾಕಿ ಕ್ಷಾಮವು ಬರುವ ಹಾಗೆ ಮಾಡಿ ಮನುಷ್ಯರನ್ನೂ ಮೃಗಗಳನ್ನೂ ಅದರೊಳಗಿಂದ ಕಡಿದು ಬಿಡುವಾಗ,

Ezekiel 14:17
ಇಲ್ಲ ದಿದ್ದರೆ ನಾನು ಆ ದೇಶದ ಮೇಲೆ ಕತ್ತಿಯನ್ನು ತರಿಸಿ --ಕತ್ತಿಯೇ, ಆ ದೇಶದಲ್ಲಿ ಹಾದುಹೋಗು ಎಂದು ಹೇಳಿ, ಅದು ಮನುಷ್ಯರನ್ನೂ ಮೃಗಗಳನ್ನೂ ಅದರೊಳ ಗಿಂದ ಕಡಿದುಬಿಟ್ಟಾಗ

Ezekiel 14:19
ಇಲ್ಲದಿದ್ದರೆ ನಾನು ಆ ದೇಶದ ಮೇಲೆ ವ್ಯಾಧಿಯನ್ನು ಕಳುಹಿಸಿ, ಅದರ ಮೇಲೆ ನನ್ನ ರೋಷ ವನ್ನು ರಕ್ತದಲ್ಲಿ ಸುರಿದು, ಮನುಷ್ಯರನ್ನೂ ಮೃಗಗಳನ್ನೂ ಅದರೊಳಗಿಂದ ಕಡಿದುಬಿಟ್ಟರೆ,

Ezekiel 14:21
ದೇವರಾದ ಕರ್ತನು ಹೀಗೆ ಹೇಳುತ್ತಾನೆ; ನಾನು ಕತ್ತಿ ಬರಗಾಲ ದುಷ್ಟಮೃಗ ವ್ಯಾಧಿಗಳೆಂಬ ನನ್ನ ನಾಲ್ಕು ಕಠಿಣವಾದ ನ್ಯಾಯತೀರ್ಪುಗಳನ್ನು ಯೆರೂಸ ಲೇಮಿನ ಮೇಲೆ ಕಳುಹಿಸಿ ಮನುಷ್ಯರನ್ನೂ ಮೃಗಗಳನ್ನೂ ಕಡಿದು ಬಿಟ್ಟ ಮೇಲೆ ಮತ್ತೆ ಏನಾಗುವದು?

Hosea 4:3
ಆದದರಿಂದ ದೇಶವು ದುಃಖಪಡುವದು; ಅದರಲ್ಲಿ ವಾಸಿಸುವ ಪ್ರತಿಯೊಬ್ಬನೂ ಕುಗ್ಗಿ ಹೋಗುವನು; ಅಡವಿಯ ಮೃಗಗಳೂ ಆಕಾಶದ ಪಕ್ಷಿಗಳೂ ಸಮುದ್ರದ ವಿಾನುಗಳೂ ತೆಗೆದುಹಾಕಲ್ಪಡುವವು.

Luke 21:24
ಇದಲ್ಲದೆ ಅವರು ಕತ್ತಿಯ ಬಾಯಿಗೆ ಬೀಳುವರು. ಸೆರೆಯಾಗಿ ಎಲ್ಲಾ ಜನಾಂಗಗಳಲ್ಲಿ ಒಯ್ಯ ಲ್ಪಡುವರು;ಅನ್ಯಜನಗಳ ಕಾಲಗಳು ಪರಿಪೂರ್ಣ ವಾಗುವ ವರೆಗೆ ಯೆರೂಸಲೇಮು ಅನ್ಯಜನಗಳಿಂದ ತುಳಿದಾಡಲ್ಪಡುವದು.

Micah 3:12
ಆದಕಾರಣ ನಿಮ್ಮ ನಿಮಿತ್ತವೇ, ಚೀಯೋನು ಹೊಲದ ಹಾಗೆ ಉಳಲ್ಪಡುವದು; ಯೆರೂಸಲೇಮು ದಿಬ್ಬೆಗಳಾಗುವದು, ಆಲಯದ ಪರ್ವತವು ಅಡವಿಯ ಉನ್ನತ ಸ್ಥಳಗಳ ಹಾಗಾಗುವದು.

Ezekiel 33:29
ಆಮೇಲೆ ಅವರು ಮಾಡಿದ ಎಲ್ಲಾ ಅಸಹ್ಯಗ ಳಿಂದಾಗಿ ನಾನು ಆ ದೇಶವನ್ನು ಸಂಪೂರ್ಣವಾಗಿ ನಾಶಗೊಳಿಸಿದಾಗ ನಾನೇ ಕರ್ತನೆಂದು ಅವರು ತಿಳಿಯುವರು.

Isaiah 24:1
ಇಗೋ, ಕರ್ತನು ಭೂಮಿಯನ್ನು (ಲೋಕವನ್ನು) ಬರಿದುಮಾಡಿ ನಿರ್ಜನ ಪ್ರದೇಶ ವನ್ನಾಗಿ ಮಾಡಿ ತಲೆಕೆಳಕಾಗಿ ತಿರುಗಿಸಿ ಅದರ ನಿವಾಸಿ ಗಳನ್ನು ಚದರಿಸಿಬಿಡುವವನಾಗಿದ್ದಾನೆ.

Jeremiah 7:20
ಆದದರಿಂದ ಕರ್ತ ನಾದ ದೇವರು ಹೀಗೆ ಹೇಳುತ್ತಾನೆ--ಇಗೋ, ಈ ಸ್ಥಳದ ಮೇಲೆಯೂ ಮನುಷ್ಯರ ಮೇಲೆಯೂ ಮೃಗಗಳ ಮೇಲೆಯೂ ಹೊಲದ ಮರಗಳ ಮೇಲೆಯೂ ಭೂಮಿಯ ಫಲದ ಮೇಲೆಯೂ ನನ್ನ ಕೋಪವೂ ಮತ್ತು ಉಗ್ರತೆಯೂ ಹೊಯ್ಯಲ್ಪಡುವದು; ಅದು ಉರಿಯುವದು ಆರಿಹೋಗುವದಿಲ್ಲ.

Jeremiah 14:12
ಅವರು ಉಪವಾಸ ಮಾಡಿದಾಗ್ಯೂ ನಾನು ಅವರ ಮೊರೆಯನ್ನು ಕೇಳುವದಿಲ್ಲ; ಅವರು ದಹನಬಲಿಗಳನ್ನೂ ಕಾಣಿಕೆಗಳನ್ನೂ ಅರ್ಪಿಸಿದಾಗ್ಯೂ ನಾನು ಅವರನ್ನು ಅಂಗೀಕರಿಸುವದಿಲ್ಲ; ಆದರೆ ನಾನು ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯದಿಂದಲೂ ಅವರನ್ನು ನಿರ್ಮೂಲ ಮಾಡಿಬಿಡುತ್ತೇನೆ ಎಂದು ಹೇಳಿದನು.

Jeremiah 34:17
ಆದದರಿಂದ ಕರ್ತನು ಹೀಗೆ ಹೇಳುತ್ತಾನೆ--ಪ್ರತಿಯೊಬ್ಬನು ತನ್ನ ಸಹೋದರನಿಗೂ ಪ್ರತಿ ಮನುಷ್ಯನು ತನ್ನ ನೆರೆಯವನಿಗೂ ಬಿಡುಗಡೆಯನ್ನು ಸಾರುವದರಲ್ಲಿ ನೀವು ನನಗೆ ಕಿವಿಗೊಡಲಿಲ್ಲ. ಇಗೋ, ನಾನು ಕತ್ತಿ, ಬರ, ಜಾಡ್ಯ ಇವುಗಳಿಗಾಗಿ ನಿಮಗೆ ಬಿಡುಗಡೆಯನ್ನು ಸಾರುತ್ತೇನೆ ಎಂದು ಕರ್ತನು ಹೇಳುತ್ತಾನೆ. ಭೂಮಿಯ ಎಲ್ಲಾ ರಾಜ್ಯಗಳಿಗೆ ನಿಮ್ಮನ್ನು ತೆಗೆದು ಹಾಕುವಂತೆ ಮಾಡುವೆನು.

Jeremiah 36:29
ಯೆಹೂದದ ಅರಸನಾದ ಯೆಹೋಯಾಕೀಮನಿಗೆ ನೀನು ಹೇಳತಕ್ಕದ್ದೇನಂದರೆ--ಕರ್ತನು ಹೀಗೆ ಹೇಳು ತ್ತಾನೆ--ಬಾಬೆಲಿನ ಅರಸನು ನಿಶ್ಚಯವಾಗಿ ಬಂದು ಈ ದೇಶವನ್ನು ನಾಶಮಾಡಿ ಮನುಷ್ಯರನ್ನೂ ಪ್ರಾಣ ಗಳನ್ನೂ ಅದರೊಳಗಿಂದ ಹಾಳು ಮಾಡುವದು ಖಂಡಿತ ಎಂದು ಇದರಲ್ಲಿ ಯಾಕೆ ಬರೆದಿದ್ದೀ ಎಂದು ಹೇಳಿ ನೀನು ಈ ಸುರಳಿಯನ್ನು ಸುಟ್ಟಿದ್ದೀ.

Jeremiah 42:22
ನೀವು ವಾಸಿಸುವದಕ್ಕೆ ಹೋಗಲು ಮನಸ್ಸು ಮಾಡುವ ಸ್ಥಳದಲ್ಲಿ ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯದಿಂದಲೂ ಸಾಯುವಿರೆಂದು ಈಗ ನೀವು ನಿಶ್ಚಯವಾಗಿ ತಿಳುಕೊಳ್ಳಿರಿ ಅಂದನು.

Ezekiel 5:12
ನಿನ್ನಲ್ಲಿಯ ಮೂರನೆಯ ಒಂದು ಪಾಲು ವ್ಯಾಧಿಗಳಿಂದ ಸಾಯು ವರು, ಕ್ಷಾಮದಿಂದ ನಿನ್ನಲ್ಲಿ ಅವರು ನಾಶವಾಗುವರು; ಮೂರನೆಯ ಒಂದು ಪಾಲು ನಿನ್ನ ಸುತ್ತಲೂ ಕತ್ತಿಯಿಂದ ಬೀಳುವರು; ಮೂರನೆಯ ಒಂದು ಪಾಲನ್ನು ಎಲ್ಲಾ ದಿಕ್ಕುಗಳಿಗೆ (ಗಾಳಿಗೆ ತೂರಿ) ಚದರಿಸಿ ಅವರ ಮೇಲೆ ಕತ್ತಿಯನ್ನು ಬೀಸುವೆನು.

Ezekiel 7:15
ಹೊರಗೆ ಕತ್ತಿಯೂ ಒಳಗೆ ವ್ಯಾಧಿಯೂ ಕ್ಷಾಮವೂ ಉಂಟು. ಹೊಲದಲ್ಲಿರುವವನನ್ನು ಕತ್ತಿಯು ಸಾಯಿಸುವದು; ಪಟ್ಟಣದಲ್ಲಿರುವವನನ್ನು ವ್ಯಾಧಿಯೂ ಬರವೂ ತಿಂದು ಬಿಡುವದು.

Ezekiel 12:16
ಆದರೆ ಅವರು ಎಲ್ಲಿ ಬರು ವರೋ ಆ ಅನ್ಯಜನಾಂಗಗಳೊಳಗೆ ತಮ್ಮ ಅಸಹ್ಯಗಳ ನ್ನೆಲ್ಲಾ ತಿಳಿಸುವ ಹಾಗೆ ಅವರಲ್ಲಿ ಕೆಲವರನ್ನು ಕತ್ತಿ ಯಿಂದಲೂ ಬರಗಾಲದಿಂದಲೂ ವ್ಯಾಧಿಯಿಂದಲೂ ಉಳಿಸುವೆನು. ಆಗ ನಾನೇ ಕರ್ತನು ಎಂದು ಅವರು ತಿಳಿದುಕೊಳ್ಳುವರು.

Ezekiel 33:27
ನೀನು ಅವರಿಗೆ ಹೇಳಬೇಕಾದ ದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ನನ್ನ ಜೀವದಾಣೆ, ನಿಶ್ಚಯವಾಗಿ ಹಾಳು ಸ್ಥಳಗಳಲ್ಲಿರುವವರು ಕತ್ತಿಯಿಂದ ಬೀಳುವರು; ಬಯಲಿ ನಲ್ಲಿರುವವರಿಗೆ ಮೃಗಗಳನ್ನು ಆಹಾರವನ್ನಾಗಿ ಕೊಡು ತ್ತೇನೆ; ಕೋಟೆಗಳಲ್ಲಿಯೂ ಗುಹೆಗಳಲ್ಲಿಯೂ ಇರುವ ವರು ವ್ಯಾಧಿಗಳಿಂದ ಸಾಯುವರು.

Genesis 6:7
ಇದಲ್ಲದೆ ಕರ್ತನು--ನಾನು ಸೃಷ್ಟಿಸಿದ ಮನುಷ್ಯ ನನ್ನೂ ಮನುಷ್ಯನ ಸಂಗಡ ಸಕಲ ಮೃಗ, ಕ್ರಿಮಿ, ಆಕಾಶದ ಪಕ್ಷಿಗಳನ್ನೂ ಭೂಮುಖದಿಂದ ನಾಶಮಾಡು ವೆನು; ನಾನು ಅವರನ್ನು ಉಂಟುಮಾಡಿದ್ದಕ್ಕೆ ಅದು ಪಶ್ಚಾತ್ತಾಪಪಡುವಂತೆ ಆಯಿತು ಅಂದನು.