2 Kings 25:3
ನಾಲ್ಕನೇ ತಿಂಗಳಿನ ಒಂಭತ್ತನೇ ದಿವಸದಲ್ಲಿ ಪಟ್ಟಣದಲ್ಲಿ ಬರವು ಬಲವಾದದರಿಂದ ದೇಶದ ಜನರಿಗೆ ರೊಟ್ಟಿಯಿಲ್ಲದೆ ಹೋಯಿತು.
2 Kings 25:3 in Other Translations
King James Version (KJV)
And on the ninth day of the fourth month the famine prevailed in the city, and there was no bread for the people of the land.
American Standard Version (ASV)
On the ninth day of the `fourth' month the famine was sore in the city, so that there was no bread for the people of the land.
Bible in Basic English (BBE)
Now on the ninth day of the fourth month, the store of food in the town was almost gone, so that there was no food for the people of the land.
Darby English Bible (DBY)
On the ninth of the [fourth] month the famine prevailed in the city, and there was no bread for the people of the land.
Webster's Bible (WBT)
And on the ninth day of the fourth month the famine prevailed in the city, and there was no bread for the people of the land.
World English Bible (WEB)
On the ninth day of the [fourth] month the famine was sore in the city, so that there was no bread for the people of the land.
Young's Literal Translation (YLT)
on the ninth of the month -- when the famine is severe in the city, and there hath not been bread for the people of the land,
| And on the ninth | בְּתִשְׁעָ֣ה | bĕtišʿâ | beh-teesh-AH |
| month fourth the of day | לַחֹ֔דֶשׁ | laḥōdeš | la-HOH-desh |
| the famine | וַיֶּֽחֱזַ֥ק | wayyeḥĕzaq | va-yeh-hay-ZAHK |
| prevailed | הָֽרָעָ֖ב | hārāʿāb | ha-ra-AV |
| city, the in | בָּעִ֑יר | bāʿîr | ba-EER |
| and there was | וְלֹא | wĕlōʾ | veh-LOH |
| no | הָ֥יָה | hāyâ | HA-ya |
| bread | לֶ֖חֶם | leḥem | LEH-hem |
| people the for | לְעַ֥ם | lĕʿam | leh-AM |
| of the land. | הָאָֽרֶץ׃ | hāʾāreṣ | ha-AH-rets |
Cross Reference
ಯೆಹೆಜ್ಕೇಲನು 14:21
ದೇವರಾದ ಕರ್ತನು ಹೀಗೆ ಹೇಳುತ್ತಾನೆ; ನಾನು ಕತ್ತಿ ಬರಗಾಲ ದುಷ್ಟಮೃಗ ವ್ಯಾಧಿಗಳೆಂಬ ನನ್ನ ನಾಲ್ಕು ಕಠಿಣವಾದ ನ್ಯಾಯತೀರ್ಪುಗಳನ್ನು ಯೆರೂಸ ಲೇಮಿನ ಮೇಲೆ ಕಳುಹಿಸಿ ಮನುಷ್ಯರನ್ನೂ ಮೃಗಗಳನ್ನೂ ಕಡಿದು ಬಿಟ್ಟ ಮೇಲೆ ಮತ್ತೆ ಏನಾಗುವದು?
ಯೆಹೆಜ್ಕೇಲನು 7:15
ಹೊರಗೆ ಕತ್ತಿಯೂ ಒಳಗೆ ವ್ಯಾಧಿಯೂ ಕ್ಷಾಮವೂ ಉಂಟು. ಹೊಲದಲ್ಲಿರುವವನನ್ನು ಕತ್ತಿಯು ಸಾಯಿಸುವದು; ಪಟ್ಟಣದಲ್ಲಿರುವವನನ್ನು ವ್ಯಾಧಿಯೂ ಬರವೂ ತಿಂದು ಬಿಡುವದು.
ಯೆಹೆಜ್ಕೇಲನು 5:12
ನಿನ್ನಲ್ಲಿಯ ಮೂರನೆಯ ಒಂದು ಪಾಲು ವ್ಯಾಧಿಗಳಿಂದ ಸಾಯು ವರು, ಕ್ಷಾಮದಿಂದ ನಿನ್ನಲ್ಲಿ ಅವರು ನಾಶವಾಗುವರು; ಮೂರನೆಯ ಒಂದು ಪಾಲು ನಿನ್ನ ಸುತ್ತಲೂ ಕತ್ತಿಯಿಂದ ಬೀಳುವರು; ಮೂರನೆಯ ಒಂದು ಪಾಲನ್ನು ಎಲ್ಲಾ ದಿಕ್ಕುಗಳಿಗೆ (ಗಾಳಿಗೆ ತೂರಿ) ಚದರಿಸಿ ಅವರ ಮೇಲೆ ಕತ್ತಿಯನ್ನು ಬೀಸುವೆನು.
ಪ್ರಲಾಪಗಳು 4:4
ಮೊಲೆಕೂಸಿನ ನಾಲಿಗೆಯು ದಾಹದಿಂದ ಅಂಗಳಕ್ಕೆ ಹತ್ತುತ್ತದೆ, ಎಳೆಕೂಸುಗಳು ರೊಟ್ಟಿ ಕೇಳುತ್ತವೆ; ಆದರೆ ಅವರಿಗೆ ಯಾರೂ ಕೊಡುವದಿಲ್ಲ.
ಯೆರೆಮಿಯ 52:6
ನಾಲ್ಕನೇ ತಿಂಗಳಲ್ಲಿ, ತಿಂಗಳಿನ ಒಂಭತ್ತನೇ ದಿವಸದಲ್ಲಿ ದೇಶಸ್ಥರಿ ಗೋಸ್ಕರ ರೊಟ್ಟಿ ಇಲ್ಲದೆ ಪಟ್ಟಣದಲ್ಲಿ ಕ್ಷಾಮವು ಕಠಿಣವಾಗಿತ್ತು.
ಯೆರೆಮಿಯ 38:2
ಕರ್ತನು ಹೀಗೆ ಹೇಳುತ್ತಾನೆ--ಈ ಪಟ್ಟಣದಲ್ಲಿ ನಿಲ್ಲುವವನು ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯ ದಿಂದಲೂ ಸಾಯುವನು; ಆದರೆ ಕಸ್ದೀಯರ ಬಳಿಗೆ ಹೊರಗೆ ಹೋಗುವವನು ಬದುಕುವನು; ಅವನ ಪ್ರಾಣವು ಅವನಿಗೆ ಕೊಳ್ಳೆಯಾಗಿರುವದು;
ಧರ್ಮೋಪದೇಶಕಾಂಡ 28:52
ನಿನ್ನ ದೇಶದಲ್ಲೆಲ್ಲಾ ನೀನು ನಂಬಿಕೊಂಡಿರುವ ಉದ್ದವಾದ ಮತ್ತು ಭದ್ರವಾದ ನಿನ್ನ ಗೋಡೆಗಳೆಲ್ಲಾ ಬೀಳುವ ವರೆಗೆ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ಮುತ್ತಿಗೆ ಹಾಕುವದು; ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ನಿನ್ನ ದೇಶದಲ್ಲೆಲ್ಲಾ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ಮುತ್ತಿಗೆಹಾಕುವನು.
ಯಾಜಕಕಾಂಡ 26:26
ನಾನು ನಿಮ್ಮ ಅನ್ನಾಧಾರವನ್ನು ಮುರಿದುಹಾಕಿ ದಾಗ ಹತ್ತು ಸ್ತ್ರೀಯರು ನಿಮ್ಮ ರೊಟ್ಟಿಯನ್ನು ಒಂದೇ ಒಲೆಯಲ್ಲಿ ಸುಟ್ಟು ತೂಕದ ಪ್ರಕಾರ ನಿಮಗೆ ರೊಟ್ಟಿಯನ್ನು ಕೊಡುವರು. ನೀವು ಅದನ್ನು ತಿನ್ನುವಿರಿ; ನಿಮಗೆ ತೃಪ್ತಿಯಾಗುವದಿಲ್ಲ.
ಜೆಕರ್ಯ 8:19
ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--ನಾಲ್ಕನೇ ತಿಂಗಳಿನ ಉಪವಾಸವು, ಐದನೆ ಯದು, ಏಳನೆಯದು, ಹತ್ತನೆಯದು, ಯೆಹೂದದ ಮನೆತನದವರಿಗೆ ಸಂತೋಷವೂ ಸಂಭ್ರಮವೂ ಆನಂದವಾದ ಹಬ್ಬಗಳೂ ಆಗುವವು; ಆದರೆ ಸತ್ಯ ವನ್ನೂ ಸಮಾಧಾನವನ್ನೂ ಪ್ರೀತಿಮಾಡಿರಿ.
ಯೆಹೆಜ್ಕೇಲನು 5:10
ಆದದರಿಂದ ನಿನ್ನ ಮಧ್ಯದಲ್ಲಿ ತಂದೆಗಳೇ ಮಕ್ಕಳನ್ನು ತಿನ್ನುವರು; ಮಕ್ಕಳು ಅವರ ತಂದೆಗಳನ್ನು ತಿನ್ನುವರು; ಹೀಗೆ ನಿನ್ನಲ್ಲಿ ನ್ಯಾಯ ತೀರ್ಪನ್ನು ನಡಿಸುವೆನು. ನಿನ್ನಲ್ಲಿ ಉಳಿದವರನ್ನೆಲ್ಲಾ ಗಾಳಿ ಬೀಸುವ ಎಲ್ಲಾ ದಿಕ್ಕಿಗೂ ಚದರಿಸುವೆನು.
ಯೆಹೆಜ್ಕೇಲನು 4:9
ಇದಲ್ಲದೆ ನೀನು ಗೋಧಿ, ಬಾರ್ಲಿ, ಅವರೆ, ಅಲ ಸಂದಿ, ನವಣೆ, ಸಜ್ಜೆಗಳನ್ನು ತೆಗೆದುಕೊಂಡು ಅವುಗಳನ್ನು ಒಂದು ಮಡಿಕೆಯಲ್ಲಿಟ್ಟು ನೀನು ನಿನ್ನ ಪಾರ್ಶ್ವದಲ್ಲಿ ಮಲಗುವ ದಿವಸಗಳ ಲೆಕ್ಕದ ಪ್ರಕಾರ ನಿನಗಾಗಿ ರೊಟ್ಟಿಯನ್ನು ಮಾಡಿಕೊಂಡು ಮುನ್ನೂರ ತೊಂಭತ್ತು ದಿನಗಳು ಅದರಿಂದಲೇ ತಿನ್ನಬೇಕು.
ಯೆರೆಮಿಯ 39:2
ಚಿದ್ಕೀಯನ ಹನ್ನೊಂದನೇ ವರುಷದಲ್ಲಿ ನಾಲ್ಕನೇ ತಿಂಗಳಿನ ಒಂಭ ತ್ತನೇ ದಿವಸದಲ್ಲಿ ಪಟ್ಟಣವು ಒಡೆಯಲ್ಪಟ್ಟಿತು.
ಯೆರೆಮಿಯ 37:21
ಆಗ ಅರಸನಾದ ಚಿದ್ಕೀ ಯನು ಯೆರೆವಿಾಯನನ್ನು ಸೆರೆಮನೆಯ ಅಂಗಳದಲ್ಲಿ ಇರಿಸಬೇಕೆಂದೂ ಪಟ್ಟಣದಲ್ಲಿರುವ ರೊಟ್ಟಿಯೆಲ್ಲಾ ಮುಗಿದು ಹೋಗುವ ವರೆಗೆ ಅವನಿಗೆ ರೊಟ್ಟಿಗಾರರ ಅಂಗಡಿಯಿಂದ ದಿನಕ್ಕೆ ಒಂದು ತುಂಡು ರೊಟ್ಟಿಕೊಡ ಬೇಕೆಂದೂ ಆಜ್ಞಾಪಿಸಿದನು; ಹಾಗೆಯೇ ಯೆರೆವಿಾ ಯನು ಸೆರೆಮನೆಯ ಅಂಗಳದಲ್ಲಿ ವಾಸಿಸಿದನು.