2 Thessalonians 1:8
ಆತನು (ಕರ್ತನಾದ ಯೇಸು) ದೇವರನ್ನರಿಯ ದವರಿಗೆ ಮತ್ತು ಕರ್ತನಾದ ಯೇಸು ಕ್ರಿಸ್ತನ ಸುವಾರ್ತೆಗೆ ವಿಧೇಯರಾಗದವರಿಗೆ ಉರಿಯುವ ಬೆಂಕಿಯ ಮೂಲಕ ಪ್ರತೀಕಾರ ಮಾಡುವದೂ ದೇವರಿಗೆ ನ್ಯಾಯವಾಗಿದೆ;
2 Thessalonians 1:8 in Other Translations
King James Version (KJV)
In flaming fire taking vengeance on them that know not God, and that obey not the gospel of our Lord Jesus Christ:
American Standard Version (ASV)
rendering vengeance to them that know not God, and to them that obey not the gospel of our Lord Jesus:
Bible in Basic English (BBE)
To give punishment to those who have no knowledge of God, and to those who do not give ear to the good news of our Lord Jesus:
Darby English Bible (DBY)
in flaming fire taking vengeance on those who know not God, and those who do not obey the glad tidings of our Lord Jesus Christ;
World English Bible (WEB)
giving vengeance to those who don't know God, and to those who don't obey the Gospel of our Lord Jesus,
Young's Literal Translation (YLT)
in flaming fire, giving vengeance to those not knowing God, and to those not obeying the good news of our Lord Jesus Christ;
| In | ἐν | en | ane |
| flaming | πυρὶ | pyri | pyoo-REE |
| fire | φλογός | phlogos | floh-GOSE |
| taking | διδόντος | didontos | thee-THONE-tose |
| vengeance | ἐκδίκησιν | ekdikēsin | ake-THEE-kay-seen |
| know that them on | τοῖς | tois | toos |
| μὴ | mē | may | |
| not | εἰδόσιν | eidosin | ee-THOH-seen |
| God, | θεὸν | theon | thay-ONE |
| and | καὶ | kai | kay |
| that obey | τοῖς | tois | toos |
| μὴ | mē | may | |
| not | ὑπακούουσιν | hypakouousin | yoo-pa-KOO-oo-seen |
| the | τῷ | tō | toh |
| gospel | εὐαγγελίῳ | euangeliō | ave-ang-gay-LEE-oh |
| of our | τοῦ | tou | too |
| Lord | κυρίου | kyriou | kyoo-REE-oo |
| Jesus | ἡμῶν | hēmōn | ay-MONE |
| Christ: | Ἰησοῦ | iēsou | ee-ay-SOO |
| Χριστοῦ· | christou | hree-STOO |
Cross Reference
ಇಬ್ರಿಯರಿಗೆ 10:27
ಆದರೆ ಭಯದಿಂದ ಖಂಡಿತವಾಗಿ ಎದುರು ನೋಡತಕ್ಕ ತೀರ್ಪು ವಿರೋಧಿ ಗಳನ್ನು ದಹಿಸುವ ಕೋಪಾಗ್ನಿಯೂ ಇರುವವು.
ಗಲಾತ್ಯದವರಿಗೆ 4:8
ಪೂರ್ವಕಾಲದಲ್ಲಿ ನೀವು ದೇವರನ್ನರಿಯದವರಾಗಿ ಸ್ವಾಭಾವಿಕವಾಗಿ ದೇವರಲ್ಲದವುಗಳನ್ನು ಸೇವಿಸಿದಿರಿ.
ಕೀರ್ತನೆಗಳು 79:6
ನಿನ್ನನ್ನು ತಿಳಿಯದ ಜನಾಂಗ ಗಳ ಮೇಲೆಯೂ ನಿನ್ನ ಹೆಸರನ್ನು ಕರೆಯದ ರಾಜ್ಯಗಳ ಮೇಲೆಯೂ ನಿನ್ನ ಕೋಪವನ್ನು ಹೊಯಿದುಬಿಡು.
ಇಬ್ರಿಯರಿಗೆ 12:29
ಯಾಕಂದರೆ ನಮ್ಮ ದೇವರು ದಹಿಸುವ ಅಗ್ನಿಯಾಗಿದ್ದಾನೆ.
ಮತ್ತಾಯನು 25:41
ಆತನು ಎಡಗಡೆ ಯಲ್ಲಿರುವವರಿಗೆ--ಶಾಪಗ್ರಸ್ತರೇ, ನೀವು ನನ್ನಿಂದ ತೊಲಗಿ ಸೈತಾನನಿಗೂ ಅವನ ದೂತರಿಗೂ ಸಿದ್ಧ ಮಾಡಲ್ಪಟ್ಟ ನಿತ್ಯ ಬೆಂಕಿಯೊಳಗೆ ಹೋಗಿರಿ.
1 ಪೇತ್ರನು 4:17
ದೇವರ ಮನೆಯಲ್ಲಿ ಪ್ರಾರಂಭವಾಗತಕ್ಕ ನ್ಯಾಯ ತೀರ್ಪಿನ ಸಮಯವು ಬಂದದೆ; ಅದು ಮೊದಲು ನಮ್ಮಲ್ಲಿ ಪ್ರಾರಂಭವಾದರೆ ದೇವರ ಸುವಾರ್ತೆಗೆ ಅವಿಧೇಯರಾದವರ ಅಂತ್ಯವು ಏನಾಗಿರುವದು?
2 ಪೇತ್ರನು 3:7
ಆದರೆ ಈಗಿನ ಆಕಾಶಗಳೂ ಭೂಮಿಯೂ ಅದೇ ವಾಕ್ಯದಿಂದ ಭದ್ರವಾಗಿ ಇಡಲ್ಪಟ್ಟಿದ್ದು ನ್ಯಾಯ ತೀರ್ವಿಕೆಯ ದಿನದವರೆಗೂ ಭಕ್ತಿಹೀನರ ನಾಶನಕ್ಕಾಗಿ ಬೆಂಕಿಯು ಕಾದಿಡಲ್ಪಟ್ಟಿದೆ ಎಂಬದು.
2 ಪೇತ್ರನು 3:10
ಆದರೂ ಕರ್ತನ ದಿನವು ರಾತ್ರಿಯಲ್ಲಿ ಕಳ್ಳನು ಬರುವಂತೆ ಬರುತ್ತದೆ. ಆ ದಿನದಲ್ಲಿ ಆಕಾಶಗಳು ಮಹಾಘೋಷದಿಂದ ಇಲ್ಲದೆ ಹೋಗು ವವು. ಅತಿ ಉಷ್ಣದಿಂದ ಪಂಚಭೂತಗಳು ಉರಿದು ಲಯವಾಗಿ ಹೋಗುವವು; ಭೂಮಿಯೂ ಅದರಲ್ಲಿ ರುವ ಕೆಲಸಗಳೂ ಸುಟ್ಟುಹೋಗುವವು.
ಪ್ರಕಟನೆ 20:10
ಇದಲ್ಲದೆ ಅವರನ್ನು ಮರುಳುಗೊಳಿಸಿದ ಸೈತಾನನು ಬೆಂಕಿ ಗಂಧಕಗಳುರಿಯುವ ಕೆರೆಯಲ್ಲಿ ದೊಬ್ಬಲ್ಪಟ್ಟನು; ಅಲ್ಲಿ ಮೃಗವೂ ಸುಳ್ಳು ಪ್ರವಾದಿಯೂ ಕೂಡ ಇದ್ದಾರೆ; ಅವರು ಹಗಲಿರುಳು ಯುಗಯುಗಾಂತರಗಳಲ್ಲಿಯೂ ಯಾತನೆಪಡುತ್ತಿರುವರು.
ಪ್ರಕಟನೆ 20:14
ಆಮೇಲೆ ಮೃತ್ಯುವೂ ನರಕವೂ ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟವು; ಇದೇ ಎರಡನೆಯ ಮರಣವು.
ಗಲಾತ್ಯದವರಿಗೆ 3:1
ಓ ಬುದ್ಧಿಯಿಲ್ಲದ ಗಲಾತ್ಯದವರೇ, ಸತ್ಯಕ್ಕೆ ವಿಧೇಯರಾಗದಂತೆ ನಿಮ್ಮನ್ನು ಯಾರು ಮರುಳುಗೊಳಿಸಿದರು? ಯೇಸು ಕ್ರಿಸ್ತನು ಶಿಲುಬೆಗೆ ಹಾಕಿಸಿಕೊಂಡವನಾಗಿ ನಿಮ್ಮ ಕಣ್ಣೆದುರಿನಲ್ಲಿ ಸ್ಪಷ್ಟವಾಗಿ ವರ್ಣಿಸಲ್ಪಟ್ಟನಲ್ಲವೇ?
2 ಕೊರಿಂಥದವರಿಗೆ 10:5
ನಾವು ಊಹೆಗಳನ್ನು ದೇವಜ್ಞಾನವನ್ನೂ ವಿರೋಧಿ ಸುವದಕ್ಕೆ ಏರಿಸಲ್ಪಟ್ಟಿರುವ ಉನ್ನತವಾದವುಗಳೆಲ್ಲವನ್ನೂ ಕೆಡವಿಹಾಕಿ ಎಲ್ಲಾ ಯೋಚನೆಗಳನ್ನು ಕ್ರಿಸ್ತನಿಗೆ ವಿಧೇಯವಾಗುವಂತೆ ಸೆರೆಹಿಡಿದು
1 ಕೊರಿಂಥದವರಿಗೆ 15:34
ನೀತಿಗಾಗಿ ಎಚ್ಚರಗೊಳ್ಳಿರಿ, ಪಾಪಮಾಡಬೇಡಿರಿ; ಕೆಲವರಿಗೆ ದೇವರ ವಿಷಯವಾದ ಜ್ಞಾನವೇ ಇಲ್ಲ; ನಾನು ಇದನ್ನು ನಿಮಗೆ ನಾಚಿಕೆ ಪಡಿಸುವದಕ್ಕಾಗಿ ಹೇಳುತ್ತೇನೆ.
1 ಥೆಸಲೊನೀಕದವರಿಗೆ 4:5
ದೇವರನ್ನರಿಯದ ಅನ್ಯಜನಗಳಂತೆ ಕಾಮಾಭಿಲಾಷೆಗೆ ಒಳಪಡಬಾರದು.
ರೋಮಾಪುರದವರಿಗೆ 16:26
ಅನಾದಿಯಿಂದ ಗುಪ್ತವಾಗಿದ್ದ ಮರ್ಮವು ಈಗ ಪ್ರಕಾಶಕ್ಕೆ ಬಂದು ನಿತ್ಯನಾದ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಗಳ ಗ್ರಂಥಗಳ ಮೂಲಕ ಅನ್ಯಜನರೆಲ್ಲರಿಗೆ ನಂಬಿಕೆಯೆಂಬ ವಿಧೇಯತ್ವವನ್ನು ಉಂಟುಮಾಡುವದಕ್ಕೋಸ್ಕರ ತಿಳಿಸ ಲ್ಪಟ್ಟಿದೆ.
ರೋಮಾಪುರದವರಿಗೆ 15:18
ಮಾತಿ ನಿಂದಲೂ ಕ್ರಿಯೆಯಿಂದಲೂ ಬಲವಾದ ಸೂಚಕ ಕಾರ್ಯಗಳಿಂದಲೂ ಅದ್ಭುತಕಾರ್ಯಗಳಿಂದಲೂ ದೇವರಾತ್ಮನ ಬಲದಿಂದಲೂ ಅನ್ಯಜನಗಳವರು ವಿಧೇಯರಾಗುವಂತೆ ಕ್ರಿಸ್ತನು ನನ್ನ ಮೂಲಕ ಮಾಡ ದಿರುವವುಗಳನ್ನು ಮಾತನಾಡಲು ನಾನು ಧೈರ್ಯ ಪಡುವದಿಲ್ಲ.
ಪ್ರಕಟನೆ 6:10
ಅವರು--ಓ ಕರ್ತನೇ, ಪರಿಶುದ್ಧನೂ ಸತ್ಯವಂತನೂ ಆಗಿರುವಾತನೇ, ಭೂಮಿಯ ಮೇಲೆ ವಾಸಿಸುವವರು ನಮ್ಮ ರಕ್ತವನ್ನು ಸುರಿಸಿದ್ದಕ್ಕಾಗಿ ನೀನು ಎಷ್ಟು ಕಾಲದವರೆಗೆ ನ್ಯಾಯವಿಚಾರಿಸದೆಯೂ ಪ್ರತಿದಂಡನೆ ಮಾಡದೆಯೂ ಇರುವಿ ಎಂದು ಮಹಾಶಬ್ದದಿಂದ ಕೂಗುತ್ತಾ ಹೇಳಿದರು.
ರೋಮಾಪುರದವರಿಗೆ 10:16
ಆದರೆ ಅವರೆಲ್ಲರೂ ಸುವಾರ್ತೆಗೆ ವಿಧೇಯರಾಗಲಿಲ್ಲ. ಆದದರಿಂದ ಯೆಶಾಯನು--ಕರ್ತನೇ, ನಮ್ಮ ವಾರ್ತೆಯನ್ನು ಯಾರು ನಂಬಿದರು ಅನ್ನುತ್ತಾನೆ.
ಇಬ್ರಿಯರಿಗೆ 2:3
ಎಷ್ಟೋ ದೊಡ್ಡ ಈ ರಕ್ಷಣೆಯನ್ನು ನಾವು ಅಲಕ್ಷ್ಯಮಾಡಿದರೆ ತಪ್ಪಿಸಿ ಕೊಳ್ಳುವದು ಹೇಗೆ? ಇದು ಕರ್ತನಿಂದ ಮೊದಲು ಹೇಳಲಾರಂಭಿಸಿತು. ಆತನಿಂದ ಕೇಳಿದವರು ಇದನ್ನು ನಮಗೆ ಸ್ಥಿರಪಡಿಸಿದರು.
ಇಬ್ರಿಯರಿಗೆ 5:9
ಇದಲ್ಲದೆ ಸಿದ್ಧಿಗೆ ಬಂದು ತನಗೆ ವಿಧೇಯ ರಾಗಿರುವವರೆಲ್ಲರಿಗೂ ನಿರಂತರವಾದ ರಕ್ಷಣೆಗೆ ಆತನು ಕರ್ತನಾದನು.
ಇಬ್ರಿಯರಿಗೆ 10:30
ಮುಯ್ಯಿ ತೀರಿಸುವದು ನನಗೆ ಸಂಬಂಧಪಟ್ಟದ್ದು, ನಾನೇ ಪ್ರತಿಫಲವನ್ನು ಕೊಡುವೆ ನೆಂದು ಹೇಳಿದ ಕರ್ತನನ್ನು ನಾವು ಬಲ್ಲೆವು; ಇದ ಲ್ಲದೆ--ಕರ್ತನು ತನ್ನ ಜನರಿಗೆ ನ್ಯಾಯತೀರಿಸುವ ನೆಂತಲೂ ಹೇಳಿಯದೆ.
ಇಬ್ರಿಯರಿಗೆ 11:8
ನಂಬಿಕೆಯಿಂದಲೇ ಅಬ್ರಹಾಮನು ಕರೆಯ ಲ್ಪಟ್ಟಾಗ ವಿಧೇಯನಾಗಿ ತಾನು ಬಾಧ್ಯವಾಗಿ ಹೊಂದ ಬೇಕಾಗಿದ್ದ ಸ್ಥಳಕ್ಕೆ ಹೊರಟುಹೋದನು; ತಾನು ಹೋಗಬೇಕಾದ ಸ್ಥಳವು ಯಾವದೆಂದು ತಿಳಿಯದೆ ಹೊರಟನು.
1 ಪೇತ್ರನು 1:2
ಪವಿತ್ರಾತ್ಮನಿಂದ ಪ್ರತಿಷ್ಟಿಸಲ್ಪಟ್ಟವರಾಗಿ ವಿಧೇಯರಾ ಗುವದಕ್ಕೂ ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗು ವದಕ್ಕೂ ತಂದೆಯಾದ ದೇವರ ಭವಿಷ್ಯದ್ ಜ್ಞಾನಾನು ಸಾರವಾಗಿ ಆರಿಸಿಕೊಳ್ಳಲ್ಪಟ್ಟವರಿಗೆ ಬರೆಯುವದೇ ನಂದರೆ--ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ.
1 ಪೇತ್ರನು 3:6
ಹಾಗೆಯೇ ಸಾರಳು ಅಬ್ರಹಾಮನಿಗೆ ವಿಧೇಯಳಾಗಿದ್ದು ಅವನನ್ನು ಯಜಮಾನ ಎಂದು ಕರೆದಳು. ನೀವು ಸಾರಳ ಕುಮಾರ್ತೆಗಳಾಗಿದ್ದೀರಲ್ಲಾ; ನೀವು ಒಳ್ಳೇದನ್ನು ಮಾಡುವದಾದರೆ ಯಾವ ಭೀತಿಗೂ ಗಾಬರಿ ಪಡುವದಿಲ್ಲ.
ಪ್ರಕಟನೆ 6:16
ಪರ್ವತಗಳಿಗೂ ಬಂಡೆಗಳಿಗೂ--ನಮ್ಮ ಮೇಲೆ ಬೀಳಿರಿ, ಸಿಂಹಾಸನದ ಮೇಲೆ ಕೂತಿದ್ದಾತನ ಮುಖಕ್ಕೂ ಕುರಿಮರಿಯಾದಾತನ ಕೋಪಕ್ಕೂ ನಮ್ಮನ್ನು ಮರೆಮಾಡಿರಿ;
ಪ್ರಕಟನೆ 21:8
ಆದರೆ ಭಯ ಗ್ರಸ್ಥರು, ನಂಬಿಕೆಯಿಲ್ಲದವರು, ಅಸಹ್ಯವಾದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾ ರಾಧಕರು ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳು ಉರಿಯುವ ಕೆರೆಯೇ; ಅದು ಎರಡನೆಯ ಮರಣವು ಎಂದು ನನಗೆ ಹೇಳಿದನು.
ಧರ್ಮೋಪದೇಶಕಾಂಡ 32:41
ನಾನು ಮಿಂಚುವ ಕತ್ತಿಯನ್ನು ಹದಮಾಡುವಾಗ, ನನ್ನ ಕೈ ನ್ಯಾಯವನ್ನು ಹಿಡುಕೊಳ್ಳುವಾಗ, ನನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸಿ ನನ್ನನ್ನು ಹಗೆಮಾಡುವವರಿಗೆ ಮುಯ್ಯಿ ತೀರಿಸುವೆನು.
ರೋಮಾಪುರದವರಿಗೆ 6:16
ನೀವು ಯಾರಿಗೆ ದಾಸರಂತೆ ವಿಧೇಯರಾಗುತ್ತೇವೆಂದು ನಿಮ್ಮನ್ನು ಒಪ್ಪಿಸಿಕೊಡುತ್ತಿರೋ ಅವರಿಗೆ ದಾಸರಾಗಿಯೇ ವಿಧೇ ಯರಾಗಿರುವಿರೆಂಬದು ನಿಮಗೆ ಗೊತ್ತಿಲ್ಲವೋ? ಪಾಪಕ್ಕೆ ದಾಸರಾದರೆ ಮರಣವೇ; ಇಲ್ಲವೆ ವಿಧೇಯತ್ವಕ್ಕೆ ದಾಸ ರಾದರೆ ನೀತಿಯೇ.
ರೋಮಾಪುರದವರಿಗೆ 2:7
ಯಾರು ಒಳ್ಳೆಯದನ್ನು ಮಾಡುವದರಲ್ಲಿ ತಾಳ್ಮೆಯಿಂದಿದ್ದು ಮಹಿಮೆ ಮಾನ ಮತ್ತು ನಿರ್ಲಯತ್ವವನ್ನು ಹುಡುಕು ತ್ತಾರೋ ಅವರಿಗೆ ನಿತ್ಯಜೀವವನ್ನೂ
ಕೀರ್ತನೆಗಳು 94:1
ಓ ಕರ್ತನೇ, ದೇವರೇ ಮುಯ್ಯಿ ತೀರಿಸುವದು ನಿನ್ನದು; ಓ ದೇವರೇ, ಮುಯ್ಯಿ ತೀರಿಸುವದು ನಿನಗೆ ಸೇರಿದ್ದು. ನಿನ್ನನ್ನು ಪ್ರಕಟಿಸಿಕೋ.
ಕೀರ್ತನೆಗಳು 21:8
ನಿನ್ನ ಶತ್ರು ಗಳೆಲ್ಲಾ ನಿನ್ನ ಕೈಗೆ ಸಿಕ್ಕುವರು; ನಿನ್ನ ಬಲಗೈಗೆ ನಿನ್ನನ್ನು ಹಗೆಮಾಡುವವರು ಸಿಕ್ಕುವರು.
ಕೀರ್ತನೆಗಳು 18:44
ನನ್ನ ಮಾತನ್ನು ಕೇಳಿದೊಡನೆ ಅವರು ನನಗೆ ವಿಧೇಯ ರಾಗುವರು.
ಕೀರ್ತನೆಗಳು 9:10
ನಿನ್ನ ಹೆಸರನ್ನು ತಿಳಿದವರು ನಿನ್ನಲ್ಲಿ ಭರವಸೆ ಇಡು ವರು; ಓ ಕರ್ತನೇ, ನಿನ್ನನ್ನು ಹುಡುಕುವವರನ್ನು ನೀನು ತೊರೆದುಬಿಡಲಿಲ್ಲ.
ಕೀರ್ತನೆಗಳು 2:9
ಕಬ್ಬಿಣದ ಕೋಲಿನಿಂದ ಅವರನ್ನು ಮುರಿದುಬಿಡುವಿ. ಕುಂಬಾರನ ಗಡಿಗೆಯ ಹಾಗೆ ಅವ ರನ್ನು ಒಡೆದು ಚೂರುಚೂರಾಗಿ ಮಾಡಿಬಿಡುವಿ.
1 ಸಮುವೇಲನು 2:12
ಆದರೆ ಏಲಿಯ ಕುಮಾರರು ಕರ್ತನನ್ನು ಅರಿಯದೆ ಬೆಲಿಯಾಳನ ಮಕ್ಕಳಾಗಿದ್ದರು.
ಧರ್ಮೋಪದೇಶಕಾಂಡ 32:35
ಮುಯ್ಯಿಗೆ ಮುಯ್ಯಿ ಕೊಡುವದೂ ಪ್ರತಿಫಲ ಕೊಡುವದೂ ನನ್ನದೇ; ತಕ್ಕ ಕಾಲದಲ್ಲಿ ಅವರ ಕಾಲು ಜಾರುವದು; ಅವರ ಕಳವಳದ ದಿವಸವು ಸವಿಾಪ ವಾಗಿದೆ. ಅವರ ಮೇಲೆ ಬರುವವುಗಳು ಬೇಗ ಬರುತ್ತವೆ.
ಧರ್ಮೋಪದೇಶಕಾಂಡ 5:5
(ಆ ಕಾಲದಲ್ಲಿ ನಾನು ಕರ್ತನ ವಾಕ್ಯವನ್ನು ನಿಮಗೆ ತಿಳಿಸುವ ಹಾಗೆ ಕರ್ತನಿಗೂ ನಿಮಗೂ ನಡುವೆ ನಿಂತಿದ್ದೆನು; ನೀವು ಆ ಬೆಂಕಿಗೆ ಭಯಪಟ್ಟು ಬೆಟ್ಟದ ಮೇಲೆ ಏರಲಿಲ್ಲ.) ಆತನು ಹೇಳಿದ್ದೇನಂದರೆ--
ಧರ್ಮೋಪದೇಶಕಾಂಡ 4:11
ಆಗ ನೀವು ಹತ್ತಿರ ಬಂದು ಬೆಟ್ಟದ ಕೆಳಗೆ ನಿಂತಿರಿ; ಆ ಬೆಟ್ಟವು ಕತ್ತಲೆಯಾ ಗಿದ್ದು ಮೇಘಗಳೂ ಗಾಢಾಂಧಕಾರವೂ ಉಂಟಾಗಿ ಆಕಾಶ ಮಧ್ಯದ ವರೆಗೆ ಬೆಂಕಿಯಿಂದ ಉರಿಯು ತ್ತಿತ್ತು.
ವಿಮೋಚನಕಾಂಡ 5:2
ಫರೋಹನು--ನಾನು ಆತನ ಸ್ವರಕ್ಕೆ ವಿಧೇಯನಾಗಿ ಇಸ್ರಾಯೇಲ್ಯರನ್ನು ಕಳುಹಿಸಿ ಬಿಡುವಂತೆ ಆ ಕರ್ತನು ಯಾರು? ಆ ಕರ್ತನನ್ನು ನಾನರಿಯೆನು ಮತ್ತು ಇಸ್ರಾಯೇಲ್ಯರನ್ನು ಕಳುಹಿಸುವದಿಲ್ಲ ಅಂದನು.
ಆದಿಕಾಂಡ 3:24
ಹೀಗೆ ಆತನು ಮನುಷ್ಯನನ್ನು ಹೊರಗೆ ಹಾಕಿ ಜೀವವೃಕ್ಷಕ್ಕೆ ಹೋಗುವ ದಾರಿಯನ್ನು ಕಾಯುವದಕ್ಕೆ ಏದೆನ್ ತೋಟದ ಪೂರ್ವದಿಕ್ಕಿನಲ್ಲಿ ಕೆರೂಬಿಯರನ್ನೂ ಎಲ್ಲಾ ಕಡೆಯಲ್ಲಿ ಸುತ್ತುವ ಜ್ವಾಲೆಯ ಕತ್ತಿಯನ್ನೂ ಇರಿಸಿದನು.
ಯೆಶಾಯ 1:19
ನೀವು ಒಪ್ಪಿ ವಿಧೇಯರಾದರೆ ದೇಶದ ಮೇಲನ್ನು ಅನುಭವಿಸುವಿರಿ;
ಯೆಶಾಯ 27:11
ಅಲ್ಲಿನ ರೆಂಬೆಗಳು ಒಣಗಿಹೋಗಿ ಮುರಿ ಯಲ್ಪಡುವವು, ಹೆಂಗಸರು ಬಂದು ಅವುಗಳಿಂದ ಬೆಂಕಿ ಹಚ್ಚಿ ಉರಿಸುವರು; ಅದು ವಿವೇಕವುಳ್ಳ ಜನ ವಲ್ಲ. ಆದದರಿಂದ ಅವರನ್ನು ಮಾಡಿದವನು ಅವರಿಗೆ ಕನಿಕರ ತೋರಿಸುವದಿಲ್ಲ. ಅವರನ್ನು ರೂಪಿಸಿದಾತನು ಅವರನ್ನು ಕರುಣಿಸುವದಿಲ್ಲ.
ರೋಮಾಪುರದವರಿಗೆ 1:28
ಇದಲ್ಲದೆ ಅವರು ತಮ್ಮ ತಿಳುವಳಿಕೆಯಿಂದ ದೇವರನ್ನು ಸ್ಮರಿಸುವದಕ್ಕೆ ಮನಸ್ಸಿಲ್ಲದ ಕಾರಣ ದೇವರು ಅವರನ್ನು ಮಾಡಬಾರದವುಗಳನ್ನು ಮಾಡು ವಂತೆ ಅನಿಷ್ಟಭಾವಕ್ಕೆ ಒಪ್ಪಿಸಿದನು.
ರೋಮಾಪುರದವರಿಗೆ 1:5
ಆತನ ಹೆಸರಿಗಾಗಿ ಎಲ್ಲಾ ಜನಾಂಗಗಳವರು ನಂಬಿಕೆಗೆ ವಿಧೇಯರಾಗುವಂತೆ ಆತನಿಂದ ನಾವು ಕೃಪೆಯನ್ನೂ ಅಪೊಸ್ತಲತನವನ್ನೂ ಹೊಂದಿದ್ದೇವೆ.
ಅಪೊಸ್ತಲರ ಕೃತ್ಯಗ 6:7
ಹೀಗೆ ದೇವರ ವಾಕ್ಯವು ಪ್ರಬಲವಾಯಿತು; ಯೆರೂಸಲೇಮಿನಲ್ಲಿ ಶಿಷ್ಯರ ಸಂಖ್ಯೆಯು ಬಹಳವಾಗಿ ಹೆಚ್ಚಿತು; ಇದಲ್ಲದೆ ಯಾಜಕರಲ್ಲಿ ದೊಡ್ಡ ಸಮೂಹವು ನಂಬಿಕೆಗೆ ವಿಧೇಯರಾದರು.
ಯೋಹಾನನು 8:19
ತರುವಾಯ ಅವರು ಆತನಿಗೆ--ನಿನ್ನ ತಂದೆ ಎಲ್ಲಿ ಅಂದರು. ಅದಕ್ಕೆ ಯೇಸು ಪ್ರತ್ಯುತ್ತರ ವಾಗಿ--ನನ್ನನ್ನಾಗಲಿ ನನ್ನ ತಂದೆಯನ್ನಾಗಲಿ ನೀವು ಅರಿತಿಲ್ಲ; ನೀವು ನನ್ನನ್ನು ಅರಿತುಕೊಂಡಿದ್ದರೆ ನನ್ನ ತಂದೆಯನ್ನು ಸಹ ಅರಿತುಕೊಳ್ಳುತ್ತಿದ್ದಿರಿ ಅಂದನು.
ಯೋಹಾನನು 3:19
ಆ ತೀರ್ಪು ಏನಂದರೆ, ಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕ್ರಿಯೆಗಳು ಕೆಟ್ಟವುಗಳಾ ಗಿರುವದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಪ್ರೀತಿ ಮಾಡಿದರು.
ಮತ್ತಾಯನು 25:46
ಇವರು ನಿತ್ಯವಾದ ಶಿಕ್ಷೆಗೆ ಹೋಗುವರು; ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು.
ಚೆಫನ್ಯ 1:6
ಕರ್ತನ ಕಡೆಯಿಂದ ಹಿಂತಿ ರುಗಿದವರನ್ನೂ ಕರ್ತನನ್ನು ಹುಡುಕದೆಯೂ ವಿಚಾರಿಸ ದೆಯೂ ಇರುವವರನ್ನೂ ಕಡಿದುಬಿಡುವೆನು.
ದಾನಿಯೇಲನು 7:10
ಆತನ ಸನ್ನಿಧಾನದಿಂದ ಅಗ್ನಿಪ್ರವಾಹವು ಹೊರಟು ಬಂದಿತು; ಸಹಸ್ರ ಸಹಸ್ರ ವಾಗಿ ಆತನಿಗೆ ಸೇವೆಮಾಡಿದರು. ಲಕ್ಷೋಪಲಕ್ಷ ಆತನ ಮುಂದೆ ನಿಂತಿದ್ದರು. ನ್ಯಾಯಸಭೆಯವರು ಕೂತು ಕೊಂಡರು. ಮತ್ತು ಪುಸ್ತಕಗಳು ತೆರೆಯಲ್ಪಟ್ಟವು.
ಯೆರೆಮಿಯ 9:6
ನಿನ್ನ ನಿವಾಸವು ಮೋಸದ ಮಧ್ಯದಲ್ಲಿ ಅದೆ; ಮೋಸದಿಂದಲೇ ನನ್ನನ್ನು ನಿರಾಕರಿಸು ತ್ತಾರೆಂದು ಕರ್ತನು ಅನ್ನುತ್ತಾನೆ.
ಯೆಶಾಯ 63:4
ಮುಯ್ಯಿ ತೀರಿಸುವ ದಿನವು ನನ್ನ ಹೃದಯದಲ್ಲಿ ಇದೆ; ನಾನು ವಿಮೋಚಿಸಿದವರ ವರುಷವು ಬಂತು.
ಯೆಶಾಯ 61:2
ಕರ್ತನ ಅಂಗೀಕಾರದ ವರುಷವನ್ನು ಸಾರಿ ಹೇಳುವದಕ್ಕೂ ನಮ್ಮ ದೇವರು ಮುಯ್ಯಿಗೆ ಮುಯ್ಯಿ ಕೊಡುವ ದಿವಸವನ್ನು ಪ್ರಸಿದ್ಧಿ ಮಾಡುವದಕ್ಕೂ ದುಃಖವುಳ್ಳವರೆಲ್ಲರನ್ನು ಆದರಿಸುವದಕ್ಕೂ
ಕೀರ್ತನೆಗಳು 50:2
ಸೌಂದರ್ಯದ ಪರಿಪೂರ್ಣತೆಯಾದ ಚೀಯೋನಿ ನಿಂದ ದೇವರು ಪ್ರಕಾಶಿಸಿದ್ದಾನೆ.
ಧರ್ಮೋಪದೇಶಕಾಂಡ 4:30
ನೀನು ಇಕ್ಕಟ್ಟಿಗೆ ಗುರಿಯಾಗಿ ಇವೆಲ್ಲವುಗಳು ನಿನಗೆ ಸಂಭವಿಸಿದಾಗ ಕಡೇ ದಿವಸ ಗಳಲ್ಲಿ ನಿನ್ನ ದೇವರಾದ ಕರ್ತನ ಕಡೆಗೆ ತಿರುಗಿಕೊಂಡು