ಅಪೊಸ್ತಲರ ಕೃತ್ಯಗ 14:15 in Kannada

ಕನ್ನಡ ಕನ್ನಡ ಬೈಬಲ್ ಅಪೊಸ್ತಲರ ಕೃತ್ಯಗ ಅಪೊಸ್ತಲರ ಕೃತ್ಯಗ 14 ಅಪೊಸ್ತಲರ ಕೃತ್ಯಗ 14:15

Acts 14:15
ಅಯ್ಯಗಳಿರಾ, ನೀವು ಇವುಗಳನ್ನು ಯಾಕೆ ಮಾಡು ತ್ತೀರಿ? ನಾವೂ ಮನುಷ್ಯರು, ನಿಮ್ಮಂಥ ಸ್ವಭಾವ ವುಳ್ಳವರು. ನೀವು ಈ ವ್ಯರ್ಥವಾದವುಗಳನ್ನು ಬಿಟ್ಟು ಬಿಟ್ಟು ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ ಅವುಗಳ ಲ್ಲಿರುವ ಸಮಸ್ತವನ್ನೂ ನಿರ್ಮಾಣ ಮಾಡಿದ ಜೀವ ಸ್ವರೂಪನಾದ ದೇವರ ಕಡೆಗೆ ತಿ

Acts 14:14Acts 14Acts 14:16

Acts 14:15 in Other Translations

King James Version (KJV)
And saying, Sirs, why do ye these things? We also are men of like passions with you, and preach unto you that ye should turn from these vanities unto the living God, which made heaven, and earth, and the sea, and all things that are therein:

American Standard Version (ASV)
and saying, Sirs, why do ye these things? We also are men of like passions with you, and bring you good tidings, that ye should turn from these vain things unto a living God, who made the heaven and the earth and the sea, and all that in them is:

Bible in Basic English (BBE)
Good people, why are you doing these things? We are men with the same feelings as you, and we give you the good news so that you may be turned away from these foolish things to the living God, who made the heaven and the earth and the sea and all things in them:

Darby English Bible (DBY)
and saying, Men, why do ye these things? *We* also are men of like passions with you, preaching to you to turn from these vanities to the living God, who made the heaven, and the earth, and the sea, and all things in them;

World English Bible (WEB)
"Men, why are you doing these things? We also are men of like passions with you, and bring you good news, that you should turn from these vain things to the living God, who made the sky and the earth and the sea, and all that is in them;

Young's Literal Translation (YLT)
and saying, `Men, why these things do ye? and we are men like-affected with you, proclaiming good news to you, from these vanities to turn unto the living God, who made the heaven, and the earth, and the sea, and all the things in them;

And
καὶkaikay
saying,
λέγοντεςlegontesLAY-gone-tase
Sirs,
ἌνδρεςandresAN-thrase
why
τίtitee
do
ye
ταῦταtautaTAF-ta
things?
these
ποιεῖτεpoieitepoo-EE-tay
We
καὶkaikay
also
ἡμεῖςhēmeisay-MEES
are
ὁμοιοπαθεῖςhomoiopatheisoh-moo-oh-pa-THEES
men
ἐσμενesmenay-smane
passions
like
of
ὑμῖνhyminyoo-MEEN
with
you,
ἄνθρωποιanthrōpoiAN-throh-poo
and
preach
εὐαγγελιζόμενοιeuangelizomenoiave-ang-gay-lee-ZOH-may-noo
you
unto
ὑμᾶςhymasyoo-MAHS
that
ye
should
turn
ἀπὸapoah-POH
from
τούτωνtoutōnTOO-tone
these
τῶνtōntone

ματαίωνmataiōnma-TAY-one
vanities
ἐπιστρέφεινepistrepheinay-pee-STRAY-feen
unto
ἐπὶepiay-PEE
the
τὸνtontone
living
θεὸνtheonthay-ONE

τὸνtontone
God,
ζῶνταzōntaZONE-ta
which
ὃςhosose
made
ἐποίησενepoiēsenay-POO-ay-sane

τὸνtontone
heaven,
οὐρανὸνouranonoo-ra-NONE
and
καὶkaikay

τὴνtēntane
earth,
γῆνgēngane
and
καὶkaikay
the
τὴνtēntane
sea,
θάλασσανthalassanTHA-lahs-sahn
and
καὶkaikay
all
πάνταpantaPAHN-ta
things
τὰtata
that
are
therein:
ἐνenane

αὐτοῖς·autoisaf-TOOS

Cross Reference

1 ಸಮುವೇಲನು 12:21
ಅವು ವ್ಯರ್ಥ ವಾದವುಗಳೇ ಸರಿ. ಯಾಕಂದರೆ ಕರ್ತನು ತನ್ನ ಮಹತ್ತಾದ ಹೆಸರಿಗೋಸ್ಕರ ತನ್ನ ಜನರನ್ನು ಕೈಬಿಡು ವದಿಲ್ಲ.

ಯಾಕೋಬನು 5:17
ಎಲೀಯನು ನಮ್ಮಂಥ ಸ್ವಭಾವವುಳ್ಳವ ನಾಗಿದ್ದನು; ಅವನು ಮಳೆ ಬರಬಾರದೆಂದು ಆಸಕ್ತಿ ಯಿಂದ ಪ್ರಾರ್ಥಿಸಲು ಮೂರು ವರುಷ ಆರು ತಿಂಗಳ ವರೆಗೂ ಮಳೆ ಬೀಳಲಿಲ್ಲ.

1 ಕೊರಿಂಥದವರಿಗೆ 8:4
ವಿಗ್ರಹಗಳಿಗೆ ಸಮರ್ಪಣೆ ಮಾಡಿದವುಗಳನ್ನು ತಿನ್ನುವದರ ವಿಷ ಯದಲ್ಲಿ ನಾನು ಹೇಳುವದೇನಂದರೆ, ಜಗತ್ತಿನಲ್ಲಿ ವಿಗ್ರಹವು ಏನೂ ಅಲ್ಲವೆಂದೂ ಒಬ್ಬ ದೇವರಿದ್ದಾನೆ ಹೊರತು ಬೇರೆ ದೇವರಿಲ್ಲವೆಂದೂ ನಾವು ಬಲ್ಲೆವು.

ಅಪೊಸ್ತಲರ ಕೃತ್ಯಗ 10:26
ಆದರೆ ಪೇತ್ರನು --ಏಳು, ನಾನು ಸಹ ಮನುಷ್ಯನು ಎಂದು ಹೇಳಿ ಅವನನ್ನು ಎತ್ತಿ

ಯೆರೆಮಿಯ 14:22
ಅನ್ಯರ ವ್ಯರ್ಥ ವಿಗ್ರಹಗಳಲ್ಲಿ ಮಳೆ ಕೊಡಬಲ್ಲವು ಗಳು ಉಂಟೋ? ಅಥವಾ ಆಕಾಶವು ಜಡಿ ಮಳೆ ಯನ್ನು ಕೊಡುವದಕ್ಕಾಗುವದೋ? ನಮ್ಮ ದೇವ ರಾಗಿರುವ ಕರ್ತನು ನೀನೇ ಅಲ್ಲವೋ? ಆದದರಿಂದ ನಿನ್ನನ್ನು ನಿರೀಕ್ಷಿಸುವೆವು; ನೀನೇ ಇವುಗಳನ್ನೆಲ್ಲಾ ಮಾಡುತ್ತೀ.

ಪ್ರಕಟನೆ 14:7
ಅವನು--ದೇವರಿಗೆ ಭಯಪಟ್ಟು ಆತನನ್ನು ಘನಪಡಿಸಿರಿ; ಯಾಕಂದರೆ ಆತನು ನ್ಯಾಯತೀರ್ಪು ಮಾಡುವ ಗಳಿಗೆ ಬಂದದೆ; ಪರಲೋಕವನ್ನೂ ಭೂ ಲೋಕವನ್ನೂ ಸಮುದ್ರವನ್ನೂ ನೀರಿನ ಬುಗ್ಗೆಗಳನ್ನೂ ಉಂಟು ಮಾಡಿದಾತನನ್ನೇ ಆರಾಧಿಸಿರಿ ಎಂದು ಮಹಾ ಶಬ್ದದಿಂದ ಹೇಳಿದನು.

ಧರ್ಮೋಪದೇಶಕಾಂಡ 32:21
ದೇವರಲ್ಲದ್ದರಿಂದ ಅವರು ನನಗೆ ರೋಷ ಹುಟ್ಟಿಸಿ ದರು; ತಮ್ಮ ವ್ಯರ್ಥವಾದವುಗಳಿಂದ ನನಗೆ ಕೋಪ ವನ್ನು ಎಬ್ಬಿಸಿದರು. ಜನವಲ್ಲದ್ದರಿಂದ ನಾನು ಅವರಿಗೆ ರೋಷ ಹುಟ್ಟಿಸುವೆನು; ಮೂಢ ಜನಾಂಗದಿಂದ ಅವರಿಗೆ ಕೋಪವನ್ನೆಬ್ಬಿಸುವೆನು.

1 ಥೆಸಲೊನೀಕದವರಿಗೆ 1:9
ನಾವು ನಿಮ್ಮಲ್ಲಿ ಹೇಗೆ ಪ್ರವೇಶಿಸಿದೆವೆಂಬದನ್ನೂ ನೀವು ಹೇಗೆ ವಿಗ್ರಹಗಳನ್ನು ಬಿಟ್ಟುಬಿಟ್ಟು ದೇವರ ಕಡೆಗೆ ತಿರುಗಿಕೊಂಡು ಜೀವವುಳ್ಳ ಸತ್ಯದೇವರನ್ನು ಸೇವಿಸುವವರಾದಿರೆಂಬದನ್ನೂ ಅವರು ತಾವೇ ಹೇಳುತ್ತಾರೆ.

ಆದಿಕಾಂಡ 1:1
ಆದಿಯಲ್ಲಿ ದೇವರು ಆಕಾಶವನ್ನೂ ಭೂಮಿಯನ್ನೂ ಸೃಷ್ಟಿಸಿದನು.

ಯೆರೆಮಿಯ 8:19
ಏನಂ ದರೆ--ಕರ್ತನು ಚೀಯೋನಿನಲ್ಲಿ ಇಲ್ಲವೋ? ಅವಳ ಅರಸನು ಅವಳಲ್ಲಿ ಇಲ್ಲವೋ ಎಂಬದು. ಅವರು ತಮ್ಮ ವಿಗ್ರಹಗಳಿಂದಲೂ ವಿಚಿತ್ರವಾದ ವ್ಯರ್ಥತ್ವ ಗಳಿಂದಲೂ ನನಗೆ ಕೋಪವನ್ನೆಬ್ಬಿಸಿದ್ದು ಯಾಕೆ?

ಅಪೊಸ್ತಲರ ಕೃತ್ಯಗ 4:24
ಅದನ್ನು ಕೇಳಿದಾಗ ಅವರು ಒಮ್ಮನಸ್ಸಿನಿಂದ ದೇವರಿಗೆ--ಕರ್ತನೇ, ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಸಮಸ್ತವನ್ನೂ ಉಂಟು ಮಾಡಿದ ದೇವರು ನೀನೇ;

ಮತ್ತಾಯನು 16:16
ಅದಕ್ಕೆ ಸೀಮೋನ ಪೇತ್ರನು ಪ್ರತ್ಯುತ್ತರ ವಾಗಿ--ನೀನು ಕ್ರಿಸ್ತನು, ಜೀವವುಳ್ಳ ದೇವರಕುಮಾರನು ಎಂದು ಹೇಳಿದನು.

ಅಪೊಸ್ತಲರ ಕೃತ್ಯಗ 17:24
ಜಗತ್ತನ್ನೂ ಅದರಲ್ಲಿರುವ ಎಲ್ಲವುಗಳನ್ನೂ ಉಂಟುಮಾಡಿದ ದೇವರು ಭೂಮ್ಯಾಕಾಶಗಳ ಒಡೆಯ ನಾಗಿರುವದರಿಂದ ಕೈಯಿಂದ ಕಟ್ಟಿರುವ ಗುಡಿಗಳಲ್ಲಿ ವಾಸಮಾಡುವಾತನಲ್ಲ.

ಅಪೊಸ್ತಲರ ಕೃತ್ಯಗ 26:17
ಈ ಜನರಿಂದ ಮತ್ತು ಈಗ ನಾನು ನಿನ್ನನ್ನು ಕಳುಹಿಸುವ ಅನ್ಯಜನರಿಂದ ನಿನ್ನನ್ನು ಬಿಡಿಸುವದಕ್ಕೂ

ಅಪೊಸ್ತಲರ ಕೃತ್ಯಗ 17:16
ಪೌಲನು ಅವರಿಗೋಸ್ಕರ ಅಥೇನೆಯಲ್ಲಿ ಕಾದುಕೊಂಡಿರುವಾಗ ಆ ಪಟ್ಟಣವೆಲ್ಲಾ ವಿಗ್ರಹಾರಾ ಧನೆಯಿಂದ ತುಂಬಿರುವದನ್ನು ನೋಡಿ ಅವನ ಮನಸ್ಸು ಅವನೊಳಗೆ ಕುದಿಯಿತು.

ಅಪೊಸ್ತಲರ ಕೃತ್ಯಗ 16:30
ಅವರನ್ನು ಹೊರಗೆ ಕರಕೊಂಡು ಬಂದು--ಅಯ್ಯಗಳಿರಾ, ನಾನು ರಕ್ಷಣೆ ಹೊಂದುವದಕ್ಕೆ ಏನು ಮಾಡಬೇಕು ಎಂದು ಕೇಳಲು

ಅಪೊಸ್ತಲರ ಕೃತ್ಯಗ 14:21
ಆ ಪಟ್ಟಣದವರಿಗೆ ಸುವಾರ್ತೆಯನ್ನು ಸಾರಿ ಅನೇಕರಿಗೆ ಬೋಧಿಸಿದ ಮೇಲೆ ಪುನಃ ಹಿಂತಿರುಗಿ ಲುಸ್ತ್ರಕ್ಕೂ ಇಕೋನ್ಯಕ್ಕೂ ಅಂತಿಯೋಕ್ಯಕ್ಕೂ ಬಂದು ಶಿಷ್ಯರ ಮನಸ್ಸುಗಳನ್ನು ದೃಢಪಡಿಸಿದರು.

ಅಪೊಸ್ತಲರ ಕೃತ್ಯಗ 14:7
ಅಲ್ಲಿ ಸುವಾರ್ತೆಯನ್ನು ಸಾರಿದರು.

ಅಪೊಸ್ತಲರ ಕೃತ್ಯಗ 13:32
ಪಿತೃಗಳಿಗೆ ವಾಗ್ದಾನ ಮಾಡಿದ್ದು ಹೇಗೆ ಎಂಬ ಶುಭಸಂದೇಶ ವನ್ನು ನಾವು ನಿಮಗೆ ಪ್ರಕಟಿಸುತ್ತೇವೆ.

1 ತಿಮೊಥೆಯನಿಗೆ 3:15
ಆದರೆ ಒಂದು ವೇಳೆ ನಾನು ತಡಮಾಡಿದರೂ ಸತ್ಯಕ್ಕೆ ಸ್ತಂಭವೂ ಆಧಾರವೂ ಆಗಿರುವ ದೇವರ ಮನೆಯಲ್ಲಿ ಅಂದರೆ ಜೀವಸ್ವರೂಪನಾದ ದೇವರ ಸಭೆಯಲ್ಲಿ ನಡೆದುಕೊಳ್ಳಬೇಕಾದ ರೀತಿಯು ನಿನಗೆ ಗೊತ್ತಾಗಬೇಕು.

ಅಪೊಸ್ತಲರ ಕೃತ್ಯಗ 12:22
ಆಗ ಜನರು--ಇದು ಮನುಷ್ಯನ ಸ್ವರವಲ್ಲ , ದೇವರ ಸ್ವರವೇ ಎಂದು ಅರ್ಭಟಿಸಿದರು.

ಅಪೊಸ್ತಲರ ಕೃತ್ಯಗ 27:10
ಅಯ್ಯಗಳಿರಾ, ಈ ಸಮುದ್ರ ಪ್ರಯಾಣವು ಸರಕಿಗೂ ಹಡಗಿಗೂ ಮಾತ್ರವಲ್ಲದೆ ನಮ್ಮ ಪ್ರಾಣಗಳಿಗೆ ಕೇಡನ್ನೂ ದೊಡ್ಡ ನಷ್ಟವನ್ನೂ ಉಂಟುಮಾಡುವಂತದ್ದಾಗಿದೆ ಎಂದು ನನಗೆ ತೋರು ತ್ತದೆ.

ಅಪೊಸ್ತಲರ ಕೃತ್ಯಗ 27:21
ಆದರೆ ಅವರು ಬಹುಕಾಲ ಆಹಾರವಿಲ್ಲದೆ ಇದ್ದಮೇಲೆ ಪೌಲನು ಅವರ ಮಧ್ಯದಲ್ಲಿ ನಿಂತುಕೊಂಡು--ಅಯ್ಯಗಳಿರಾ, ನೀವು ನನ್ನ ಮಾತು ಕೇಳಿ ಕ್ರೇತದಿಂದ ಹೊರಡದೆ ಇದ್ದಿದ್ದರೆ ನಾವು ಈ ಕಷ್ಟನಷ್ಟಕ್ಕೆ ಗುರಿಯಾಗುತ್ತಿರಲಿಲ್ಲ.

2 ಅರಸುಗಳು 19:4
ಒಂದು ವೇಳೆ ನಿನ್ನ ದೇವರಾದ ಕರ್ತನು, ಜೀವವುಳ್ಳ ದೇವ ರನ್ನು ನಿಂದಿಸಲು ತನ್ನ ಯಜಮಾನನಾದ ಅಶ್ಶೂರಿನ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ಮಾತುಗಳನ್ನು ಕೇಳಿ, ನಿನ್ನ ದೇವರಾದ ಕರ್ತನು ಕೇಳಿದ ಅವನ ಮಾತುಗಳಿಗೋಸ್ಕರ ಅವನನ್ನು ಗದರಿಸುವನು. ಆದ ದರಿಂದ ನೀನು ಉಳಿದವರಿಗೋಸ್ಕರ ಪ್ರಾರ್ಥನೆ ಸಲ್ಲಿಸಬೇಕು ಅಂದನು.

ಪ್ರಕಟನೆ 22:9
ಆಗ ಅವನು ನನಗೆ--ಇದನ್ನು ಮಾಡಬೇಡ ನೋಡು; ಯಾಕಂದರೆ ನಾನು ಪ್ರವಾದಿಗಳಾಗಿರುವ ನಿನ್ನ ಸಹೋದರರಿಗೂ ಈ ಪುಸ್ತಕ ದಲ್ಲಿ ಹೇಳಿರುವವುಗಳನ್ನು ಕೈಕೊಂಡು ನಡೆಯುವವ ರಿಗೂ ಜೊತೆಯ ಸೇವಕನಾಗಿದ್ದೇನೆ; ದೇವರನ್ನು ಆರಾಧಿಸು ಎಂದು ನನಗೆ ಹೇಳಿದನು.

ಪ್ರಕಟನೆ 19:19
ತರುವಾಯ ಆ ಮೃಗವೂ ಭೂರಾಜರೂ ಅವರ ಸೈನ್ಯಗಳೂ ಆ ಕುದುರೆಯ ಮೇಲೆ ಕೂತಿದ್ದಾತನ ಮೇಲೆಯೂ ಆತನ ಸೈನ್ಯದ ಮೇಲೆಯೂ ಯುದ್ಧ ಮಾಡುವದಕ್ಕಾಗಿ ಕೂಡಿಬಂದಿರುವದನ್ನು ನಾನು ಕಂಡೆನು.

ಪ್ರಕಟನೆ 19:10
ಆಗ ನಾನು ಅವನಿಗೆ ಆರಾಧನೆ ಮಾಡಬೇಕೆಂದು ಅವನ ಪಾದಗಳ ಮುಂದೆ ಬೀಳಲು ಅವನು--ನೀನು ಹಾಗೆ ಮಾಡಬೇಡ ನೋಡು, ನಾನು ನಿನಗೂ ಯೇಸುವಿನ ವಿಷಯವಾದ ಸಾಕ್ಷಿಯನ್ನು ಹೊಂದಿದ ನಿನ್ನ ಸಹೋದರ ರಿಗೂ ಜೊತೆಯ ದಾಸನಾಗಿದ್ದೇನೆ; ದೇವರಿಗೆ ಆರಾಧನೆ ಮಾಡು. ಯಾಕಂದರೆ ಯೇಸುವಿನ ವಿಷಯ

ಇಬ್ರಿಯರಿಗೆ 3:12
ಸಹೋದರರೇ, ಎಚ್ಚರಿಕೆಯಿಂದ ನೋಡಿಕೊ ಳ್ಳಿರಿ; ಜೀವಸ್ವರೂಪನಾದ ದೇವರನ್ನು ಬಿಟ್ಟು ಹೋಗುವ ಅಪನಂಬಿಕೆಯುಳ್ಳ ಕೆಟ್ಟ ಹೃದಯವು ನಿಮ್ಮೊಳಗೆ ಯಾವನಲ್ಲಿಯೂ ಇರಬಾರದು.

ಎಫೆಸದವರಿಗೆ 4:17
ಆದದರಿಂದ ಅನ್ಯಜನರು ನಡೆದುಕೊಳ್ಳುವ ಪ್ರಕಾರ ನೀವು ಇನ್ನು ಮೇಲೆ ನಡೆದುಕೊಳ್ಳಬಾರ ದೆಂದು ಕರ್ತನಲ್ಲಿರುವವನಾಗಿ ನಾನು ನಿಮಗೆ ಖಂಡಿತವಾಗಿ ಹೇಳುತ್ತೇನೆ. ಅವರು ನಿಷ್ಪ್ರಯೋಜನ ವಾದ ಬುದ್ಧಿಯುಳ್ಳವರಾಗಿ ನಡೆದುಕೊಳ್ಳುತ್ತಾರೆ;

ರೋಮಾಪುರದವರಿಗೆ 1:20
ಹೇಗೆಂದರೆ ಜಗದು ತ್ಪತ್ತಿಗೆ ಮೊದಲುಗೊಂಡು ಆತನ ಅದೃಶ್ಯವಾದವುಗಳು ಅಂದರೆ ಆತನ ನಿತ್ಯ ಶಕ್ತಿಯೂ ದೈವತ್ವವೂ ಸೃಷ್ಟಿಗಳನ್ನು ಗ್ರಹಿಸುವದರ ಮೂಲಕ ಸ್ಪಷ್ಟವಾಗಿ ಕಾಣಬರುತ್ತವೆ.ಆದಕಾರಣ ಅವರು ನೆವವಿಲ್ಲದವರಾಗಿದ್ದಾರೆ.

ಅಪೊಸ್ತಲರ ಕೃತ್ಯಗ 27:25
ಆದಕಾರಣ ಅಯ್ಯಗಳಿರಾ, ನೀವು ಧೈರ್ಯವಾಗಿರ್ರಿ; ನನಗೆ ಹೇಳಲ್ಪಟ್ಟ ಪ್ರಕಾರವೇ ಆಗುವದೆಂದು ನಾನು ದೇವರನ್ನು ನಂಬುತ್ತೇನೆ.

ಅಪೊಸ್ತಲರ ಕೃತ್ಯಗ 7:26
ಮರುದಿನ ತಾವು ಹೊಡೆದಾಡಿ ಕೊಳ್ಳುತ್ತಿರುವಾಗ ಅವನು ಕಾಣಿಸಿಕೊಂಡು--ಅಯ್ಯಗಳಿರಾ, ನೀವು ಸಹೋದರರಲ್ಲವೇ; ನೀವೇಕೆ ಒಬ್ಬರಿಗೊಬ್ಬರು ಅನ್ಯಾ ಯಮಾಡುತ್ತೀರಿ ಎಂದು ಹೇಳಿ ಅವರನ್ನು ಸಮಾಧಾನ ಪಡಿಸಬೇಕೆಂದಿದ್ದನು.

ಅಪೊಸ್ತಲರ ಕೃತ್ಯಗ 3:12
ಪೇತ್ರನು ಇದನ್ನು ನೋಡಿ ಜನರಿಗೆ--ಇಸ್ರಾ ಯೇಲ್‌ ಜನರೇ, ನೀವು ಯಾಕೆ ಇದಕ್ಕೆ ಆಶ್ಚರ್ಯ ಪಡುತ್ತೀರಿ? ಇಲ್ಲವೆ ನಮ್ಮ ಸ್ವಂತ ಶಕ್ತಿಯಿಂದಾಗಲಿ ಪರಿಶುದ್ಧತೆಯಿಂದಾಗಲಿ ಈ ಮನುಷ್ಯನನ್ನು ನಡೆಯು ವಂತೆ ಮಾಡಿದೆವೋ ಎಂಬಂತೆ ನಮ್ಮ ಮೇಲೆ ಯಾಕೆ ನೀವು ದೃಷ್ಟಿ ಇಟ್ಟು ನೋಡುತ್ತೀರಿ?

ಯೋಹಾನನು 7:18
ತನ್ನ ವಿಷಯವಾಗಿ ತಾನೇ ಮಾತನಾಡುವವನು ತನ್ನ ಸ್ವಂತ ಮಹಿಮೆಯನ್ನು ಹುಡುಕುತ್ತಾನೆ; ಆದರೆ ತನ್ನನ್ನು ಕಳುಹಿಸಿದಾತನ ಮಹಿಮೆಯನ್ನು ಹುಡುಕುವಾತನೇ ಸತ್ಯವಂತನು; ಆತ ನಲ್ಲಿ ಅನೀತಿಯಿಲ್ಲ.

ಙ್ಞಾನೋಕ್ತಿಗಳು 8:23
ನಿತ್ಯತ್ವದಿಂದ ಇಲ್ಲವೆ ಆರಂಭದಿಂದ, ಭೂಮಿಯು ಇರುವದಕ್ಕೆ ಮುಂಚೆ ನಾನು ಸ್ಥಾಪಿಸಲ್ಪ ಟ್ಟೆನು.

ಕೀರ್ತನೆಗಳು 146:5
ಯಾಕೋಬನ ದೇವರನ್ನು ತನ್ನ ಸಹಾಯವನ್ನಾಗಿ ಮಾಡಿಕೊಂಡವನು ಧನ್ಯನು; ಅವನು ತನ್ನ ದೇವರಾದ ಕರ್ತನ ಮೇಲೆ ತನ್ನ ನಿರೀಕ್ಷೆ ಇಡುವನು.

ಕೀರ್ತನೆಗಳು 124:8
ನಮ್ಮ ಸಹಾಯವು ಆಕಾ ಶವನ್ನೂ ಭೂಮಿಯನ್ನೂ ಉಂಟು ಮಾಡಿದ ಕರ್ತನ ಹೆಸರಿನಲ್ಲಿ ಇದೆ.

ಕೀರ್ತನೆಗಳು 33:6
ಕರ್ತನ ವಾಕ್ಯ ದಿಂದ ಆಕಾಶವೂ ಆತನ ಬಾಯಿಯ ಉಸುರಿನಿಂದ ಅದರ ಸೈನ್ಯವೆಲ್ಲವೂ ಉಂಟಾದವು.

ಕೀರ್ತನೆಗಳು 31:6
ವ್ಯರ್ಥವಾದ ಸುಳ್ಳುಗಳನ್ನ ನುಸರಿಸುವವರನ್ನು ನಾನು ಹಗೆಮಾಡುತ್ತೇನೆ; ಆದರೆ ನಾನು ಕರ್ತನಲ್ಲಿ ಭರವಸವಿಡುತ್ತೇನೆ.

2 ಅರಸುಗಳು 19:16
ನೀನೇ ಆಕಾಶವನ್ನೂ ಭೂಮಿಯನ್ನೂ ಉಂಟು ಮಾಡಿದ್ದೀ. ಕರ್ತನೇ, ಕಿವಿ ಕೊಟ್ಟು ಕೇಳು; ಕರ್ತನೆ, ಕಣ್ಣುಗಳನ್ನು ತೆರೆದುನೋಡು. ಸನ್ಹೇರೀಬನು ಜೀವವುಳ್ಳ ದೇವರನ್ನು ನಿಂದಿಸಿ ಕಳುಹಿಸಿದ ಮಾತು ಗಳನ್ನು ಕೇಳು.

1 ಅರಸುಗಳು 16:26
ಅದೇನಂದರೆ, ಅವನು ನೆಬಾಟನ ಮಗನಾದ ಯಾರೊಬ್ಬಾಮನ ಸಕಲ ಮಾರ್ಗಗಳಲ್ಲಿಯೂ ಇಸ್ರಾಯೇಲಿನ ದೇವ ರಾದ ಕರ್ತನಿಗೆ ತಮ್ಮ ವ್ಯರ್ಥವಾದವುಗಳಿಂದ ಕೋಪ ವನ್ನು ಎಬ್ಬಿಸಿದ ಹಾಗೆ ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ಯಾರೊಬ್ಬಾಮನ ಪಾಪದಲ್ಲಿಯೂ ನಡೆದನು.

1 ಅರಸುಗಳು 16:13
ಕರ್ತನು ಪ್ರವಾದಿಯಾದ ಯೇಹುವಿನ ಮುಖಾಂತರ ಬಾಷನಿಗೆ ವಿರೋಧವಾಗಿ ಹೇಳಿದ ಆತನ ವಾಕ್ಯದ ಪ್ರಕಾರವೇ ಜಿಮ್ರಿಯು ಬಾಷನ ಮನೆಯ ವರನ್ನೆಲ್ಲಾ ನಾಶಮಾಡಿದನು.

1 ಸಮುವೇಲನು 17:36
ಹೀಗೆಯೇ ನಿನ್ನ ಸೇವಕನು ಆ ಸಿಂಹವನ್ನೂ ಆ ಕರಡಿಯನ್ನೂ ಕೊಂದು ಬಿಟ್ಟನು. ಸುನ್ನತಿ ಇಲ್ಲದ ಈ ಫಿಲಿಷ್ಟಿಯನು ಜೀವವುಳ್ಳ ದೇವರ ಸೈನ್ಯಗಳನ್ನು ಪ್ರತಿಭಟಿಸಿದ್ದರಿಂದ ಅವುಗಳಲ್ಲಿ ಒಂದರ ಹಾಗೆ ಆಗುವನು ಅಂದನು.

1 ಸಮುವೇಲನು 17:26
ಆಗ ದಾವೀದನು ತನ್ನ ಬಳಿಯಲ್ಲಿ ನಿಂತಿದ್ದ ಮನುಷ್ಯರಿಗೆ--ಈ ಫಿಲಿಷ್ಟಿಯನನ್ನು ಕೊಂದು ಇಸ್ರಾಯೇಲಿನ ಮೇಲಿನಿಂದ ನಿಂದೆಯನ್ನು ತೆಗೆದುಬಿಡುವ ಆ ಮನುಷ್ಯನಿಗೆ ಏನು ಮಾಡಲ್ಪಡುವದು? ಯಾಕಂದರೆ ಸುನ್ನತಿ ಇಲ್ಲದ ಈ ಫಿಲಿಷ್ಟಿಯನು ಜೀವವುಳ್ಳ ದೇವರ ಸೈನ್ಯಗಳನ್ನು ಹೀಯಾ ಳಿಸುವದಕ್ಕೆ ಎಷ್ಟರವನು ಅಂದನು.

ಯೆಹೋಶುವ 3:10
ಯೆಹೋಶು ವನು--ಜೀವವುಳ್ಳ ದೇವರು ನಿಮ್ಮ ಮಧ್ಯದಲ್ಲಿರು ವದನ್ನೂ ಆತನು ಕಾನಾನ್ಯರು ಹಿತ್ತಿಯರು ಹಿವ್ವಿಯರು ಪೆರಿಜೀಯರು ಗಿರ್ಗಾಷಿಯರು ಅಮೋರಿಯರು ಯೊಬೂಸಿಯರು ಇವರನ್ನು ನಿಮ್ಮ ಮುಂದೆ ನಿಶ್ಚಯ ವಾಗಿ ಓಡಿಸಿ ಬಿಡುವದನ್ನೂ ನೀವು ತಿಳಿಯುವ ಹಾಗೆ

ಧರ್ಮೋಪದೇಶಕಾಂಡ 5:26
ಸಮಸ್ತ ಜನರಲ್ಲಿ ಯಾರು ನಮ್ಮ ಹಾಗೆ ಬೆಂಕಿಯೊಳ ಗಿಂದ ಮಾತನಾಡುವ ಜೀವವುಳ್ಳ ದೇವರ ಶಬ್ದವನ್ನು ಕೇಳಿ ಬದುಕಿದರು?

ವಿಮೋಚನಕಾಂಡ 20:11
ಆರು ದಿನಗಳಲ್ಲಿ ಕರ್ತನು ಆಕಾಶವನ್ನೂ ಭೂಮಿಯನ್ನೂ ಸಮುದ್ರ ವನ್ನೂ ಅವುಗಳಲ್ಲಿ ಇರುವವುಗಳೆಲ್ಲವನ್ನೂ ಉಂಟು ಮಾಡಿ ಏಳೆನೆಯ ದಿನದಲ್ಲಿ ವಿಶ್ರಮಿಸಿಕೊಂಡನು. ಆದದರಿಂದ ಕರ್ತನು ಸಬ್ಬತ್‌ ದಿನವನ್ನು ಆಶೀರ್ವದಿಸಿ ಅದನ್ನು ಪರಿಶುದ್ಧಮಾಡಿದನು.

ಯೆಶಾಯ 44:9
ಕೆತ್ತಿದ ವಿಗ್ರಹವನ್ನು ಮಾಡುವವರೆಲ್ಲರೂ ವ್ಯರ್ಥ ರೇ; ಅವರ ಮನೋರಂಜಕ ವಸ್ತುಗಳು ಯಾತಕ್ಕೂ ಬಾರವು; ಅವರು ನೋಡದೆ ಇಲ್ಲವೆ ತಿಳಿಯದೆ, ನಾಚಿಕೆಗೆ ಗುರಿಯಾಗುವಂತೆ ಅವುಗಳೇ ಅವರಿಗೆ ಸ್ವಂತ ಸಾಕ್ಷಿಗಳಾಗಿರುವವು.

ಯೆಶಾಯ 44:19
ನಾನು ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸಿದೆನು; ಹೌದು, ಅದರ ಕೆಂಡದಲ್ಲಿ ರೊಟ್ಟಿಮಾಡಿ ಮಾಂಸವನ್ನು ಸುಟ್ಟು ತಿಂದೆ ನಲ್ಲಾ; ಮಿಕ್ಕಿದ್ದರಲ್ಲಿ ಅಸಹ್ಯವಾದದ್ದನ್ನು ಮಾಡಲೋ, ಮರದ ತುಂಡಿಗೆ ಅಡ್ಡಬೀಳಬಹುದೋ ಅಂದುಕೊಳ್ಳು ವಷ್ಟು ಜ್ಞಾನವಿವೇಕಗಳು ಯಾರಿಗೂ ಇಲ್ಲ, ಯಾರೂ ಇದನ್ನು ಮನಸ್ಸಿಗೆತಾರರು.

ಯೆಶಾಯ 45:18
ಆಕಾಶಗಳನ್ನು ನಿರ್ಮಿಸಿದ ಕರ್ತನು ಇಂತೆನ್ನು ತ್ತಾನೆ--ದೇವರು ತಾನೇ ಭೂಮಿಯನ್ನು ನಿರ್ಮಿಸಿ ಅದನ್ನು ಉಂಟು ಮಾಡಿದನು. ಆತನೇ ಅದನ್ನು ಸ್ಥಾಪಿಸಿದನು; ಅದನ್ನು ವ್ಯರ್ಥವಾಗಿ ಸೃಷ್ಟಿಸದೇ ಜನ ನಿವಾಸಕ್ಕಾಗಿಯೇ ರೂಪಿಸಿದನು; ನಾನೇ ಕರ್ತನು, ಮತ್ತೊಬ್ಬನಿಲ್ಲ.

ಯೋಹಾನನು 5:26
ತಂದೆಯು ಹೇಗೆ ಸ್ವತಃ ಜೀವವುಳ್ಳವನಾಗಿದ್ದಾನೋ ಹಾಗೆಯೇ ಮಗನೂ ಸ್ವತಃ ಜೀವವುಳ್ಳವನಾಗಿರುವಂತೆ ಆತನು ಅನುಗ್ರಹಿಸಿದ್ದಾನೆ.

ಜೆಕರ್ಯ 12:1
ಇಸ್ರಾಯೇಲಿನ ವಿಷಯವಾದ ಕರ್ತನ ವಾಕ್ಯದ ಭಾರವು ಆಕಾಶವನ್ನು ಹರಡಿಸು ವಾತನೂ ಭೂಮಿಯ ಅಸ್ತಿವಾರವನ್ನು ಹಾಕುವಾತನೂ ಮನುಷ್ಯನ ಆತ್ಮವನ್ನು ಅವನೊಳಗೆ ರೂಪಿಸುವಾತನೂ ಆದ ಕರ್ತನು ಹೇಳುವದೇನಂದರೆ--

ಯೋನ 2:8
ಸುಳ್ಳಾದ ವ್ಯರ್ಥತ್ವಗಳನ್ನು ಅನುಸರಿಸುವವರು ತಮ್ಮ ಸ್ವಂತ ಕರುಣೆಯನ್ನು ಮರೆತು ಬಿಡುತ್ತಾರೆ.

ಆಮೋಸ 2:4
ಕರ್ತನು ಹೀಗೆ ಹೇಳುತ್ತಾನೆ--ಯೆಹೂದದ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತವಾಗಿ ಅದಕ್ಕಾಗುವ ದಂಡನೆಯನ್ನು ತಪ್ಪಿಸುವದಿಲ್ಲ; ಅವರು ಕರ್ತನ ನ್ಯಾಯ ಪ್ರಮಾಣವನ್ನು ನಿರಾಕರಿಸಿದರು. ಆತನ ಆಜ್ಞೆಗಳನ್ನು ಕೈಗೊಳ್ಳಲಿಲ್ಲ. ಅವರ ಪಿತೃಗಳು ಅನುಸರಿಸಿದ ಸುಳ್ಳುಗಳೇ ಇವರನ್ನು ತಪ್ಪಿಗಸ್ತರನ್ನಾಗಿ ಮಾಡಿವೆ.

ದಾನಿಯೇಲನು 6:26
ನಾನು ಮಾಡುವ ತೀರ್ಮಾನವೇನಂದರೆ, ನನ್ನ ರಾಜ್ಯದ ಪ್ರತಿಯೊಬ್ಬ ಮನುಷ್ಯರು ದಾನಿಯೇಲನ ದೇವರಿಗೆ ಭಯಭಕ್ತಿ ಯಿಂದ ನಡೆದುಕೊಳ್ಳಬೇಕು. ಯಾಕಂದರೆ ಜೀವವುಳ್ಳ ದೇವರಾಗಿದ್ದು ಎಂದೆಂದಿಗೂ ಸ್ಥಿರವಾದವನು ಆತನೇ. ಆತನ ರಾಜ್ಯವು ನಾಶವಾಗದೆ ಆತನ ಆಳಿಕೆಯು ಶಾಶ್ವತವಾಗಿ ಕೊನೆಯವರೆಗೂ ನಿಲ್ಲುವದು.

ದಾನಿಯೇಲನು 2:28
ಆದರೆ ಈ ರಹಸ್ಯಗಳನ್ನು ಪ್ರಕಟಪಡಿಸುವಂತ ದೇವರು ಪರಲೋಕದಲ್ಲಿದ್ದಾನೆ; ಆತನು ದಿವಸಗಳ ಅಂತ್ಯದಲ್ಲಿ ಸಂಭವಿಸುವಂತವುಗಳನ್ನು ಅರಸನಾದ ನೆಬೂಕದ್ನೆಚ್ಚ ರನಿಗೆ ತಿಳಿಯಪಡಿಸುತ್ತಾನೆ. ನಿನ್ನ ಕನಸಿನಲ್ಲಿ, ನಿನ್ನ ಹಾಸಿಗೆಯಲ್ಲಿ ಬಂದ ನಿನ್ನ ಮನಸ್ಸಿನ ದರ್ಶನಗಳು ಇವೇ ಆಗಿವೆ,

ಯೆರೆಮಿಯ 32:17
ಓ ಕರ್ತನಾದ ದೇವರೇ, ಇಗೋ, ನೀನು ನಿನ್ನ ಮಹಾಬಲದಿಂದ ನಿನ್ನ ಕೈಚಾಚಿ ಆಕಾಶವನ್ನೂ ಭೂಮಿಯನ್ನೂ ಉಂಟುಮಾಡಿದ್ದೀ; ನಿನಗೆ ಕಠಿಣವಾದ ಕಾರ್ಯ ಒಂದೂ ಇಲ್ಲ.

ಯೆರೆಮಿಯ 10:14
ಪ್ರತಿ ಮನುಷ್ಯನು ತನ್ನ ಜ್ಞಾನದಲ್ಲಿ ಪಶುವಾಗಿದ್ದಾನೆ; ಎರಕ ಹೊಯ್ಯುವವರೆಲ್ಲಾ ಕೆತ್ತಿದ ವಿಗ್ರಹಕ್ಕೋಸ್ಕರ ನಾಚಿಕೆಪಡುತ್ತಾರೆ; ಅವರ ಎರಕ ವಿಗ್ರಹವು ಸುಳ್ಳಾದದ್ದು; ಅವುಗಳಲ್ಲಿ ಉಸಿರು ಇಲ್ಲ.

ಯೆರೆಮಿಯ 10:10
ಆದರೆ ಕರ್ತನು ನಿಜವಾದ ದೇವರಾಗಿದ್ದಾನೆ, ಆತನು ಜೀವವುಳ್ಳ ದೇವರೂ ನಿತ್ಯವಾದ ಅರಸನೂ ಆಗಿದ್ದಾನೆ; ಆತನ ರೌದ್ರದಿಂದ ಭೂಮಿ ಕಂಪಿಸುವದು ಆತನ ಉಗ್ರತೆಯನ್ನು ಜನಾಂಗಗಳು ತಾಳಲಾರವು.

ಯೆರೆಮಿಯ 10:8
ಅವರು ಒಟ್ಟಾರೆ ಕ್ರೂರಿಗಳೂ ಮೂರ್ಖರೂ ಆಗಿದ್ದಾರೆ; ಮರವು ವ್ಯರ್ಥವಾದ ಬೋಧನೆಯಾಗಿವೆ.

ಯೆರೆಮಿಯ 10:3
ಜನಗಳ ಪದ್ಧತಿಗಳು ವ್ಯರ್ಥ ವಾಗಿವೆ. ಹೇಗಂದರೆ ಅಡವಿಯಲ್ಲಿ ಒಬ್ಬನು ಮರವನ್ನು ಕಡಿಯುತ್ತಾನೆ; ಅದು ಕೊಡಲಿಯಿಂದ ಬಡಿಗೆಯವನ ಕೈ ಕೆಲಸವೇ

ಯೆಶಾಯ 46:7
ಅವರು ಅದನ್ನು ತಮ್ಮ ಹೆಗಲಿನ ಮೇಲೆ ಹೊತ್ತುಕೊಂಡು ಅದರ ಸ್ಥಳದಲ್ಲಿ ಇಳಿಸಿ ನಿಲ್ಲಿಸುವರು. ಅದು ಅದರ ಸ್ಥಳದಿಂದ ಜರುಗದು. ಹೌದು, ಒಬ್ಬನು ಕೂಗಿ ಕೊಂಡರೂ ಅದು ಅವನಿಗೆ ಉತ್ತರಕೊಡಲಾರದು ಇಲ್ಲವೆ ಅವನನ್ನು ಕಷ್ಟದಿಂದ ರಕ್ಷಿಸಲಾರದು.

ಯೆಶಾಯ 45:20
ಜನಾಂಗಗಳಲ್ಲಿ ತಪ್ಪಿಸಿಕೊಂಡವರಾದ ನೀವು ಒಟ್ಟಾಗಿ ಕೂಡಿಕೊಂಡು ಸವಿಾಪಕ್ಕೆ ಬನ್ನಿರಿ. ಮರದಿಂದ ಕೆತ್ತಿದ ತಮ್ಮ ವಿಗ್ರಹವನ್ನು ಹೊತ್ತು ಕೊಂಡು, ರಕ್ಷಿಸಲಾರದ ಆ ದೇವರಿಗೆ ಬಿನ್ನಹಿಸುವವರು ಏನೂ ತಿಳಿಯದವರಾಗಿದ್ದಾರೆ.

ಆದಿಕಾಂಡ 41:16
ಯೋಸೇಫನು ಫರೋಹನಿಗೆ ಪ್ರತ್ಯು ತ್ತರವಾಗಿ--ನನ್ನಲ್ಲಿ ಅಂಥ ಸಾಮರ್ಥ್ಯವೇನೂ ಇಲ್ಲ; ಆದರೆ ದೇವರು ಫರೋಹನಿಗೆ ಸಮಾಧಾನದ ಉತ್ತರವನ್ನು ಕೊಡುವನು ಅಂದನು.