ಯೆಹೆಜ್ಕೇಲನು 14:13 in Kannada

ಕನ್ನಡ ಕನ್ನಡ ಬೈಬಲ್ ಯೆಹೆಜ್ಕೇಲನು ಯೆಹೆಜ್ಕೇಲನು 14 ಯೆಹೆಜ್ಕೇಲನು 14:13

Ezekiel 14:13
ಮನುಷ್ಯಪುತ್ರನೇ, ದೇಶವು ದೊಡ್ಡ ಅಪರಾಧದಿಂದ ನನಗೆ ವಿರುದ್ಧವಾಗಿ ಪಾಪಮಾಡಿದೆ, ನಾನು ಅದರ ಮೇಲೆ ನನ್ನ ಕೈಚಾಚಿ ಅದರ ಜೀವನಾಧಾ ರವನ್ನು ತೆಗೆದುಹಾಕಿ ಕ್ಷಾಮವು ಬರುವ ಹಾಗೆ ಮಾಡಿ ಮನುಷ್ಯರನ್ನೂ ಮೃಗಗಳನ್ನೂ ಅದರೊಳಗಿಂದ ಕಡಿದು ಬಿಡುವಾಗ,

Ezekiel 14:12Ezekiel 14Ezekiel 14:14

Ezekiel 14:13 in Other Translations

King James Version (KJV)
Son of man, when the land sinneth against me by trespassing grievously, then will I stretch out mine hand upon it, and will break the staff of the bread thereof, and will send famine upon it, and will cut off man and beast from it:

American Standard Version (ASV)
Son of man, when a land sinneth against me by committing a trespass, and I stretch out my hand upon it, and break the staff of the bread thereof, and send famine upon it, and cut off from it man and beast;

Bible in Basic English (BBE)
Son of man, when a land, sinning against me, does wrong, and my hand is stretched out against it, and the support of its bread is broken, and I make it short of food, cutting off man and beast from it:

Darby English Bible (DBY)
Son of man, when a land sinneth against me by working unfaithfulness, and I stretch out my hand upon it, and break the staff of the bread thereof, and send famine upon it, and cut off man and beast from it;

World English Bible (WEB)
Son of man, when a land sins against me by committing a trespass, and I stretch out my hand on it, and break the staff of the bread of it, and send famine on it, and cut off from it man and animal;

Young's Literal Translation (YLT)
`Son of man, the land -- when it sinneth against Me to commit a trespass, and I have stretched out My hand against it, and broken for it the staff of bread, and sent into it famine, and cut off from it man and beast --

Son
בֶּןbenben
of
man,
אָדָ֗םʾādāmah-DAHM
when
אֶ֚רֶץʾereṣEH-rets
land
the
כִּ֤יkee
sinneth
תֶחֱטָאteḥĕṭāʾteh-hay-TA
against
me
by
trespassing
לִי֙liylee
grievously,
לִמְעָלlimʿālleem-AL
then
will
I
stretch
out
מַ֔עַלmaʿalMA-al
hand
mine
וְנָטִ֤יתִיwĕnāṭîtîveh-na-TEE-tee
upon
יָדִי֙yādiyya-DEE
break
will
and
it,
עָלֶ֔יהָʿālêhāah-LAY-ha
the
staff
וְשָׁבַ֥רְתִּיwĕšābartîveh-sha-VAHR-tee
bread
the
of
לָ֖הּlāhla
thereof,
and
will
send
מַטֵּהmaṭṭēma-TAY
famine
לָ֑חֶםlāḥemLA-hem
upon
off
cut
will
and
it,
וְהִשְׁלַחְתִּיwĕhišlaḥtîveh-heesh-lahk-TEE
man
בָ֣הּbāhva
and
beast
רָעָ֔בrāʿābra-AV
from
וְהִכְרַתִּ֥יwĕhikrattîveh-heek-ra-TEE
it:
מִמֶּ֖נָּהmimmennâmee-MEH-na
אָדָ֥םʾādāmah-DAHM
וּבְהֵמָֽה׃ûbĕhēmâoo-veh-hay-MA

Cross Reference

ಯೆಹೆಜ್ಕೇಲನು 4:16
ಇದಾದ ಮೇಲೆ ಆತನು ನನಗೆ ಮನುಷ್ಯ ಪುತ್ರನೇ, ಇಗೋ, ನಾನು ಯೆರೂಸಲೇಮಿನಲ್ಲಿ ಅನ್ನದಾನವನ್ನು ಮುರಿಯುವೆನು. ಅವರು ತೂಕದ ಪ್ರಕಾರ ಜಾಗರೂಕತೆಯಿಂದ ರೊಟ್ಟಿಯನ್ನು ತಿನ್ನುವರು. ನೀರನ್ನು ಅಳತೆಯ ಪ್ರಕಾರ ಆಶ್ಚರ್ಯದಿಂದ ಕುಡಿಯುವರು.

ಯಾಜಕಕಾಂಡ 26:26
ನಾನು ನಿಮ್ಮ ಅನ್ನಾಧಾರವನ್ನು ಮುರಿದುಹಾಕಿ ದಾಗ ಹತ್ತು ಸ್ತ್ರೀಯರು ನಿಮ್ಮ ರೊಟ್ಟಿಯನ್ನು ಒಂದೇ ಒಲೆಯಲ್ಲಿ ಸುಟ್ಟು ತೂಕದ ಪ್ರಕಾರ ನಿಮಗೆ ರೊಟ್ಟಿಯನ್ನು ಕೊಡುವರು. ನೀವು ಅದನ್ನು ತಿನ್ನುವಿರಿ; ನಿಮಗೆ ತೃಪ್ತಿಯಾಗುವದಿಲ್ಲ.

ಯೆಶಾಯ 3:1
ಇಗೋ, ಕರ್ತನು, ಸೈನ್ಯಗಳ ಕರ್ತನೆಂಬ ನಾನು ಜೀವನಕ್ಕೆ ಆಧಾರವಾದ ಅನ್ನಪಾನ ಗಳನ್ನೆಲ್ಲಾ ಯೆರೂಸಲೇಮಿನಿಂದಲೂ ಯೆಹೂದ ದಿಂದಲೂ ತೆಗೆದುಬಿಡುವೆನು.

ಯೆಹೆಜ್ಕೇಲನು 5:16
ನಾನು ನಾಶಕ್ಕಾಗಿ ಇರುವ ಬರಗಾಲದ ಕೆಟ್ಟ ಬಾಣಗಳನ್ನು ಅವರ ಮೇಲೆ ಕಳುಹಿಸುವಾಗ ನಿಮ್ಮನ್ನು ನಾ ಮಾಡುವದಕ್ಕಾಗಿಯೇ ಅವುಗಳನ್ನು ಕಳುಹಿಸುವೆನು; ನಿಮ್ಮ ಮೇಲೆ ಬರಗಾಲವನ್ನು ಹೆಚ್ಚಿಸಿ ನಿಮ್ಮ ಜೀವನಾಧಾರವಾದ ರೊಟ್ಟಿಯನ್ನು ಮುರಿದು ಹಾಕು ತ್ತೇನೆ.

ಯೆಹೆಜ್ಕೇಲನು 14:17
ಇಲ್ಲ ದಿದ್ದರೆ ನಾನು ಆ ದೇಶದ ಮೇಲೆ ಕತ್ತಿಯನ್ನು ತರಿಸಿ --ಕತ್ತಿಯೇ, ಆ ದೇಶದಲ್ಲಿ ಹಾದುಹೋಗು ಎಂದು ಹೇಳಿ, ಅದು ಮನುಷ್ಯರನ್ನೂ ಮೃಗಗಳನ್ನೂ ಅದರೊಳ ಗಿಂದ ಕಡಿದುಬಿಟ್ಟಾಗ

ಯೆಹೆಜ್ಕೇಲನು 14:19
ಇಲ್ಲದಿದ್ದರೆ ನಾನು ಆ ದೇಶದ ಮೇಲೆ ವ್ಯಾಧಿಯನ್ನು ಕಳುಹಿಸಿ, ಅದರ ಮೇಲೆ ನನ್ನ ರೋಷ ವನ್ನು ರಕ್ತದಲ್ಲಿ ಸುರಿದು, ಮನುಷ್ಯರನ್ನೂ ಮೃಗಗಳನ್ನೂ ಅದರೊಳಗಿಂದ ಕಡಿದುಬಿಟ್ಟರೆ,

ಯೆಹೆಜ್ಕೇಲನು 14:21
ದೇವರಾದ ಕರ್ತನು ಹೀಗೆ ಹೇಳುತ್ತಾನೆ; ನಾನು ಕತ್ತಿ ಬರಗಾಲ ದುಷ್ಟಮೃಗ ವ್ಯಾಧಿಗಳೆಂಬ ನನ್ನ ನಾಲ್ಕು ಕಠಿಣವಾದ ನ್ಯಾಯತೀರ್ಪುಗಳನ್ನು ಯೆರೂಸ ಲೇಮಿನ ಮೇಲೆ ಕಳುಹಿಸಿ ಮನುಷ್ಯರನ್ನೂ ಮೃಗಗಳನ್ನೂ ಕಡಿದು ಬಿಟ್ಟ ಮೇಲೆ ಮತ್ತೆ ಏನಾಗುವದು?

ಯೆಹೆಜ್ಕೇಲನು 15:8
ಅವರು ಅತಿಕ್ರಮಿಸಿದ್ದರಿಂದ ನಾನು ಆ ದೇಶವನ್ನು ಹಾಳು ಮಾಡುವೆನೆಂದು ದೇವರಾದ ಕರ್ತನು ಹೇಳುತ್ತಾನೆ.

ದಾನಿಯೇಲನು 9:10
ನಾವು ನಮ್ಮ ದೇವರಾದ ಕರ್ತನ ಸ್ವರಕ್ಕೆ ಕಿವಿಗೊಡದೆ ಆತನು ನಮ್ಮ ಮುಂದೆ ಇಟ್ಟ ಆತನ ಸೇವಕರಾದ ಪ್ರವಾದಿಗಳ ನ್ಯಾಯಪ್ರಮಾಣದಂತೆ ನಡೆಯಲಿಲ್ಲ.

ದಾನಿಯೇಲನು 9:5
ನಾವು ಪಾಪ ಅಕ್ರಮವನ್ನು ಮಾಡಿದ್ದೇವೆ; ಇದಲ್ಲದೆ ಕೆಟ್ಟವರಾಗಿ ನಡೆದು ತಿರುಗಿಬಿದ್ದಿದ್ದೇವೆ; ಅಂದರೆ ನಿನ್ನ ಕಟ್ಟಳೆಗಳನ್ನೂ ನ್ಯಾಯಗಳನ್ನೂ ಬಿಟ್ಟುಹೋಗಿದ್ದೇವೆ.

ಯೆಹೆಜ್ಕೇಲನು 25:13
ಆದದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನೂ ನನ್ನ ಕೈಯನ್ನು ಎದೋಮಿನ ಮೇಲೆ ಚಾಚುತ್ತೇನೆ, ಅದರೊಳಗಿನಿಂದ ಮನುಷ್ಯರನ್ನೂ ಮೃಗಗಳನ್ನೂ ಕಡಿದುಬಿಡುತ್ತೇನೆ, ತೇಮಾನು ಮೊದಲುಗೊಂಡು ಅದನ್ನು ಕಾಡನ್ನಾಗಿ ಮಾಡುತ್ತೇನೆ; ದೆದಾನಿಯವರು ಕತ್ತಿಯಿಂದ ಬೀಳು ವರು.

ಯೆಹೆಜ್ಕೇಲನು 20:27
ಆದದರಿಂದ ಮನುಷ್ಯಪುತ್ರನೇ, ನೀನು ಇಸ್ರಾ ಯೇಲಿನ ಮನೆತನದವರ ಸಂಗಡ ಮಾತಾಡಿ ಅವರಿಗೆ ಹೇಳಬೇಕಾದದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳುತ್ತಾನೆ. ಅದೇನಂದರೆ, ನನಗೆ ವಿರುದ್ಧವಾಗಿ ಬಹಳ ಅಪರಾಧ ಮಾಡಿದ್ದರಲ್ಲಿ ನಿಮ್ಮ ಪಿತೃಗಳು ನನ್ನನ್ನು ದೂಷಿಸಿದರು.

ಯೆಹೆಜ್ಕೇಲನು 9:9
ಆಗ ಆತನು ನನಗೆ ಹೇಳಿದ್ದೇನಂದರೆಇಸ್ರಾಯೇಲಿನ ಮತ್ತು ಯೆಹೂದ ಮನೆತನದವರ ಅಕ್ರಮವು ಅತಿ ದೊಡ್ಡದಾಗಿದೆ; ದೇಶವು ರಕ್ತದಿಂದ ತುಂಬಿದೆ; ಪಟ್ಟಣವು ವಕ್ರತ್ವದಿಂದ ತುಂಬಿದೆ; ಯಾಕಂದರೆ ಕರ್ತನು ಭೂಮಿಯನ್ನು ತೊರೆದುಬಿಟ್ಟಿದ್ದಾನೆ; ಕರ್ತನು ನೋಡುವದಿಲ್ಲ ಎಂದು ಅವರು ಹೇಳುತ್ತಾರೆ.

ಎಜ್ರನು 9:6
ನನ್ನ ದೇವರೇ, ನಾನು ನನ್ನ ಮುಖವನ್ನು ನಿನ್ನ ಮುಂದೆ ಎತ್ತುವಹಾಗೆ ಲಜ್ಜೆಯಿಂದ ನಾಚಿಕೆಪಡು ತ್ತೇನೆ. ನನ್ನ ದೇವರೇ, ನಮ್ಮ ಅಕ್ರಮಗಳು ನಮ್ಮ ತಲೆಯ ಮೇಲೆ ಹೆಚ್ಚಿದವು; ನಮ್ಮ ಅಪರಾಧವು ಆಕಾಶದ ಪರ್ಯಂತರ ಬೆಳೆಯಿತು.

ಯೆಶಾಯ 24:20
ಭೂಮಿಯು ಕುಡುಕನ ಹಾಗೆ ಓಲಾಡು ತ್ತದೆ ಮತ್ತು ಗುಡಿಸಲಿನ ಹಾಗೆ ತೆಗೆಯಲ್ಪಡುತ್ತದೆ ಅದರ ಅಪರಾಧವು ಅದರ ಮೇಲೆ ಭಾರವಾಗಿರುತ್ತದೆ; ಅದು ಬಿದ್ದುಹೋಗುತ್ತದೆ ತಿರಿಗಿ ಏಳುವದೇ ಇಲ್ಲ.

ಯೆರೆಮಿಯ 7:20
ಆದದರಿಂದ ಕರ್ತ ನಾದ ದೇವರು ಹೀಗೆ ಹೇಳುತ್ತಾನೆ--ಇಗೋ, ಈ ಸ್ಥಳದ ಮೇಲೆಯೂ ಮನುಷ್ಯರ ಮೇಲೆಯೂ ಮೃಗಗಳ ಮೇಲೆಯೂ ಹೊಲದ ಮರಗಳ ಮೇಲೆಯೂ ಭೂಮಿಯ ಫಲದ ಮೇಲೆಯೂ ನನ್ನ ಕೋಪವೂ ಮತ್ತು ಉಗ್ರತೆಯೂ ಹೊಯ್ಯಲ್ಪಡುವದು; ಅದು ಉರಿಯುವದು ಆರಿಹೋಗುವದಿಲ್ಲ.

ಯೆರೆಮಿಯ 15:2
ಅವರು ನಿನಗೆ--ನಾವು ಎಲ್ಲಿ ಹೋಗಬೇಕು ಎಂದು ಹೇಳಿದರೆ, ನೀನು ಅವ ರಿಗೆ--ಕರ್ತನು ಹೀಗೆ ಹೇಳುತ್ತಾನೆ--ಮರಣಕ್ಕೆ ಇರುವವರು ಮರಣಕ್ಕೆ; ಕತ್ತಿಗೆ ಇರುವವರು ಕತ್ತಿಗೆ; ಕ್ಷಾಮಕ್ಕೆ ಇರುವವರು ಕ್ಷಾಮಕ್ಕೆ, ಸೆರೆಗೆ ಇರು ವವರು ಸೆರೆಗೆ ಎಂದು ಹೇಳಬೇಕು.

ಯೆರೆಮಿಯ 32:43
ಯಾವದರ ವಿಷಯ--ಅದು ಮನುಷ್ಯರೂ ಪಶುಗಳೂ ಇಲ್ಲದೆ ಹಾಳಾಯಿತು. ಕಸ್ದೀಯರ ಕೈಯಲ್ಲಿ ಒಪ್ಪಿಸಲ್ಪಟ್ಟಿದೆ ಎಂದು ನೀವು ಹೇಳುತ್ತೀರೋ ಆ ದೇಶದಲ್ಲಿ ಇನ್ನು ಹೊಲಗಳು ಕೊಂಡುಕೊಳ್ಳಲ್ಪಡುವವು.

ಯೆರೆಮಿಯ 36:29
ಯೆಹೂದದ ಅರಸನಾದ ಯೆಹೋಯಾಕೀಮನಿಗೆ ನೀನು ಹೇಳತಕ್ಕದ್ದೇನಂದರೆ--ಕರ್ತನು ಹೀಗೆ ಹೇಳು ತ್ತಾನೆ--ಬಾಬೆಲಿನ ಅರಸನು ನಿಶ್ಚಯವಾಗಿ ಬಂದು ಈ ದೇಶವನ್ನು ನಾಶಮಾಡಿ ಮನುಷ್ಯರನ್ನೂ ಪ್ರಾಣ ಗಳನ್ನೂ ಅದರೊಳಗಿಂದ ಹಾಳು ಮಾಡುವದು ಖಂಡಿತ ಎಂದು ಇದರಲ್ಲಿ ಯಾಕೆ ಬರೆದಿದ್ದೀ ಎಂದು ಹೇಳಿ ನೀನು ಈ ಸುರಳಿಯನ್ನು ಸುಟ್ಟಿದ್ದೀ.

ಪ್ರಲಾಪಗಳು 1:8
ಯೆರೂಸ ಲೇಮು ಘೋರವಾಗಿ ಪಾಪಮಾಡಿದೆ; ಆದದರಿಂದ ಅವಳು ತೆಗೆದುಹಾಕಲ್ಪಟ್ಟಿದ್ದಾಳೆ; ಅವಳನ್ನು ಸನ್ಮಾನಿಸಿ ದವರೆಲ್ಲರೂ ಅವಳನ್ನು ಹೀನೈಸುತ್ತಾರೆ; ಅವರು ಅವಳ ಬೆತ್ತಲೆತನವನ್ನು ನೋಡಿದ್ದಾರೆ; ಹೌದು, ಅವಳು ನಿಟ್ಟುಸಿರಿಟ್ಟು ಹಿಂದಕ್ಕೆ ತಿರುಗುತ್ತಾಳೆ.

ಪ್ರಲಾಪಗಳು 1:20
ಓ ಕರ್ತನೇ, ನೋಡು; ನಾನು ಇಕ್ಕಟ್ಟಿನಲ್ಲಿದ್ದೇನೆ. ನನ್ನ ಕರುಳುಗಳು ನನ್ನ ಹೃದಯವು ಮಗಚಿಕೊಂಡಿದೆ. ನಾನು ಘೋರವಾಗಿ ತಿರುಗಿಬಿದ್ದಿದ್ದೇನೆ. ಹೊರಗೆ ಕತ್ತಿ ಯಿಂದ ಸಂಹಾರ, ಮನೆಯೊಳಗೆ ಮರಣ.

ಪ್ರಲಾಪಗಳು 4:9
ಕತ್ತಿಯಿಂದ ಹತರಾದವರು ಹಸಿವೆ ಯಿಂದ ಹತರಾದವರಿಗಿಂತ ಲೇಸು, ಇವರು ಭೂಫಲ ಗಳಿಲ್ಲದೆ ಕ್ಷಾಮದಿಂದ ತಿವಿಯಲ್ಪಟ್ಟು ಕ್ಷೀಣಿಸಿ ಹೋಗುತ್ತಾರೆ.

ಆದಿಕಾಂಡ 6:7
ಇದಲ್ಲದೆ ಕರ್ತನು--ನಾನು ಸೃಷ್ಟಿಸಿದ ಮನುಷ್ಯ ನನ್ನೂ ಮನುಷ್ಯನ ಸಂಗಡ ಸಕಲ ಮೃಗ, ಕ್ರಿಮಿ, ಆಕಾಶದ ಪಕ್ಷಿಗಳನ್ನೂ ಭೂಮುಖದಿಂದ ನಾಶಮಾಡು ವೆನು; ನಾನು ಅವರನ್ನು ಉಂಟುಮಾಡಿದ್ದಕ್ಕೆ ಅದು ಪಶ್ಚಾತ್ತಾಪಪಡುವಂತೆ ಆಯಿತು ಅಂದನು.