ಆದಿಕಾಂಡ 6:11 in Kannada

ಕನ್ನಡ ಕನ್ನಡ ಬೈಬಲ್ ಆದಿಕಾಂಡ ಆದಿಕಾಂಡ 6 ಆದಿಕಾಂಡ 6:11

Genesis 6:11
ಭೂಲೋಕದವರು ದೇವರ ದೃಷ್ಟಿಯಲ್ಲಿ ಕೆಟ್ಟು ಹೋಗಿದ್ದರು; ಭೂಮಿಯು ಬಲಾತ್ಕಾರದಿಂದ ತುಂಬಿತ್ತು.

Genesis 6:10Genesis 6Genesis 6:12

Genesis 6:11 in Other Translations

King James Version (KJV)
The earth also was corrupt before God, and the earth was filled with violence.

American Standard Version (ASV)
And the earth was corrupt before God, and the earth was filled with violence.

Bible in Basic English (BBE)
And the earth was evil in God's eyes and full of violent ways.

Darby English Bible (DBY)
And the earth was corrupt before God, and the earth was full of violence.

Webster's Bible (WBT)
The earth also was corrupt before God; and the earth was filled with violence.

World English Bible (WEB)
The earth was corrupt before God, and the earth was filled with violence.

Young's Literal Translation (YLT)
And the earth is corrupt before God, and the earth is filled `with' violence.

The
earth
וַתִּשָּׁחֵ֥תwattiššāḥētva-tee-sha-HATE
also
was
corrupt
הָאָ֖רֶץhāʾāreṣha-AH-rets
before
לִפְנֵ֣יlipnêleef-NAY
God,
הָֽאֱלֹהִ֑יםhāʾĕlōhîmha-ay-loh-HEEM
earth
the
and
וַתִּמָּלֵ֥אwattimmālēʾva-tee-ma-LAY
was
filled
הָאָ֖רֶץhāʾāreṣha-AH-rets
with
violence.
חָמָֽס׃ḥāmāsha-MAHS

Cross Reference

ಯೆಹೆಜ್ಕೇಲನು 8:17
ಆಗ ಆತನು ನನಗೆ--ಓ ಮನುಷ್ಯಪುತ್ರನೇ, ನೋಡಿ ದೆಯಾ? ಅವರು ಇಲ್ಲಿ ಮಾಡುವ ಅಸಹ್ಯವಾದವುಗಳು ಯೆಹೂದನ ಮನೆತನದವರಿಗಲ್ಲವೇ? ಅವರು ದೇಶವನ್ನು ಹಿಂಸೆಯಿಂದ ತುಂಬಿಸಿದ್ದಲ್ಲದೆ ನನ್ನನ್ನು ಕೆಣಕಬೇಕೆಂದು ಮತ್ತೆ ಯತ್ನಿಸುತ್ತಿದ್ದಾರೆ. ನೋಡು, ಅವರ ಮೂಗಿಗೆ ಕೊಂಬೆಗಳನ್ನಿಟ್ಟು ಕೊಳ್ಳುತ್ತಾರೆ.

ರೋಮಾಪುರದವರಿಗೆ 3:19
ಪ್ರತಿಯೊಂದು ಬಾಯಿ ಮುಚ್ಚಿ ಹೋಗುವಂತೆಯೂ ಲೋಕವೆಲ್ಲಾ ದೇವರ ಮುಂದೆ ದೋಷಿಯಾಗಿರುವಂತೆಯೂ ನ್ಯಾಯ ಪ್ರಮಾಣವು ಹೇಳುವವುಗಳನ್ನು ನ್ಯಾಯಪ್ರಮಾಣಕ್ಕೆ ಒಳಗಾದವರಿಗೆ ಹೇಳುತ್ತದೆಯೆಂದು ನಾವು ಬಲ್ಲೆವು.

ರೋಮಾಪುರದವರಿಗೆ 2:13
(ನ್ಯಾಯ ಪ್ರಮಾಣವನ್ನು ಕೇಳುವವರು ದೇವರ ಸನ್ನಿಧಿಯಲಿ ನೀತಿವಂತರಾಗುವದಿಲ್ಲ; ನ್ಯಾಯಪ್ರಮಾಣವನ್ನು ಕೈ ಕೊಂಡು ನಡೆಯುವವರೇ ನೀತಿವಂತರೆಂದು ಎಣಿಸ ಲ್ಪಡುವರು.

ಲೂಕನು 1:6
ಅವರಿಬ್ಬರೂ ಕರ್ತನ ಎಲ್ಲಾ ಆಜ್ಞೆಗಳನ್ನೂ ನ್ಯಾಯವಿಧಿಗಳನ್ನು ತಪ್ಪಿಲ್ಲದೆ ಕೈಕೊಂಡು ದೇವರ ಮುಂದೆ ನೀತಿವಂತರಾಗಿದ್ದರು.

ಹಬಕ್ಕೂಕ್ಕ 2:17
ಲೆಬನೋನಿನ ಹಿಂಸೆಯು ನಿನ್ನನ್ನು ಮುಚ್ಚುವದು; ಮೃಗಗಳ ಸೂರೆ ನಿನ್ನನ್ನು ಹೆದರಿಸುವದು; ಮನುಷ್ಯರ ರಕ್ತಕ್ಕಾಗಿ, ದೇಶ, ಪಟ್ಟಣ, ಅದರ ಎಲ್ಲಾ ನಿವಾಸಿಗಳ ಹಿಂಸೆಯು ನಿಮಿತ್ತವೇ.

ಹಬಕ್ಕೂಕ್ಕ 2:8
ನೀನು ಅನೇಕ ಜನಾಂಗಗಳನ್ನು ಸೂರೆ ಮಾಡಿದ್ದರಿಂದ ಜನರಲ್ಲಿ ಉಳಿದವರೆಲ್ಲಾ ನಿನ್ನನ್ನು ಸೂರೆ ಮಾಡುವರು; ಮನುಷ್ಯರ ರಕ್ತಕ್ಕಾಗಿ ದೇಶ, ಪಟ್ಟಣ, ಅದರ ಎಲ್ಲಾ ನಿವಾಸಿಗಳ ಬಲಾತ್ಕಾರದ ನಿಮಿತ್ತವೇ.

ಹಬಕ್ಕೂಕ್ಕ 1:2
ಓ ಕರ್ತನೇ, ನಾನು ನಿನಗೆ ಮೊರೆಯಿಟ್ಟರೂ ಎಷ್ಟರ ವರೆಗೆ ನೀನು ಕೇಳದೇ ಇರುವಿ? ಹಿಂಸೆ ಹಿಂಸೆ ಎಂದು ನಿನಗೆ ಕೂಗುತ್ತೇನೆ; ಆದರೆ ನೀನು ರಕ್ಷಿಸುವದಿಲ್ಲ.

ಹೋಶೇ 4:1
ಇಸ್ರಾಯೇಲಿನ ಮಕ್ಕಳಾದ ನೀವು ಕರ್ತನ ವಾಕ್ಯವನ್ನು ಕೇಳಿರಿ; ದೇಶದ ನಿವಾಸಿಗಳ ಸಂಗಡ ಕರ್ತನಿಗೆ ತರ್ಕವುಂಟು; ದೇಶದಲ್ಲಿ ಸತ್ಯವೂ ಇಲ್ಲ, ಕನಿಕರವೂ ಇಲ್ಲ, ಇಲ್ಲವೆ ದೇವರ ತಿಳುವಳಿ ಕೆಯೂ ಇಲ್ಲ.

ಯೆಹೆಜ್ಕೇಲನು 28:16
ನಿನ್ನ ಮಿತಿಯಿಲ್ಲದ ವ್ಯಾಪಾರದಿಂದ ನಿನ್ನಲ್ಲಿ ಬಲಾತ್ಕಾರವು ತುಂಬಿ ನೀನು ಪಾಪಿಯಾದಿ; ಆದದರಿಂದ ನಿನ್ನನ್ನು ಅಪವಿತ್ರನೆಂದು ದೇವರ ಪರ್ವತದೊಳಗಿನಿಂದ ನಾನು ಬಿಸಾಡುವೆನು. ಓ ಮುಚ್ಚುವ ಕೆರೂಬಿಯೇ, ಬೆಂಕಿಯ ಕಲ್ಲುಗಳ ಮಧ್ಯದಿಂದ ನಿನ್ನನ್ನು ನಾಶಮಾಡುವೆನು.

ಯೆರೆಮಿಯ 6:7
ಬುಗ್ಗೆಯು ತನ್ನ ನೀರನ್ನು ಹರಿಯ ಮಾಡುವ ಹಾಗೆ ಅವಳು ತನ್ನ ಕೆಟ್ಟತನವನ್ನು ಹರಿಯ ಮಾಡುತ್ತಾಳೆ; ಬಲಾತ್ಕಾರವೂ ಸುಲಿಗೆಯೂ ಅವಳಲ್ಲಿ ಕೇಳಬರುತ್ತವೆ. ದುಃಖವೂ ಗಾಯಗಳೂ ಯಾವಾ ಗಲೂ ನನ್ನ ಮುಂದೆ ಅವೆ.

ಯೆಶಾಯ 60:18
ಬಲಾತ್ಕಾರವೂ ನಿನ್ನ ದೇಶದೊಳಗೆ ಹಾಳಾದದ್ದೂ ನಾಶವೂ ನಿನ್ನ ಮೇರೆ ಗಳಲ್ಲಿ ಕೇಳಲ್ಪಡುವದಿಲ್ಲ; ನಿನ್ನ ಗೋಡೆಗಳಿಗೆ ರಕ್ಷಣೆ ಎಂದೂ ನಿನ್ನ ಬಾಗಿಲುಗಳಿಗೆ ಸ್ತೋತ್ರವೆಂದೂ ಹೆಸರಿ ಡುವಿ.

ಕೀರ್ತನೆಗಳು 140:11
ಕೆಟ್ಟದ್ದನ್ನು ಮಾತನಾಡುವವನು ಭೂಮಿ ಯಲ್ಲಿ ಸ್ಥಿರವಾಗದಿರಲಿ; ಬಲಾತ್ಕಾರಿಯನ್ನು ಕೆಡವು ವದಕ್ಕೆ ಕೇಡು ಅವನನ್ನು ಬೇಟೆಯಾಡುವದು.

ಕೀರ್ತನೆಗಳು 55:9
ಓ ಕರ್ತನೇ, (ಅವರನ್ನು) ನಾಶಮಾಡು. ಅವರ ನಾಲಿಗೆಗಳನ್ನು ಭೇದಿಸು; ಯಾಕಂದರೆ ಬಲಾತ್ಕಾರ ವನ್ನೂ ವಿವಾದವನ್ನೂ ಪಟ್ಟಣದಲ್ಲಿ ನಾನು ನೋಡಿ ದ್ದೇನೆ;

ಕೀರ್ತನೆಗಳು 11:5
ಕರ್ತನು ನೀತಿ ವಂತನನ್ನು ಶೋಧಿಸುತ್ತಾನೆ; ಆದರೆ ದುಷ್ಟನನ್ನೂ ಬಲಾತ್ಕಾರ ಪ್ರಿಯನನ್ನೂ ಆತನ ಪ್ರಾಣವು ಹಗೆ ಮಾಡುತ್ತದೆ.

2 ಪೂರ್ವಕಾಲವೃತ್ತಾ 34:27
ನೀನು ಈ ಸ್ಥಳಕ್ಕೆ ವಿರೋಧ ವಾಗಿಯೂ ಅದರ ನಿವಾಸಿಗಳಿಗೆ ವಿರೋಧವಾಗಿಯೂ ದೇವರು ಹೇಳಿದ ಮಾತುಗಳನ್ನು ನೀನು ಕೇಳಿದಾಗ ನಿನ್ನ ಹೃದಯವು ಮೆತ್ತಗಾಗಿ ನೀನು ಆತನ ಮುಂದೆ ನಿನ್ನನ್ನು ತಗ್ಗಿಸಿಕೊಂಡಿ. ನಿನ್ನನ್ನು ನನ್ನ ಮುಂದೆ ತಗ್ಗಿಸಿ ಕೊಂಡು ನಿನ್ನ ವಸ್ತ್ರಗಳನ್ನು ಹರಿದುಕೊಂಡು ನನ್ನ ಮುಂದೆ ಅತ್ತದ್ದರಿಂದ ನಾನು ಅವನ ಮೊರೆಯನ್ನು ಕೇಳಿದೆನೆಂದು ಕರ್ತನು ಹೇಳುತ್ತಾನೆ.

ಆದಿಕಾಂಡ 13:13
ಆದರೆ ಸೊದೋಮಿನ ಮನುಷ್ಯರು ದುಷ್ಟರೂ ಕರ್ತನ ದೃಷ್ಟಿಯಲ್ಲಿ ಬಹು ಪಾಪಿಷ್ಠರೂ ಆಗಿದ್ದರು.

ಆದಿಕಾಂಡ 10:9
ಅವನು ಕರ್ತನ ಮುಂದೆ ಬಲಿಷ್ಠನಾದ ಬೇಟೆಗಾರನಾಗಿದ್ದನು. ಆದದರಿಂದ--ಕರ್ತನ ಮುಂದೆ ಬಲಿಷ್ಠನಾದ ಬೇಟೆ ಗಾರನಾಗಿದ್ದ ನಿಮ್ರೋದನು ಎಂಬ ಮಾತು ಹೇಳ ಲ್ಪಟ್ಟಿತು.

ಆದಿಕಾಂಡ 7:1
ಕರ್ತನು ನೋಹನಿಗೆ--ನೀನೂ ನಿನ್ನ ಮನೆಯವರೆಲ್ಲರೂ ನಾವೆಯೊಳಗೆ ಬನ್ನಿರಿ; ಯಾಕಂದರೆ ಈ ಸಂತತಿಯಲ್ಲಿ ನೀನೊಬ್ಬನೇ ನನ್ನ ಮುಂದೆ ನೀತಿವಂತನಾಗಿರುವದನ್ನು ನಾನು ನೋಡಿ ದ್ದೇನೆ.