ಅಪೊಸ್ತಲರ ಕೃತ್ಯಗ 2:40 in Kannada

ಕನ್ನಡ ಕನ್ನಡ ಬೈಬಲ್ ಅಪೊಸ್ತಲರ ಕೃತ್ಯಗ ಅಪೊಸ್ತಲರ ಕೃತ್ಯಗ 2 ಅಪೊಸ್ತಲರ ಕೃತ್ಯಗ 2:40

Acts 2:40
ಅವನು ಇನ್ನೂ ಬೇರೆ ಅನೇಕ ಮಾತುಗಳಿಂದ ಸಾಕ್ಷಿಕೊಟ್ಟು--ಈ ಮೂರ್ಖ ಸಂತತಿಯವರಿಂದ ನಿಮ್ಮನ್ನು ನೀವು ರಕ್ಷಿಸಿಕೊಳ್ಳಿರಿ ಎಂದು ಎಚ್ಚರಿಸಿ ಹೇಳಿದನು.

Acts 2:39Acts 2Acts 2:41

Acts 2:40 in Other Translations

King James Version (KJV)
And with many other words did he testify and exhort, saying, Save yourselves from this untoward generation.

American Standard Version (ASV)
And with many other words he testified, and exhorted them, saying, Save yourselves from this crooked generation.

Bible in Basic English (BBE)
And with more such words he gave his witness, offering them salvation and saying, Come out from this evil generation.

Darby English Bible (DBY)
And with many other words he testified and exhorted them, saying, Be saved from this perverse generation.

World English Bible (WEB)
With many other words he testified, and exhorted them, saying, "Save yourselves from this crooked generation!"

Young's Literal Translation (YLT)
Also with many more other words he was testifying and exhorting, saying, `Be saved from this perverse generation;'

And
ἑτέροιςheteroisay-TAY-roos
with
many
τεtetay
other
λόγοιςlogoisLOH-goos
words
πλείοσινpleiosinPLEE-oh-seen
did
he
testify
διεμαρτύρετοdiemartyretothee-ay-mahr-TYOO-ray-toh
and
καὶkaikay
exhort,
παρεκάλειparekaleipa-ray-KA-lee
saying,
λέγων,legōnLAY-gone
Save
yourselves
ΣώθητεsōthēteSOH-thay-tay
from
ἀπὸapoah-POH
this
τῆςtēstase

γενεᾶςgeneasgay-nay-AS
untoward
τῆςtēstase

σκολιᾶςskoliasskoh-lee-AS
generation.
ταύτηςtautēsTAF-tase

Cross Reference

ಮತ್ತಾಯನು 17:17
ಆಗ ಯೇಸು ಪ್ರತ್ಯುತ್ತರ ವಾಗಿ--ನಂಬಿಕೆಯಿಲ್ಲದ ಓ ಮೂರ್ಖ ಸಂತತಿಯೇ, ಎಷ್ಟು ಕಾಲ ನಾನು ನಿಮ್ಮೊಂದಿಗಿರಲಿ? ಎಷ್ಟು ಕಾಲ ನಾನು ನಿಮ್ಮನ್ನು ಸಹಿಸಲಿ? ಅವನನ್ನು ನನ್ನ ಬಳಿಗೆ ತಕ್ಕೊಂಡು ಬನ್ನಿರಿ ಎಂದು ಹೇಳಿದನು.

ಧರ್ಮೋಪದೇಶಕಾಂಡ 32:5
ಅವರು ತಮ್ಮನ್ನು ತಾವೇ ಕೆಡಿಸಿಕೊಂಡರು. ಅವರ ಗುರುತು ಆತನ ಮಕ್ಕಳಲ್ಲದವರ ಗುರುತು. ಅವರು ಮೂರ್ಖರಾದ ವಕ್ರಸಂತತಿಯೇ.

2 ಕೊರಿಂಥದವರಿಗೆ 5:20
ದೇವರೇ ನಮ್ಮ ಮೂಲಕ ನಿಮ್ಮನ್ನು ಬೇಡಿ ಕೊಳ್ಳುತ್ತಾನೋ ಎಂಬಂತೆ ನಾವು ಈಗ ಕ್ರಿಸ್ತನ ರಾಯಭಾರಿಗಳಾಗಿದ್ದೇವೆ. ದೇವರೊಂದಿಗೆ ಸಮಾ ಧಾನವಾಗಿರೆಂದು ಕ್ರಿಸ್ತನಿಗೆ ಬದಲಾಗಿ ನಾವು ನಿಮ್ಮನ್ನು ಬೇಡಿಕೊಳ್ಳುತ್ತೇವೆ.

2 ಕೊರಿಂಥದವರಿಗೆ 6:17
ಆದದರಿಂದ--ಅವರ ಮಧ್ಯದಲ್ಲಿಂದ ನೀವು ಹೊರಗೆ ಬಂದು ಪ್ರತ್ಯೇಕವಾಗಿರಿ. ಇದಲ್ಲದೆ ಅಶುದ್ಧವಾದ ಯಾವದನ್ನೂ ಮುಟ್ಟದಿರಿ ಎಂದು ಕರ್ತನು ಹೇಳುತ್ತಾನೆ.

ಗಲಾತ್ಯದವರಿಗೆ 5:3
ಯಾಕಂದರೆ ಸುನ್ನತಿ ಮಾಡಿಸಿಕೊಳ್ಳುವ ಪ್ರತಿ ಯೊಬ್ಬನು ನ್ಯಾಯಪ್ರಮಾಣವನ್ನೆಲ್ಲಾ ಕೈಕೊಳ್ಳುವ ಹಂಗಿನಲ್ಲಿದ್ದಾನೆ ಎಂದು ತಿರಿಗಿ ಪ್ರಮಾಣವಾಗಿ ಹೇಳುತ್ತೇನೆ.

ಎಫೆಸದವರಿಗೆ 4:17
ಆದದರಿಂದ ಅನ್ಯಜನರು ನಡೆದುಕೊಳ್ಳುವ ಪ್ರಕಾರ ನೀವು ಇನ್ನು ಮೇಲೆ ನಡೆದುಕೊಳ್ಳಬಾರ ದೆಂದು ಕರ್ತನಲ್ಲಿರುವವನಾಗಿ ನಾನು ನಿಮಗೆ ಖಂಡಿತವಾಗಿ ಹೇಳುತ್ತೇನೆ. ಅವರು ನಿಷ್ಪ್ರಯೋಜನ ವಾದ ಬುದ್ಧಿಯುಳ್ಳವರಾಗಿ ನಡೆದುಕೊಳ್ಳುತ್ತಾರೆ;

ಫಿಲಿಪ್ಪಿಯವರಿಗೆ 2:15
ಹೀಗೆ ನೀವು ದೋಷವಿಲ್ಲದವರೂ ಕೇಡುಮಾಡ ದವರೂ ನಿಂದಾರಹಿತರೂ ಆದ ದೇವಪುತ್ರರಾಗಿ ವಕ್ರವುಳ್ಳ ದುಷ್ಟಜನಾಂಗದ ಮಧ್ಯದಲ್ಲಿ ಜೀವದಾಯಕ ವಾಕ್ಯವನ್ನು ಹಿಡುಕೊಂಡು ಲೋಕದಲ್ಲಿ ಬೆಳಕುಗಳಂತೆ ಹೊಳೆಯುವವರಾಗಿದ್ದೀರಿ.

1 ಥೆಸಲೊನೀಕದವರಿಗೆ 2:11
ತಂದೆಯು ತನ್ನ ಮಕ್ಕಳಿಗೆ ಹೇಗೋ ಹಾಗೆಯೇ ನಾವು ನಿಮ್ಮಲ್ಲಿ ಪ್ರತಿಯೊಬ್ಬನಿಗೆ ಬುದ್ದಿ ಹೇಳುತ್ತಾ ಆದರಿಸುತ್ತಾ ಬಂದೆವು.

1 ತಿಮೊಥೆಯನಿಗೆ 4:16
ನಿನ್ನ ವಿಷಯದಲ್ಲಿಯೂ ಉಪ ದೇಶದ ವಿಷಯದಲ್ಲಿಯೂ ಎಚ್ಚರಿಕೆಯಾಗಿರು. ನೀನು ಇವುಗಳಲ್ಲಿ ನಿರತನಾಗಿರು; ಹೀಗೆ ಮಾಡುವದರಿಂದ ನೀನು ನಿನ್ನನ್ನೂ ನಿನ್ನ ಉಪದೇಶ ಕೇಳುವವರನ್ನೂ ರಕ್ಷಿಸುವಿ.

ಇಬ್ರಿಯರಿಗೆ 3:12
ಸಹೋದರರೇ, ಎಚ್ಚರಿಕೆಯಿಂದ ನೋಡಿಕೊ ಳ್ಳಿರಿ; ಜೀವಸ್ವರೂಪನಾದ ದೇವರನ್ನು ಬಿಟ್ಟು ಹೋಗುವ ಅಪನಂಬಿಕೆಯುಳ್ಳ ಕೆಟ್ಟ ಹೃದಯವು ನಿಮ್ಮೊಳಗೆ ಯಾವನಲ್ಲಿಯೂ ಇರಬಾರದು.

ಯಾಕೋಬನು 4:8
ದೇವರ ಸವಿಾಪಕ್ಕೆ ಬನ್ನಿರಿ, ಆಗ ಆತನು ನಿಮ್ಮ ಸವಿಾಪಕ್ಕೆ ಬರುವನು. ಪಾಪಿಗಳೇ, ನಿಮ್ಮ ಕೈಗಳನ್ನು ಶುಚಿ ಮಾಡಿಕೊಳ್ಳಿರಿ; ಎರಡು ಮನಸ್ಸುಳ್ಳವರೇ, ನಿಮ್ಮ ಹೃದಯಗಳನ್ನು ನಿರ್ಮಲ ಮಾಡಿಕೊಳ್ಳಿರಿ.

1 ಪೇತ್ರನು 5:12
ನಿಮ್ಮನ್ನು ಎಚ್ಚರಿಸುವದಕ್ಕೂ ಇದೇ ದೇವರ ನಿಜವಾದ ಕೃಪೆ ಎಂದು ಸಾಕ್ಷಿ ಹೇಳುವದಕ್ಕೂ ನಿಮಗೆ ನಂಬಿಗಸ್ತನಾದ ಸಹೋದರನೆಂದು ನಾನು ಎಣಿಸುವ ಸಿಲ್ವಾನನಿಂದ ಸಂಕ್ಷೇಪವಾಗಿ ಇದನ್ನು ಬರೆದಿದ್ದೇನೆ. ಈ ನಿಜವಾದ ಕೃಪೆಯಲ್ಲಿ ನೀವು ನಿಂತವರಾಗಿದ್ದೀರಿ.

ಪ್ರಕಟನೆ 3:17
ನೀನು--ನಾನು ಐಶ್ವರ್ಯವಂತನು, ಧನವೃದ್ಧಿಯುಳ್ಳವನು, ಯಾವದರ ಲ್ಲಿಯೂ ಕೊರತೆಯಿಲ್ಲದವನು ಎಂದು ಹೇಳಿಕೊಳ್ಳುತ್ತೀ; ಆದರೆ ನೀನು ಕೇವಲ ನಿರ್ಗತಿಕನು, ದರಿದ್ರನು, ಬಡವನು, ಕುರುಡನು, ಬೆತ್ತಲೆಯಾದವನು ಆಗಿರುವ ದನ್ನು ತಿಳಿಯದೆ ಇದ್ದೀ.

ಪ್ರಕಟನೆ 18:4
ಪರಲೋಕದಿಂದ ಮತ್ತೊಂದು ಶಬ್ದವನ್ನು ನಾನು ಕೇಳಿದೆನು; ಅದು--ನನ್ನ ಜನರೇ, ಅವಳಿಂದ ಹೊರಗೆ ಬನ್ನಿರಿ; ನೀವು ಅವಳ ಪಾಪಗಳಲ್ಲಿ ಪಾಲುಗಾರರಾಗ ಬಾರದು; ಅವಳಿಗಾಗುವ ಉಪದ್ರವಗಳಿಗೆ ಗುರಿ ಯಾಗಬಾರದು.

ಅಪೊಸ್ತಲರ ಕೃತ್ಯಗ 28:23
ಅವರು ಅವನಿಗೆ ಒಂದು ದಿನವನ್ನು ನೇಮಿಸಿ ದಾಗ ಅನೇಕರು ಅವನ ನಿವಾಸಕ್ಕೆ ಬಂದರು; ಆಗ ಬೆಳಗಿನಿಂದ ಸಾಯಂಕಾಲದವರೆಗೆ ಮೋಶೆಯ ನ್ಯಾಯ ಪ್ರಮಾಣದಿಂದಲೂ ಪ್ರವಾದನೆಗಳಿಂದಲೂ ಯೇಸು ವಿನ ವಿಷಯದಲ್ಲಿ ಅವರನ್ನು ಒಡಂಬಡಿಸುತ್ತಾ ಅವರಿಗೆ ದೇವರ ರಾಜ್ಯವನ್ನು ವಿವರಿಸಿ ಸಾಕ್ಷೀಕರಿಸಿದನು.

ಅಪೊಸ್ತಲರ ಕೃತ್ಯಗ 20:24
ಆದಾಗ್ಯೂ ಇವುಗಳಲ್ಲಿ ಯಾವದೊಂದು ನನ್ನನ್ನು ಕದಲಿಸುವದಿಲ್ಲ; ಇಲ್ಲವೆ ನನ್ನ ಪ್ರಾಣವು ನನಗೆ ಪ್ರಿಯವಾದದ್ದೆಂದು ನಾನು ಎಣಿಸುವದಿಲ್ಲ; ಹೀಗೆ ದೇವರ ಕೃಪೆಯ ಸುವಾರ್ತೆಯನ್ನು ಸಾಕ್ಷಿಕರಿಸು ವದಕ್ಕಾಗಿ ನಾನು ಕರ್ತನಾದ ಯೇಸುವಿನಿಂದ ಹೊಂದಿದ ಸೇವೆಯೆಂಬ ಓಟವನ್ನು ಸಂತೋಷದಿಂದ ಕೊನೆಗಾಣಿಸುವ

ಅಪೊಸ್ತಲರ ಕೃತ್ಯಗ 20:21
ಯೆಹೂ ದ್ಯರೂ ಗ್ರೀಕರೂ ದೇವರ ಕಡೆಗೆ ಮಾನಸಾಂತರಪಟ್ಟು ನಮ್ಮ ಕರ್ತನಾದ ಯೇಸುಕ್ರಿಸ್ತನ ಮೇಲೆ ನಂಬಿಕೆಯಿಡಬೇಕೆಂದು ಸಾಕ್ಷೀಕರಿಸುವವನಾಗಿದ್ದೆನು.

ಙ್ಞಾನೋಕ್ತಿಗಳು 9:6
ಮೂಢರನ್ನು ಬಿಟ್ಟು ಬಾಳು ಮತ್ತು ವಿವೇಕದ ಮಾರ್ಗದಲ್ಲಿ ಹೋಗು ಎಂದೂ ಕೂಗುತ್ತಾಳೆ.

ಮತ್ತಾಯನು 3:7
ಆದರೆ ಫರಿಸಾಯರಲ್ಲಿಯೂ ಸದ್ದುಕಾಯರಲ್ಲಿಯೂ ಅನೇಕರು ತನ್ನಿಂದ ಬಾಪ್ತಿಸ್ಮ ಮಾಡಿಸಿಕೊಳ್ಳು ವದಕ್ಕಾಗಿ ಬರುವದನ್ನು ಅವನು ಕಂಡು ಅವರಿಗೆ-- ಓ ಸರ್ಪ ಸಂತತಿಯವರೇ, ಬರುವದಕ್ಕಿರುವ ಕೋಪ ದಿಂದ ತಪ್ಪಿಸಿಕೊಳ್ಳುವದಕ್ಕೆ ನಿಮ್ಮನ್ನು ಎಚ್ಚರಿಸಿದವರು ಯಾರು?

ಮತ್ತಾಯನು 12:34
ಓ ಸರ್ಪಸಂತತಿಯವರೇ, ಕೆಟ್ಟವರಾಗಿ ರುವ ನೀವು ಒಳ್ಳೆಯವುಗಳನ್ನು ಹೇಗೆ ಮಾತನಾಡೀರಿ? ಯಾಕಂದರೆ ಹೃದಯದಲ್ಲಿ ಸಮೃದ್ಧಿಯಾಗಿರುವದನ್ನೇ ಬಾಯಿ ಮಾತನಾಡುತ್ತದೆ.

ಮತ್ತಾಯನು 16:4
ವ್ಯಭಿಚಾರಿ ಯಾದ ಈ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ಹುಡುಕುತ್ತದೆ; ಆದರೆ ಪ್ರವಾದಿಯಾದ ಯೋನನಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವ ಸೂಚಕಕಾರ್ಯವೂ ಇದಕ್ಕೆ ಕೊಡಲ್ಪಡುವದಿಲ್ಲ ಎಂದು ಹೇಳಿದನು. ತರುವಾಯ ಆತನು ಅವರನ್ನು ಬಿಟ್ಟು ಹೊರಟುಹೋದನು.

ಮತ್ತಾಯನು 23:33
ಹಾವು ಗಳೇ, ಸರ್ಪಸಂತತಿಯವರೇ, ನೀವು ನರಕದಂಡನೆ ಯಿಂದ ಹೇಗೆ ತಪ್ಪಿಸಿಕೊಂಡೀರಿ?

ಮಾರ್ಕನು 8:38
ಆದದರಿಂದ ಯಾವನಾದರೂ ವ್ಯಭಿಚಾರಿಣಿಯಾದ ಈ ಪಾಪಿಷ್ಠ ಸಂತತಿಯಲ್ಲಿ ನನ್ನ ಮತ್ತು ನನ್ನ ಮಾತುಗಳ ವಿಷಯ ವಾಗಿ ನಾಚಿಕೊಳ್ಳುವನೋ ಅವನ ವಿಷಯದಲ್ಲಿ ಮನುಷ್ಯಕುಮಾರನು ಸಹ ತನ್ನ ತಂದೆಯ ಮಹಿಮೆ ಯಲ್ಲಿ ಪರಿಶುದ್ಧ ದೂತರೊಡನೆ ಬರುವಾಗ ನಾಚಿ ಕೊಳ್ಳುವನು ಎಂದು ಹೇಳಿದನು.

ಲೂಕನು 21:36
ಆದಕಾರಣ ಸಂಭವಿಸುವದಕ್ಕಿರುವ ಇವೆಲ್ಲವುಗಳಿಂದ ನೀವು ತಪ್ಪಿಸಿಕೊಳ್ಳುವದಕ್ಕೆ ಯೋಗ್ಯರೆಂದು ಎಣಿಸಲ್ಪಡು ವಂತೆಯೂ ಮನುಷ್ಯಕುಮಾರನ ಮುಂದೆ ನಿಂತು ಕೊಳ್ಳುವಂತೆಯೂ ಎಚ್ಚರವಾಗಿದ್ದು ಯಾವಾಗಲೂ ಪ್ರಾರ್ಥಿಸುತ್ತಾ ಇರ್ರಿ ಅಂದನು.

ಯೋಹಾನನು 21:25
ಇದಲ್ಲದೆ ಯೇಸು ಮಾಡಿದವುಗಳು ಬಹಳ ಉಂಟು; ಅವುಗಳನ್ನು ಒಂದೊಂದಾಗಿ ಬರೆಯುವ ದಾದರೆ ಬರೆಯಬೇಕಾದ ಪುಸ್ತಕಗಳನ್ನು ಲೋಕವೇ ಹಿಡಿಸಲಾರದೆ ಹೋದೀತೆಂದು ನಾನು ನೆನಸುತ್ತೇನೆ. ಆಮೆನ್‌.

ಅಪೊಸ್ತಲರ ಕೃತ್ಯಗ 10:42
ಆತನೇ ಜೀವಿತರಿಗೂ ಸತ್ತವರಿಗೂ ನ್ಯಾಯಾಧಿಪತಿಯಾಗಿ ದೇವರಿಂದ ನೇಮಕವಾದವನೆಂಬದನ್ನು ಜನರಿಗೆ ಸಾರಿ ಸಾಕ್ಷಿ ಹೇಳಬೇಕೆಂದು ದೇವರು ನಮಗೆ ಅಪ್ಪಣೆಕೊಟ್ಟನು.

ಅಪೊಸ್ತಲರ ಕೃತ್ಯಗ 15:32
ಯೂದನೂ ಸೀಲನೂ ತಾವೇ ಪ್ರವಾದಿಗಳಾಗಿದ್ದದರಿಂದ ಸಹೋ ದರರನ್ನು ಅನೇಕ ಮಾತುಗಳಿಂದ ಪ್ರಭೋದಿಸಿ ದೃಢ ಪಡಿಸಿದರು.

ಅಪೊಸ್ತಲರ ಕೃತ್ಯಗ 20:2
ಆ ಭಾಗಗಳಲ್ಲಿ ಸಂಚಾರ ಮಾಡಿ ಅಲ್ಲಿಯವರನ್ನು ಬಹಳವಾಗಿ ಪ್ರಬೋಧಿಸಿ ಗ್ರೀಸ್‌ಗೆ ಬಂದನು.

ಅಪೊಸ್ತಲರ ಕೃತ್ಯಗ 20:9
ಆಗ ಕಿಟಕಿಯಲ್ಲಿ ಕೂತು ಕೊಂಡಿದ್ದ ಯೂತಿಕನೆಂಬ ಒಬ್ಬ ಯೌವನಸ್ಥನು ಗಾಢ ನಿದ್ರೆಯಲ್ಲಿದ್ದನು. ಪೌಲನು ಇನ್ನೂ ಪ್ರಸಂಗ ಮಾಡುತ್ತಾ ಇದ್ದಾಗ ಆ ಯೌವನಸ್ಥನಿಗೆ ನಿದ್ರೆಯಿಂದ ತೂಕಡಿಕೆ ಹೆಚ್ಚಾಗಿ ಮೂರನೆಯ ಅಂತಸ್ತಿನಿಂದ ಕೆಳಗೆ ಬಿದ್ದನು; ಅವನನ್ನು ಎತ್ತಿದಾಗ ಅವನು ಸತ್ತಿದ್ದನು.

ಅಪೊಸ್ತಲರ ಕೃತ್ಯಗ 20:11
ಆಗ ಅವನು ಮತ್ತೆ ಮೇಲಕ್ಕೆ ಹೋಗಿ ರೊಟ್ಟಿ ಮುರಿದು ಊಟಮಾಡಿ ಬಹಳ ಹೊತ್ತು ಬೆಳಗಾಗುವ ತನಕ ಮಾತನಾಡಿ ಹಾಗೆ ಹೊರಟು ಹೋದನು.

ಅರಣ್ಯಕಾಂಡ 16:28
ಆಗ ಮೋಶೆಯು--ಈ ಕಾರ್ಯಗಳನ್ನೆಲ್ಲಾ ಮಾಡುವದಕ್ಕೆ ಕರ್ತನು ನನ್ನನ್ನು ಕಳುಹಿಸಿದ್ದಾನೆ; ಅವು ಗಳು ನನ್ನ ಸ್ವಂತ ಆಲೋಚನೆಗಳಂತೆ ಮಾಡಲಿಲ್ಲವೆಂದು ನೀವು ಇದರಿಂದ ತಿಳುಕೊಳ್ಳುವಿರಿ.