Acts 24:25
ಇದಲ್ಲದೆ ನೀತಿ ದಮೆಯ ಮತ್ತು ಮುಂದೆ ಬರುವ ನ್ಯಾಯತೀರ್ಪಿನ ವಿಷಯವಾಗಿ ಅವನು ಪ್ರಸ್ತಾಪಿಸುತ್ತಿದ್ದಾಗ ಫೇಲಿಕ್ಸನು ನಡುಗಿ--ನೀನು ಸದ್ಯಕ್ಕೆ ಹೋಗು; ನನಗೆ ಅನುಕೂಲವಾದ ಸಮಯವು ಇರುವಾಗ ನಿನ್ನನ್ನು ನಾನು ಕರೆಯಿಸುವೆನು ಎಂದು ಉತ್ತರಕೊಟ್ಟನು.
Acts 24:25 in Other Translations
King James Version (KJV)
And as he reasoned of righteousness, temperance, and judgment to come, Felix trembled, and answered, Go thy way for this time; when I have a convenient season, I will call for thee.
American Standard Version (ASV)
And as he reasoned of righteousness, and self-control, and the judgment to come, Felix was terrified, and answered, Go thy way for this time; and when I have a convenient season, I will call thee unto me.
Bible in Basic English (BBE)
And while he was talking about righteousness and self-control and the judging which was to come, Felix had great fear and said, Go away for the present, and when the right time comes I will send for you.
Darby English Bible (DBY)
And as he reasoned concerning righteousness, and temperance, and the judgment about to come, Felix, being filled with fear, answered, Go for the present, and when I get an opportunity I will send for thee;
World English Bible (WEB)
As he reasoned about righteousness, self-control, and the judgment to come, Felix was terrified, and answered, "Go your way for this time, and when it is convenient for me, I will summon you."
Young's Literal Translation (YLT)
and he reasoning concerning righteousness, and temperance, and the judgment that is about to be, Felix, having become afraid, answered, `For the present be going, and having got time, I will call for thee;'
| And as | διαλεγομένου | dialegomenou | thee-ah-lay-goh-MAY-noo |
| he | δὲ | de | thay |
| reasoned | αὐτοῦ | autou | af-TOO |
| of | περὶ | peri | pay-REE |
| righteousness, | δικαιοσύνης | dikaiosynēs | thee-kay-oh-SYOO-nase |
| καὶ | kai | kay | |
| temperance, | ἐγκρατείας | enkrateias | ayng-kra-TEE-as |
| and | καὶ | kai | kay |
| τοῦ | tou | too | |
| judgment | κρίματος | krimatos | KREE-ma-tose |
| τοῦ | tou | too | |
| to | μέλλοντος | mellontos | MALE-lone-tose |
| come, | ἔσεσθαι, | esesthai | A-say-sthay |
| Felix | ἔμφοβος | emphobos | AME-foh-vose |
| γενόμενος | genomenos | gay-NOH-may-nose | |
| trembled, | ὁ | ho | oh |
and | Φῆλιξ | phēlix | FAY-leeks |
| answered, | ἀπεκρίθη | apekrithē | ah-pay-KREE-thay |
| Go thy way | Τὸ | to | toh |
| this for | νῦν | nyn | nyoon |
| time; | ἔχον | echon | A-hone |
| πορεύου | poreuou | poh-RAVE-oo | |
| when | καιρὸν | kairon | kay-RONE |
| have I | δὲ | de | thay |
| a convenient season, | μεταλαβὼν | metalabōn | may-ta-la-VONE |
| I will call for | μετακαλέσομαί | metakalesomai | may-ta-ka-LAY-soh-MAY |
| thee. | σε | se | say |
Cross Reference
ಗಲಾತ್ಯದವರಿಗೆ 5:23
ಸಾತ್ವಿಕತ್ವ ಮಿತವ್ಯಯ ಇಂಥ ವುಗಳೇ; ಇಂಥವುಗಳಿಗೆ ವಿರೋಧವಾಗಿ ನ್ಯಾಯ ಪ್ರಮಾಣವಿಲ್ಲ.
ಅಪೊಸ್ತಲರ ಕೃತ್ಯಗ 10:42
ಆತನೇ ಜೀವಿತರಿಗೂ ಸತ್ತವರಿಗೂ ನ್ಯಾಯಾಧಿಪತಿಯಾಗಿ ದೇವರಿಂದ ನೇಮಕವಾದವನೆಂಬದನ್ನು ಜನರಿಗೆ ಸಾರಿ ಸಾಕ್ಷಿ ಹೇಳಬೇಕೆಂದು ದೇವರು ನಮಗೆ ಅಪ್ಪಣೆಕೊಟ್ಟನು.
2 ಪೇತ್ರನು 1:6
ಜ್ಞಾನಕ್ಕೆ ದಮೆಯನ್ನೂ ದಮೆಗೆ ತಾಳ್ಮೆಯನ್ನೂ ತಾಳ್ಮೆಗೆ ಭಕ್ತಿಯನ್ನೂ
ಯೆಶಾಯ 1:21
ನಂಬಿಗಸ್ತಿಕೆಯ ಪಟ್ಟಣವು ಸೂಳೆಯಂತಾದ ಳಲ್ಲಾ! ಅದು ನ್ಯಾಯದಿಂದ ತುಂಬಿ ನೀತಿಯಲ್ಲಿ ನೆಲೆ ಯಾಗಿತ್ತು; ಆದರೆ ಈಗ ಕೊಲೆಗಾರರಿಂದ ತುಂಬಿದೆ.
ಹೋಶೇ 10:12
ನಿಮಗಾಗಿ ನೀತಿಯಲ್ಲಿ ಬಿತ್ತಿರಿ, ಕರುಣೆಯಲ್ಲಿ ಕೊಯ್ಯಿರಿ; ಹಾಳಾಗಿ ಬೀಳುಬಿದ್ದ ನಿಮ್ಮ ಭೂಮಿಯನ್ನು ಅಗೆಯಿರಿ; ಆತನು ಬಂದು ನಿಮ್ಮ ಮೇಲೆ ನೀತಿಯನ್ನು ಸುರಿಸುವ ವರೆಗೂ ಕರ್ತನನ್ನು ಹುಡುಕುವ ಸಮಯ ಇದೇ.
ಆಮೋಸ 5:24
ಆದರೆ ನ್ಯಾಯವು ನೀರಿನಂತೆಯೂ ನೀತಿಯು ಬಲವಾದ ಪ್ರವಾಹದಂತೆಯೂ ಹರಿಯಲಿ.
ಆಮೋಸ 6:12
ಕುದುರೆಗಳು ಬಂಡೆಯ ಮೇಲೆ ಓಡುವದುಂಟೇ? ಎತ್ತುಗಳಿಂದ ಅಲ್ಲಿ ಉಳುವನೋ? ನಿಮ್ಮ ನ್ಯಾಯವನ್ನು ವಿಷಕ್ಕೂ ನೀತಿ ಫಲವನ್ನು ಮಾಚಿಪತ್ರೆಗೂ ಬದಲಾಯಿ ಸಿದ್ದೀರಿ.
ಮತ್ತಾಯನು 25:1
ಇದಲ್ಲದೆ ಪರಲೋಕ ರಾಜ್ಯವು ತಮ್ಮ ದೀಪಗಳನ್ನು ತಕ್ಕೊಂಡು ಮದಲಿಂಗ ನನ್ನು ಎದುರುಗೊಳ್ಳುವದಕ್ಕಾಗಿ ಹೊರಟುಹೋದ ಹತ್ತುಮಂದಿ ಕನ್ಯೆಯರಿಗೆ ಹೋಲಿಕೆಯಾಗಿರುವದು.
ಮತ್ತಾಯನು 25:31
ಮನುಷ್ಯಕುಮಾರನು ತನ್ನ ಮಹಿಮೆಯಲ್ಲಿ ಎಲ್ಲಾ ಪರಿಶುದ್ಧ ದೂತರೊಂದಿಗೆ ಬರುವಾಗ ತನ್ನ ಮಹಿಮೆಯ ಸಿಂಹಾಸನದ ಮೇಲೆ ಕೂತುಕೊಳ್ಳುವನು;
ಮಾರ್ಕನು 6:18
ಆದರೆ ಯೋಹಾ ನನು ಹೆರೋದನಿಗೆ--ನಿನ್ನ ಸಹೋದರನ ಹೆಂಡತಿ ಯನ್ನು ಇಟ್ಟುಕೊಂಡಿರುವದು ನ್ಯಾಯವಲ್ಲವೆಂದು ಹೇಳಿ ದ್ದನು.
ಲೂಕನು 13:24
ಇಕ್ಕಟ್ಟಾದ ಬಾಗಲಿನಿಂದ ಒಳಗೆ ಪ್ರವೇಶಿಸುವದಕ್ಕೆ ಪ್ರಯಾಸಪಡಿರಿ; ಯಾಕಂ ದರೆ ಅನೇಕರು ಒಳಗೆ ಪ್ರವೇಶಿಸುವದಕ್ಕೆ ಪ್ರಯತ್ನಿಸಿ ದರೂ ಆಗುವದಿಲ್ಲ ಎಂದು ನಾನು ನಿಮಗೆ ಹೇಳು ತ್ತೇನೆ.
ಲೂಕನು 17:26
ನೋಹನ ದಿವಸಗಳಲ್ಲಿ ಹೇಗೆ ಇತ್ತೋ ಅದೇ ರೀತಿಯಲ್ಲಿ ಮನುಷ್ಯಕುಮಾರನ ದಿವಸಗಳಲ್ಲಿಯೂ ಇರುವದು.
ಹೋಶೇ 10:4
ಅವರು ಮಾತುಗಳನ್ನಾಡಿ ಒಡಂಬಡಿಕೆಯನ್ನು ಮಾಡು ವದಕ್ಕೆ ಸುಳ್ಳು ಪ್ರಮಾಣ ವನ್ನು ಮಾಡುತ್ತಾರೆ. ಆದದ ರಿಂದ ನ್ಯಾಯತೀರ್ಪು ವಿಷದ ಕಳೆಯ ಹಾಗೆ ಹೊಲದ ಸಾಲುಗಳಲ್ಲಿ ಮೊಳೆಯುತ್ತದೆ.
ದಾನಿಯೇಲನು 4:27
ಆದದರಿಂದ ಓ ಅರಸನೇ, ನನ್ನ ಆಲೋಚನೆಯು ನಿನಗೆ ಸಮ್ಮತಿ ಯಾಗಿ ನಿನ್ನ ಪಾಪಗಳನ್ನು ನೀತಿಯಿಂದ ಅಳಿಸಿ ನಿನ್ನ ಅನ್ಯಾಯಗಳನ್ನು ಬಡವರಿಗೆ ದಯೆ ತೋರಿಸುವದ ರಿಂದ ಬಿಟ್ಟುಬಿಡು. ಒಂದು ವೇಳೆ ಇದರಿಂದ ನಿನ್ನ ನೆಮ್ಮದಿಯು ಹೆಚ್ಚಾಗಬಹುದು.
ಯೆಹೆಜ್ಕೇಲನು 45:9
ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಓ ಇಸ್ರಾಯೇಲಿನ ಪ್ರಭುಗಳೇ, ನೀವು ಸಾಕುಮಾಡಿರಿ, ಬಲಾತ್ಕಾರವನ್ನು ಸುಲಿಗೆಯನ್ನು ಬಿಡಿರಿ; ನ್ಯಾಯವನ್ನೂ ನೀತಿಯನ್ನೂ ಮಾಡಿರಿ; ನನ್ನ ಜನರನ್ನು ಓಡಿಸಬೇಡಿರಿ ಎಂದು ದೇವರಾದ ಕರ್ತನು ಹೇಳುತ್ತಾನೆ.
ಯೆಶಾಯ 16:5
ಕರುಣೆಯಲ್ಲಿ ಸಿಂಹಾಸನವು ಸ್ಥಾಪಿಸಲ್ಪಡುವದು; ನ್ಯಾಯತೀರಿಸು ವವನೂ ನ್ಯಾಯವನ್ನು ಹುಡುಕುವವನೂ ನೀತಿಗೋ ಸ್ಕರ ತ್ವರೆಪಡುವವನೂ ದಾವೀದನ ಗುಡಾರದಲ್ಲಿ ಅದರ ಮೇಲೆ ಸತ್ಯದಲ್ಲಿ ಕೂತುಕೊಳ್ಳುವನು.
ಯೆಶಾಯ 32:11
ನಿಶ್ಚಿಂತೆಯುಳ್ಳ ಹೆಂಗಸರೇ, ನೀವು ನಡುಗಿರಿ, ನಿರ್ಭೀತರೇ ಕಳವಳಗೊಳ್ಳಿರಿ; ನಿಮ್ಮ ಬಟ್ಟೆಯನ್ನು ಕಿತ್ತು ಹಾಕಿ ಬೆತ್ತಲೆಯಾಗಿ ಸೊಂಟಕ್ಕೆ ಗೋಣೀತಟ್ಟನ್ನು ಸುತ್ತಿಕೊಳ್ಳಿರಿ.
ಯೆಶಾಯ 41:21
ನಿಮ್ಮ ವ್ಯಾಜ್ಯವನ್ನು ತನ್ನಿರಿ ಎಂದು ಕರ್ತನು ಅನ್ನುತ್ತಾನೆ; ನಿಮ್ಮ ಬಲವಾದ ಕಾರಣಗಳನ್ನು ತನ್ನಿರಿ ಎಂದು ಯಾಕೋಬ್ಯರ ಅರಸನು ಹೇಳುತ್ತಾನೆ.
ಯೆಶಾಯ 55:6
ಕರ್ತನು ಸಿಕ್ಕುವ ಕಾಲದಲ್ಲಿ ಆತನನ್ನು ಹುಡುಕಿರಿ; ಆತನು ಸವಿಾಪವಾಗಿರುವಾಗಲೇ ಆತನನ್ನು ಕರೆಯಿರಿ.
ಯೆಶಾಯ 61:8
ಕರ್ತನಾದ ನಾನು ನ್ಯಾಯವನ್ನು ಪ್ರೀತಿಮಾಡು ತ್ತೇನೆ, ಸುಲಿಗೆಯಿಂದಾದ ದಹನಬಲಿಯನ್ನು ಹಗೆ ಮಾಡುತ್ತೇನೆ. ಅವರ ಕೆಲಸವನ್ನು ಸತ್ಯದಲ್ಲಿ ನಡಿಸು ತ್ತೇನೆ; ಅವರ ಸಂಗಡ ನಿತ್ಯವಾದ ಒಡಂಬಡಿಕೆಯನ್ನು ಮಾಡಿಕೊಳ್ಳುತ್ತೇನೆ.
ಯೆರೆಮಿಯ 22:15
ನೀನು ದೇವದಾರಿನಲ್ಲಿ ನಿನ್ನನ್ನು ಮುಚ್ಚಿ ಕೊಳ್ಳುವದರಿಂದ ದೊರೆತನ ಮಾಡುವಿಯೋ? ನಿನ್ನ ತಂದೆ ಉಂಡು, ಕುಡಿದು, ನ್ಯಾಯವನ್ನೂ ನೀತಿಯನ್ನೂ ಮಾಡಲಿಲ್ಲವೋ? ಆಗ ಅವನಿಗೆ ಒಳ್ಳೆಯದಾ ಗಲಿಲ್ಲವೋ?
ಯೆರೆಮಿಯ 23:29
ನನ್ನ ವಾಕ್ಯವು ಬೆಂಕಿಯ ಹಾಗಲ್ಲವೋ ಎಂದು ಕರ್ತನು ಅನ್ನುತ್ತಾನೆ. ಅದು ಬಂಡೆಯನ್ನು ತುಂಡು ಮಾಡುವ ಸುತ್ತಿಗೆಯ ಹಾಗಲ್ಲವೋ?
ಯೆರೆಮಿಯ 37:17
ಅವನನ್ನು ಹೊರಗೆ ತನ್ನ ಮನೆಯಲ್ಲಿ ಕರತರಿಸಿ--ರಹಸ್ಯವಾಗಿ ಕರ್ತನಿಂದ ವಾಕ್ಯ ಉಂಟೋ ಎಂದು ಅವನನ್ನು ಕೇಳಿದನು; ಉಂಟು ಎಂದು ಯೆರೆವಿಾಯನು ಹೇಳಿ ರಹಸ್ಯವಾಗಿ ನೀನು ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವಿ ಅಂದನು.
ಯೆರೆಮಿಯ 38:14
ಆಗ ಅರಸನಾದ ಚಿದ್ಕೀಯನು ಪ್ರವಾದಿಯಾದ ಯೆರೆವಿಾಯನನ್ನು ತನ್ನ ಬಳಿಗೆ ಕರೆಯಿಸಿ ಕರ್ತನ ಆಲಯದಲ್ಲಿರುವ ಮೂರನೇ ಪ್ರವೇಶಕ್ಕೆ ಕರಕೊಂಡು ಹೋದನು. ಆಗ ಅರಸನು ಯೆರೆವಿಾಯನಿಗೆ--ನಾನು ನಿನ್ನಿಂದ ಒಂದು ಕೇಳುತ್ತೇನೆ, ನನಗೆ ಯಾವದನ್ನಾದರೂ ಬಚ್ಚಿಡಬೇಡ ಅಂದನು.
ಯೋಹಾನನು 16:8
ಆತನು ಬಂದಾಗ ಪಾಪ ನೀತಿ ನ್ಯಾಯ ತೀರ್ವಿಕೆಯ ವಿಷಯಗಳಲ್ಲಿಯೂ
ಅಪೊಸ್ತಲರ ಕೃತ್ಯಗ 2:37
ಅವರು ಇದನ್ನು ಕೇಳಿ ತಮ್ಮ ಹೃದಯದಲ್ಲಿ ತಿವಿಯಲ್ಪಟ್ಟವರಾಗಿ ಪೇತ್ರನಿಗೂ ಉಳಿದ ಅಪೊಸ್ತಲರಿಗೂ--ಜನರೇ, ಸಹೋದರರೇ, ನಾವು ಏನು ಮಾಡಬೇಕು ಎಂದು ಕೇಳಿದರು.
ಇಬ್ರಿಯರಿಗೆ 4:11
ಆದದರಿಂದ ನಾವು ಅವರ ಅಪನಂಬಿಕೆಯನ್ನು ಅನುಸರಿಸುವವ ರಾಗದಂತೆ ಆ ವಿಶ್ರಾಂತಿಯಲ್ಲಿ ಸೇರುವದಕ್ಕೆ ಪ್ರಯಾಸ ಪಡೋಣ.
ಇಬ್ರಿಯರಿಗೆ 6:2
ಬಾಪ್ತಿಸ್ಮಗಳ ಬೋಧನೆಯೂ ಹಸ್ತಾ ರ್ಪಣೆಯೂ ಸತ್ತವರ ಪುನರುತ್ಥಾನವೂ ನಿತ್ಯವಾದ ನ್ಯಾಯತೀರ್ಪೂ ಇವುಗಳ ವಿಷಯದಲ್ಲಿ ಅಸ್ತಿವಾರವನ್ನು ತಿರಿಗಿ ಹಾಕದೆ ನಾವು ಪರಿಪೂರ್ಣತೆಗೆ ಹೋಗೋಣ.
ಇಬ್ರಿಯರಿಗೆ 9:27
ಒಂದೇ ಸಾರಿ ಸಾಯುವದೂ ತರುವಾಯ ನ್ಯಾಯತೀರ್ಪೂ ಮನುಷ್ಯರಿಗೆ ನೇಮಕವಾಗಿದೆ.
ಯಾಕೋಬನು 2:19
ದೇವರು ಒಬ್ಬನೇ ಎಂದು ನೀನು ನಂಬುವವನು, ನೀನು ಒಳ್ಳೇದು ಮಾಡುತ್ತೀ. ದೆವ್ವಗಳು ಕೂಡ ಹಾಗೆಯೇ ನಂಬಿ ನಡುಗುತ್ತವೆ.
1 ಪೇತ್ರನು 3:15
ಆದರೆ ದೇವರಾದ ಕರ್ತನನ್ನು ನಿಮ್ಮ ಹೃದಯಗಳಲ್ಲಿ ಪ್ರತಿಷ್ಠೆಪಡಿಸಿರಿ. ನಿಮ್ಮಲ್ಲಿರುವ ನಿರೀಕ್ಷೆಗೆ ಆಧಾರವೇನೆಂದು ಕೇಳುವವರೆಲ್ಲರಿಗೆ ಸಾತ್ವಿಕತ್ವ ದಿಂದಲೂ ಭಯದಿಂದಲೂ ಉತ್ತರ ಹೇಳುವದಕ್ಕೆ ಯಾವಾಗಲೂ ಸಿದ್ಧವಾಗಿರ್ರಿ;
1 ಪೇತ್ರನು 4:4
ತಾವು ಮಾಡುವ ಅಪರಿಮಿತವಾದ ಪಟಿಂಗತನದಲ್ಲಿ ನೀವು ಅವರೊಂದಿಗೆ ಸೇರದೆ ಇದ್ದದ್ದಕ್ಕೆ ಅವರು ಆಶ್ಚರ್ಯ ಪಟ್ಟು ನಿಮ್ಮನ್ನು ದೂಷಿಸುತ್ತಾರೆ.
1 ಯೋಹಾನನು 3:7
ಚಿಕ್ಕ ಮಕ್ಕಳೇ, ಯಾರೂ ನಿಮ್ಮನ್ನು ಮೋಸಗೊಳಿಸದಿರಲಿ. ಆತನು ಹೇಗೆ ನೀತಿವಂತ ನಾಗಿದ್ದಾನೋ ಹಾಗೆಯೇ ನೀತಿಯನ್ನನುಸರಿಸುವವನು ನೀತಿವಂತನಾಗಿದ್ದಾನೆ.
1 ಯೋಹಾನನು 3:10
ಇವರು ದೇವರ ಮಕ್ಕಳೆಂಬದೂ ಅವರು ಸೈತಾನನ ಮಕ್ಕಳೆಂಬದೂ ಇದರಿಂದ ವ್ಯಕ್ತವಾಗುತ್ತದೆ. ನೀತಿಯನ್ನು ಅನುಸರಿಸದವನೂ ತನ್ನ ಸಹೋದರನನ್ನು ಪ್ರೀತಿಸದವನೂ ದೇವರಿಗೆ ಸಂಬಂಧಪಟ್ಟವನಲ್ಲ.
ಪ್ರಕಟನೆ 20:11
ಆಮೇಲೆ ಬೆಳ್ಳಗಿರುವ ಮಹಾಸಿಂಹಾಸನವನ್ನೂ ಅದರ ಮೇಲೆ ಕೂತಿದ್ದಾತನನ್ನೂ ನಾನು ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋಗಿ ಅವುಗಳಿಗೆ ಸ್ಥಳವಿಲ್ಲದಂತಾಯಿತು.
ಇಬ್ರಿಯರಿಗೆ 3:13
ನಿಮ್ಮಲ್ಲಿ ಒಬ್ಬ ರಾದರೂ ಪಾಪದಿಂದ ಮೋಸಹೋಗಿ ಕಠಿಣರಾಗ ದಂತೆ--ಈ ದಿನ ಎಂದು ಕರೆಯಲ್ಪಡುವಾಗಲೇ ಪ್ರತಿ ನಿತ್ಯವೂ ಒಬ್ಬರನ್ನೊಬ್ಬರು ಎಚ್ಚರಿಸಿರಿ.
ಇಬ್ರಿಯರಿಗೆ 3:7
ಆದದರಿಂದ(ಪವಿತ್ರಾತ್ಮನು ಹೇಳುವ ಪ್ರಕಾರ--ನೀವು ಈ ದಿನ ದೇವರ ಶಬ್ದಕ್ಕೆ ಕಿವಿಗೊಟ್ಟರೆ
2 ಕೊರಿಂಥದವರಿಗೆ 5:10
ಪ್ರತಿಯೊಬ್ಬನು ತನ್ನ ದೇಹದ ಮೂಲಕ ನಡಿಸಿದ ಒಳ್ಳೆಯದಕ್ಕಾಗಲಿ ಕೆಟ್ಟದ್ದಕ್ಕಾಗಲಿ ಸರಿಯಾದದ್ದನ್ನು ಹೊಂದುವದಕ್ಕೋಸ್ಕರ ನಾವೆಲ್ಲರೂ ಕ್ರಿಸ್ತನ ನ್ಯಾಯಾಸನದ ಮುಂದೆ ಕಾಣಿಸಿ ಕೊಳ್ಳಲೇಬೇಕು.
ಅಪೊಸ್ತಲರ ಕೃತ್ಯಗ 17:2
ಪೌಲನು ತನ್ನ ಪದ್ಧತಿಯ ಪ್ರಕಾರ ಅಲ್ಲಿದ್ದವರ ಬಳಿಗೆ ಹೋಗಿ ಮೂರು ಸಬ್ಬತ್ ದಿನಗಳಲ್ಲಿ ಬರಹಗಳಿಂದ ಅವರ ಸಂಗಡ ವಾದಿಸಿ
ಅಪೊಸ್ತಲರ ಕೃತ್ಯಗ 17:32
ಸತ್ತವರ ಪುನರುತ್ಥಾನದ ವಿಷಯವನ್ನು ಕೇಳಿದಾಗ ಕೆಲವರು ಅಪಹಾಸ್ಯ ಮಾಡಿದರು; ಬೇರೆ ಕೆಲವರು--ನೀನು ಈ ವಿಷಯದಲ್ಲಿ ಹೇಳುವದನ್ನು ನಾವು ಇನ್ನೊಂದು ಸಾರಿ ಕೇಳುತ್ತೇವೆ ಅಂದರು.
ಅಪೊಸ್ತಲರ ಕೃತ್ಯಗ 24:15
ಸತ್ತುಹೋದ ನೀತಿವಂತರಿಗೂ ಅನೀತಿವಂತರಿಗೂ ಪುನರುತ್ಥಾನವು ಇರುವದೆಂದು ನಾನು ದೇವರ ಕಡೆಗೆ ನಿರೀಕ್ಷೆ ಇಟ್ಟಿದ್ದೇನೆ. ಅದಕ್ಕೆ ಇವರು ಸಹ ಒಪ್ಪಿ ಕೊಳ್ಳುತ್ತಾರೆ.
1 ಕೊರಿಂಥದವರಿಗೆ 4:5
ಆದದರಿಂದ ಕಾಲಕ್ಕೆ ಮೊದಲು ಕರ್ತನು ಬರುವತನಕ ಯಾವದನ್ನೂ ಕುರಿತು ತೀರ್ಪು ಮಾಡಬೇಡಿರಿ; ಆತನು ಕತ್ತಲೆಯ ಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು; ಹೃದಯದ ಯೋಚನೆಗಳನ್ನು ಪ್ರತ್ಯಕ್ಷಪಡಿಸುವನು; ಆಗ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವ ರಿಂದ ಬರುವದು.
2 ಕೊರಿಂಥದವರಿಗೆ 6:2
(ಆತನು--ಅಂಗೀಕಾರದ ಸಮಯದಲ್ಲಿ ನಾನು ನಿನ್ನ ಮನವಿಯನ್ನು ಕೇಳಿದೆನು, ರಕ್ಷಣೆಯ ದಿನದಲ್ಲಿ ನಾನು ನಿನಗೆ ಸಹಾಯಮಾಡಿದೆನು ಎಂದು ಹೇಳುತ್ತಾನೆ; ಇಗೋ, ಈಗಲೇ ಆ ಅಂಗೀಕಾರದ ಸಮಯ; ಇಗೋ, ಈಗಲೇ ಆ ರಕ್ಷಣೆಯ ದಿನ).
2 ಥೆಸಲೊನೀಕದವರಿಗೆ 1:7
ರ್ತನಾದ ಯೇಸು ತನ್ನ ಬಲವುಳ್ಳ ದೂತರೊಂದಿಗೆ ಪರಲೋಕ ದಿಂದ ಪ್ರತ್ಯಕ್ಷನಾಗುವಾಗ ಸಂಕಟಪಡುವವರಾದ ನಿಮಗೆ ನಮ್ಮೊಡನೆ ಉಪಶಮನ ಮಾಡುವದೂ
2 ತಿಮೊಥೆಯನಿಗೆ 4:1
ಆದದರಿಂದ ದೇವರ ಮುಂದೆಯೂ ಆತನ ಬರೋಣದಲ್ಲಿ ಮತ್ತು ಆತನ ರಾಜ್ಯ ದಲ್ಲಿ ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರಿಸುವ ಕರ್ತನಾದ ಯೇಸು ಕ್ರಿಸ್ತನ ಮುಂದೆಯೂ ನಾನು ನಿನಗೆ ಖಂಡಿತವಾಗಿ ಹೇಳುವದೇನಂದರೆ--
ತೀತನಿಗೆ 2:11
ಯಾಕಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನುಂಟು ಮಾಡುವ ದೇವರ ಕೃಪೆಯು ಪ್ರತ್ಯಕ್ಷವಾಯಿತು.
ಅಪೊಸ್ತಲರ ಕೃತ್ಯಗ 16:29
ಆಗ ಅವನು ದೀಪ ತರಬೇಕೆಂದು ಹೇಳಿ ಒಳಕ್ಕೆ ಹಾರಿ ನಡುಗುತ್ತಾ ಪೌಲ ಸೀಲರ ಮುಂದೆ ಬಿದ್ದನು.
ದಾನಿಯೇಲನು 12:2
ಭೂಮಿಯ ಧೂಳಿನೊಳಗೆ ನಿದ್ರೆಮಾಡುವವ ರಲ್ಲಿ ಅನೇಕರು ಎಚ್ಚತ್ತು ಕೆಲವರು ನಿತ್ಯಜೀವವನ್ನೂ ಕೆಲವರು ನಿತ್ಯ ನಾಚಿಕೆಗಳನ್ನೂ ಅನುಭವಿಸುವರು.
ಇಬ್ರಿಯರಿಗೆ 4:1
ಹೀಗಿರಲಾಗಿ ಆತನ ವಿಶ್ರಾಂತಿಯಲ್ಲಿ ಸೇರುವೆವೆಂಬ ವಾಗ್ದಾನವು ಇನ್ನೂ ಇರು ವಲ್ಲಿ ನಿಮ್ಮೊಳಗೆ ಯಾವನಾದರೂ ಆದರಿಂದ ತಪ್ಪುವವನಾದಾನೋ ಎಂದು ನಾವು ಭಯಪಡೋಣ.
ಪ್ರಸಂಗಿ 11:9
ಓ ಯೌವನಸ್ಥನೇ, ನಿನ್ನ ಯೌವನದಲ್ಲಿ ಸಂತೋಷಪಡು. ನಿನ್ನ ಯೌವನದ ದಿನಗಳಲ್ಲಿ ನಿನ್ನ ಹೃದಯವು ನಿನ್ನನ್ನು ಆನಂದಪಡಿಸಲಿ; ನೀನು ನಿನ್ನ ಹೃದಯದ ಮಾರ್ಗಗಳಲ್ಲಿಯೂ ನಿನ್ನ ಕಣ್ಣುಗಳ ನೋಟ ದಲ್ಲಿಯೂ ನಡೆ; ಆ ಎಲ್ಲಾ ಸಂಗತಿಗಳಿಗಾಗಿ ದೇವರು ನಿನ್ನನ್ನು ನ್ಯಾಯತೀರ್ಪಿಗೆ ತರುವನೆಂದು ತಿಳಿದುಕೋ.
ಕೀರ್ತನೆಗಳು 72:2
ನಿನ್ನ ಜನರಿಗೆ ನೀತಿಯಿಂದಲೂ ದೀನರಿಗೆ ನ್ಯಾಯದಿಂದಲೂ ಆತನು ತೀರ್ಪು ಮಾಡು ವನು.
ಕೀರ್ತನೆಗಳು 82:1
1 ದೇವರು ಬಲಶಾಲಿಗಳ ಮಧ್ಯದಲ್ಲಿ ನಿಂತು ದೇವರುಗಳಿಗೆ ನ್ಯಾಯತೀರಿಸುತ್ತಾನೆ.
ಕೀರ್ತನೆಗಳು 99:1
ಕರ್ತನು ಆಳುತ್ತಾನೆ; ಜನಗಳು ನಡುಗಲಿ; ಆತನು ಕೆರೂಬಿಗಳ ಮಧ್ಯದಲ್ಲಿ ಕೂತಿ ದ್ದಾನೆ; ಭೂಮಿಯು ಕದಲಲಿ.
ಕೀರ್ತನೆಗಳು 119:120
ನಿನ್ನ ಹೆದರಿಕೆಯಿಂದ ನನ್ನ ಶರೀರವು ನಡುಗುತ್ತದೆ. ನಾನು ನಿನ್ನ ತೀರ್ಪುಗಳಿಗೆ ಭಯಪಡುತ್ತೇನೆ.
ಙ್ಞಾನೋಕ್ತಿಗಳು 1:24
ನಾನು ಕರೆದಾಗ ನೀವು ತಿರಸ್ಕರಿಸಿದ್ದಕ್ಕಾಗಿಯೂ ನಾನು ನನ್ನ ಕೈಚಾಚಿದಾಗ ಯಾವ ಮನುಷ್ಯನು ಗಮನಿಸದೆ ಇದ್ದದ್ದಕ್ಕಾಗಿಯೂ
ಙ್ಞಾನೋಕ್ತಿಗಳು 6:4
ನಿನ್ನ ಕಣ್ಣುಗಳಿಗೆ ನಿದ್ರೆಯನ್ನೂ ರೆಪ್ಪೆಗಳಿಗೆ ತೂಕಡಿಕೆಯನ್ನೂ ಕೊಡಬೇಡ.
ಙ್ಞಾನೋಕ್ತಿಗಳು 16:12
ಕೆಟ್ಟದ್ದನ್ನು ಮಾಡುವವರು ರಾಜರಿಗೆ ಅಸಹ್ಯರು; ನೀತಿಯಿಂದ ಸಿಂಹಾಸನವು ಸ್ಥಾಪಿಸಲ್ಪಡು ತ್ತದೆ.
ಙ್ಞಾನೋಕ್ತಿಗಳು 31:3
ನಿನ್ನ ತ್ರಾಣವನ್ನು ಸ್ತ್ರೀಯರಲ್ಲಿ ಒಪ್ಪಿಸದಿರು, ಇಲ್ಲವೆ ಅರಸರನ್ನು ನಾಶಪಡಿಸುವ ದಾರಿಗಳಿಗೆ ತಿರುಗಬೇಡ.
ಪ್ರಸಂಗಿ 3:16
ಕೆಟ್ಟದ್ದು ಇತ್ತೆಂದು ಸೂರ್ಯನ ಕೆಳಗೆ ನ್ಯಾಯ ತೀರ್ಪಿನ ಸ್ಥಳವನ್ನು ಮತ್ತು ದುಷ್ಕೃತ್ಯ ಇದೆಯೆಂದು ನೀತಿಯ ಸ್ಥಾನವನ್ನು ನಾನು ಕಂಡೆನು.
ಕೀರ್ತನೆಗಳು 58:1
ಓ ಸಭೆಯೇ, ನೀವು ನಿಜವಾಗಿ ನೀತಿಯನ್ನು ನುಡಿಯುವಿರೋ? ಓ ಮನುಷ್ಯರ ಮಕ್ಕಳೇ, ನೀವು ಯಥಾರ್ಥವಾಗಿ ನ್ಯಾಯತೀರಿಸು ವಿರೋ?
ಕೀರ್ತನೆಗಳು 50:3
ನಮ್ಮ ದೇವರು ಬರುತ್ತಾನೆ, ಮೌನವಾಗಿರನು; ಬೆಂಕಿಯು ಆತನ ಮುಂದೆ ದಹಿಸುವದು; ಅದು ಆತನ ಸುತ್ತಲು ದೊಡ್ಡ ಬಿರುಗಾಳಿಯಂತಿರುವದು.
1 ಸಮುವೇಲನು 12:7
ಆದದರಿಂದ ಈಗ ನಿಲ್ಲಿರಿ; ಕರ್ತನು ನಿಮಗೂ ನಿಮ್ಮ ತಂದೆಗಳಿಗೂ ಮಾಡಿದ ಸಮಸ್ತ ನೀತಿಯುಳ್ಳ ಕ್ರಿಯೆಗಳ ವಿಷಯ ಕರ್ತನ ಮುಂದೆ ನಿಮಗೆ ನ್ಯಾಯ ಹೇಳುತ್ತೇನೆ.
2 ಸಮುವೇಲನು 23:3
ಇಸ್ರಾಯೇಲಿನ ದೇವರು ಹೇಳಿದ್ದು; ಇಸ್ರಾಯೇಲಿನ ಬಂಡೆ ನನ್ನ ಸಂಗಡ ಮಾತನಾಡಿದ್ದು--ಮನುಷ್ಯರ ಮೇಲೆ ಆಳುವ ವನು ನೀತಿವಂತನಾಗಿರತಕ್ಕದ್ದು; ಅವನು ದೇವರ ಭಯ ದಲ್ಲಿ ಆಳುವನು.
1 ಅರಸುಗಳು 21:27
ಆದರೆ ಅಹಾಬನು ಆ ಮಾತುಗಳನ್ನು ಕೇಳಿದಾಗ ಏನಾಯಿತಂದರೆ, ಅವನು ತನ್ನ ವಸ್ತ್ರಗಳನ್ನು ಹರಿದು ತನ್ನ ಶರೀರದ ಮೇಲೆ ಗೋಣಿಯನ್ನು ಹಾಕಿಕೊಂಡು ಉಪವಾಸಮಾಡಿ ಗೋಣಿಯಲ್ಲಿ ಮಲಗಿಕೊಂಡು ಮೆಲ್ಲಗೆ ನಡೆದನು.
1 ಅರಸುಗಳು 22:26
ಆಗ ಇಸ್ರಾಯೇಲಿನ ಅರಸನು ಹೇಳಿದ್ದೇ ನಂದರೆ -- ವಿಾಕಾಯೆಹುನನ್ನು ಹಿಡಿದು ಪಟ್ಟಣದ ಅಧಿಪತಿಯಾದ ಆಮೋನನ ಬಳಿಗೂ ಅರಸನ ಮಗ ನಾದ ಯೋವಾಷನ ಬಳಿಗೂ ಅವನನ್ನು ಹಿಂದಕ್ಕೆ ತಕ್ಕೊಂಡುಹೋಗಿ
2 ಅರಸುಗಳು 22:19
ಈ ಸ್ಥಳಕ್ಕೂ ಅದರ ನಿವಾಸಿಗಳಿಗೂ ವಿರೋಧವಾಗಿ ಅವರು ನಾಶವೂ ಶಾಪವೂ ಆಗುವದೆಂದು ನಾನು ಹೇಳಿದ್ದನ್ನು ನೀನು ಕೇಳಿದಾಗ ನಿನ್ನ ಹೃದಯವು ಮೆತ್ತಗಾಗಿ ನೀನು ನಿನ್ನನ್ನು ಕರ್ತನ ಮುಂದೆ ತಗ್ಗಿಸಿ ನಿನ್ನ ವಸ್ತ್ರಗಳನ್ನು ಹರಿದುಕೊಂಡು ನನ್ನ ಮುಂದೆ ಅತ್ತದ್ದನ್ನು ನಾನೇ ಕೇಳಿದ್ದೇನೆಂದು ಕರ್ತನು ಹೇಳುತ್ತಾನೆ.
ಎಜ್ರನು 10:3
ಆದ ಕಾರಣ ನನ್ನ ಒಡೆಯನ ಯೋಚನೆಯ ಪ್ರಕಾರವಾ ಗಿಯೂ ನಮ್ಮ ದೇವರ ಆಜ್ಞೆಗೆ ನಡುಗುವವರ ಯೋಚ ನೆಯ ಪ್ರಕಾರವಾಗಿಯೂ ಆ ಸಮಸ್ತ ಸ್ತ್ರೀಯರನ್ನೂ ಅವರಿಂದ ಹುಟ್ಟಿದವರನ್ನೂ ಹೊರಡಿಸಿ ಬಿಡಲು ನಮ್ಮ ದೇವರ ಸಂಗಡ ಒಡಂಬಡಿಕೆ ಮಾಡೋಣ; ಇದು ನ್ಯಾಯಪ್ರಮಾಣದ ಪ್ರಕಾರ ಮಾಡಲ್ಪಡಲಿ.
ಎಜ್ರನು 10:9
ಆಗ ಯೆಹೂದ ಮತ್ತು ಬೆನ್ಯಾವಿಾನಿನ ಮನುಷ್ಯರೆಲ್ಲರೂ ಮೂರು ದಿವಸಗಳೊಳಗೆ ಯೆರೂಸಲೇಮಿನಲ್ಲಿ ಕೂಡಿ ದರು. ಅದು ಒಂಭತ್ತನೇ ತಿಂಗಳ ಇಪ್ಪತ್ತನೇ ದಿವಸ ವಾಗಿತ್ತು. ಜನರೆಲ್ಲರು ದೇವರ ಆಲಯದ ಬೀದಿಯಲ್ಲಿ ಆ ಕಾರ್ಯಕ್ಕೊಸ್ಕರವೂ ಮಳೆಗೋಸ್ಕರವೂ ನಡುಗಿ ಕೂತುಕೊಂಡಿದ್ದರು.
ಯೋಬನು 29:14
ನೀತಿಯನ್ನು ಧರಿಸಿಕೊಂಡೆನು; ಅದೇ ನನಗೆ ವಸ್ತ್ರದಹಾಗಿತ್ತು; ನಿಲು ವಂಗಿಯ ಹಾಗೆಯೂ ಕಿರೀಟದ ಹಾಗೆಯೂ ನನ್ನ ನ್ಯಾಯವು ನನಗೆ ಇತ್ತು.
ಕೀರ್ತನೆಗಳು 11:7
ನೀತಿಯ ಕರ್ತನು ನೀತಿಯನ್ನು ಪ್ರೀತಿ ಮಾಡುತ್ತಾನೆ; ಆತನ ಮುಖವು ಯಥಾರ್ಥನನ್ನು ದೃಷ್ಟಿಸುತ್ತದೆ.
ಕೀರ್ತನೆಗಳು 45:7
ನೀನು ನೀತಿಯನ್ನು ಪ್ರೀತಿ ಮಾಡುತ್ತೀ; ದುಷ್ಟತ್ವವನ್ನು ಹಗೆಮಾಡುತ್ತೀ; ಆದದ ರಿಂದ ದೇವರು, ನಿನ್ನ ದೇವರು, ನಿನ್ನ ಸಂಗಡಿಗರಿಗಿಂತ ಹೆಚ್ಚಾಗಿ ನಿನ್ನನ್ನು ಆನಂದ ತೈಲದಿಂದ ಅಭಿಷೇಕಿಸಿ ದ್ದಾನೆ.
ಪ್ರಸಂಗಿ 5:8
ಬಡವರ ಹಿಂಸೆಯನ್ನೂ ಒಬ್ಬ ಅಧಿಪತಿಯಲ್ಲಿ ನೀತಿ ನ್ಯಾಯಗಳ ಬಲಾತ್ಕಾರದ ವಕ್ರತೆಯನ್ನೂ ನೀನು ನೋಡಿದರೆ ಆ ಸಂಗತಿಯಲ್ಲಿ ಆಶ್ಚರ್ಯಪಡಬೇಡ; ಉನ್ನತೋನ್ನತನು ಲಕ್ಷಿಸುತ್ತಾನೆ; ಅವರಿಗಿಂತ ಉನ್ನತವಾ ದವರು ಇದ್ದಾರೆ.
ಪ್ರಸಂಗಿ 10:16
ಓ ದೇಶವೇ, ಹುಡುಗನು ನಿನ್ನ ಅರಸನಾಗಿದ್ದರೆ ಮತ್ತು ನಿನ್ನ ಪ್ರಧಾನರು ಬೆಳಿಗ್ಗೆ ಊಟಮಾಡಿದ್ದರೆ ನಿನಗೆ ಅಯ್ಯೋ!
ಯಾಕೋಬನು 4:13
ಈ ಹೊತ್ತು ಇಲ್ಲವೆ ನಾಳೆ ನಾವು ಇಂಥ ಪಟ್ಟಣಕ್ಕೆ ಹೋಗಿ ಅಲ್ಲಿ ಒಂದು ವರುಷವಿದ್ದುಕೊಂಡು ಕೊಳ್ಳುವ ಮತ್ತು ಮಾರುವ ವ್ಯಾಪಾರವನ್ನು ಮಾಡಿ ಲಾಭವನ್ನು ಸಂಪಾದಿಸುತ್ತೇವೆ ಅನ್ನುವವರೇ, ಕೇಳಿರಿ.
ಅಪೊಸ್ತಲರ ಕೃತ್ಯಗ 9:6
ಆಗ ಅವನು ವಿಸ್ಮಯಗೊಂಡು ನಡು ಗುತ್ತಾ--ಕರ್ತನೇ, ನಾನು ಏನು ಮಾಡಬೇಕೆಂದು ನೀನು ಕೋರುತ್ತೀ ಅಂದನು. ಅದಕ್ಕೆ ಕರ್ತನು ಅವನಿಗೆ--ನೀನೆದ್ದು ಊರೊಳಕ್ಕೆ ಹೋಗು, ನೀನು ಮಾಡಬೇಕಾದದ್ದು ನಿನಗೆ ತಿಳಿಸಲ್ಪಡುವದು ಎಂದು ಹೇಳಿದನು.
ಅಪೊಸ್ತಲರ ಕೃತ್ಯಗ 17:13
ಆದರೆ ಪೌಲನು ಬೆರೋಯದಲ್ಲಿಯೂ ದೇವರ ವಾಕ್ಯವನ್ನು ಸಾರುತ್ತಾನೆಂದು ಥೆಸಲೊನೀಕದ ಯೆಹೂ ದ್ಯರಿಗೆ ತಿಳಿದಾಗ ಅವರು ಅಲ್ಲಿಗೂ ಬಂದು ಜನರ ಗುಂಪುಗಳನ್ನು ರೇಗಿಸಿದರು.
ಅಪೊಸ್ತಲರ ಕೃತ್ಯಗ 26:28
ಆಗ ಅಗ್ರಿಪ್ಪನು ಪೌಲನಿಗೆ--ನಾನು ಕ್ರೈಸ್ತನಾಗುವಂತೆ ನೀನು ನನ್ನನ್ನು ಬಹಳ ಮಟ್ಟಿಗೆ ಒಡಂಬಡಿಸುತ್ತೀ ಅಂದನು.
ರೋಮಾಪುರದವರಿಗೆ 2:16
ಮನುಷ್ಯರ ರಹಸ್ಯಗಳ ವಿಷಯ ವಾಗಿ ನನ್ನ ಸುವಾರ್ತೆಗನುಸಾರ ಯೇಸು ಕ್ರಿಸ್ತನ ಮುಖಾಂತರ ದೇವರು ನ್ಯಾಯತೀರಿಸುವ ದಿವಸದಲ್ಲಿ ಅವರು ತೀರ್ಪು ಹೊಂದುವರು.
ರೋಮಾಪುರದವರಿಗೆ 3:19
ಪ್ರತಿಯೊಂದು ಬಾಯಿ ಮುಚ್ಚಿ ಹೋಗುವಂತೆಯೂ ಲೋಕವೆಲ್ಲಾ ದೇವರ ಮುಂದೆ ದೋಷಿಯಾಗಿರುವಂತೆಯೂ ನ್ಯಾಯ ಪ್ರಮಾಣವು ಹೇಳುವವುಗಳನ್ನು ನ್ಯಾಯಪ್ರಮಾಣಕ್ಕೆ ಒಳಗಾದವರಿಗೆ ಹೇಳುತ್ತದೆಯೆಂದು ನಾವು ಬಲ್ಲೆವು.
ರೋಮಾಪುರದವರಿಗೆ 12:1
ಆದದರಿಂದ ಸಹೋದರರೇ, ನೀವು ನಿಮ್ಮ ದೇಹಗಳನ್ನು ಪರಿಶುದ್ಧವೂ ದೇವರಿಗೆ ಮೆಚ್ಚಿಕೆಯೂ ಆಗಿರುವ ಸಜೀವಯಜ್ಞವಾಗಿ ಸಮರ್ಪಿಸ ಬೇಕೆಂದು ದೇವರ ಕರುಣೆಯಿಂದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಇದೇ ನಿಮ್ಮ ಯೋಗ್ಯವಾದ ಸೇವೆ ಯಾಗಿದೆ.
ರೋಮಾಪುರದವರಿಗೆ 14:12
ಹೀಗಿರಲಾಗಿ ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ವಿಷಯವಾಗಿ ದೇವರಿಗೆ ಲೆಕ್ಕ ಒಪ್ಪಿಸಬೇಕು.
1 ಕೊರಿಂಥದವರಿಗೆ 14:24
ಆದರೆ ಎಲ್ಲರೂ ಪ್ರವಾದಿಸುವಾಗ ಒಬ್ಬ ಅವಿಶ್ವಾಸಿ ಯಾಗಲಿ ಇಲ್ಲವೆ ತಿಳುವಳಿಕೆಯಿಲ್ಲದವನಾಗಲಿ ಒಳಗೆ ಬಂದರೆ ಅವನು ಎಲ್ಲರಿಂದ ಅರುಹು ಹೊಂದುತ್ತಾನೆ, ಎಲ್ಲರಿಂದ ಪರಿಶೋಧಿತನಾಗುತ್ತಾನೆ.
ಗಲಾತ್ಯದವರಿಗೆ 3:22
ಹಾಗಾದರೆ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡು ವದರಿಂದ ಉಂಟಾಗುವ ಆ ವಾಗ್ದಾನವು ನಂಬುವ ವರಿಗೇ ಕೊಡಲ್ಪಡುವಂತೆ ಎಲ್ಲರೂ ಪಾಪಕ್ಕೊಳ ಗಾಗಿದ್ದಾರೆಂದು ಬರಹವು ತೀರ್ಮಾನಿಸಿತು.
ಇಬ್ರಿಯರಿಗೆ 12:21
ಇದಲ್ಲದೆ ಅಲ್ಲಿ ತೋರಿದ್ದು ಅಷ್ಟು ಭಯಂಕರವಾಗಿದ್ದದರಿಂದ ಮೋಶೆಯು--ನನಗೆ ಬಹು ಭಯವಾಗುತ್ತದೆ, ನಡು ಗುತ್ತೇನೆ ಎಂದು ಹೇಳಿದನು).
ಮತ್ತಾಯನು 14:5
ಆದದರಿಂದ ಅವನು ಯೋಹಾನನನ್ನು ಕೊಲ್ಲಬೇಕೆಂದಿದ್ದಾಗ ಜನ ಸಮೂಹಕ್ಕೆ ಭಯಪಟ್ಟನು; ಯಾಕಂದರೆ ಅವರು ಅವನನ್ನು ಪ್ರವಾದಿಯೆಂದು ಎಣಿಸಿದ್ದರು.
ಮತ್ತಾಯನು 22:5
ಕರೆಯಲ್ಪಟ್ಟವರು ಅದನ್ನು ಅಲಕ್ಷ್ಯಮಾಡಿ ಒಬ್ಬನು ತನ್ನ ಹೊಲಕ್ಕೂ ಇನ್ನೊಬ್ಬನು ತನ್ನ ವ್ಯಾಪಾರಕ್ಕೂ ಹೊರಟುಹೋದರು.
ಪ್ರಸಂಗಿ 12:14
ಒಳ್ಳೇದಾಗಲಿ, ಕೆಟ್ಟದ್ದಾಗಲಿ, ಪ್ರತಿಯೊಂದು ರಹಸ್ಯದ ಸಂಗತಿಗೂ ದೇವರು ಪ್ರತಿಯೊಂದು ಕೆಲಸ ವನ್ನು ಕುರಿತು ನ್ಯಾಯವಿಚಾರಣೆಗೆ ತರುವನು.
ಯೆಶಾಯ 1:18
ಈಗ ಬನ್ನಿರಿ, ನಾವು ಒಟ್ಟಾಗಿ ವಾದಿಸೋಣ ಎಂದು ಕರ್ತನು ಹೇಳುತ್ತಾನೆ; ನಿಮ್ಮ ಪಾಪಗಳು ಕಡು ಕೆಂಪಾಗಿದ್ದರೂ ಹಿಮದಂತೆ ಬಿಳುಪಾಗುವವು; ಕಡು ಕೆಂಪಿನಂತೆ ಕೆಂಪಾಗಿದ್ದರೂ ಉಣ್ಣೆಯಂತೆ ಆಗುವವು.
ಯೆಶಾಯ 28:6
ನ್ಯಾಯಕ್ಕೋಸ್ಕರ ಕೂತುಕೊಂಡವನಿಗೆ ನ್ಯಾಯದ ಆತ್ಮವೂ ಬಾಗಲಿನ ಕಡೆಗೆ ಯುದ್ಧವನ್ನು ತಿರುಗಿಸುವ ವನಿಗೆ ಪರಾಕ್ರಮವೂ ಆಗಿರುವನು.
ಯೆಶಾಯ 66:2
ಇವುಗಳ ನ್ನೆಲ್ಲಾ ನನ್ನ ಕೈ ಉಂಟುಮಾಡಿತು; ಇವುಗಳೆಲ್ಲಾ ಇದ್ದವೆಂದು ಕರ್ತನು ಅನ್ನುತ್ತಾನೆ. ಆದರೆ ಇವನ ಮೇಲೆ ದೃಷ್ಟಿ ಇಡುವೆನು ದೀನನೂ ಜಜ್ಜಿದ ಆತ್ಮವುಳ್ಳ ವನೂ ನನ್ನ ವಾಕ್ಯಕ್ಕೆ ನಡುಗುವವನೂ ಯಾವನೋ ಅವನ ಮೇಲೆಯೂ ದೃಷ್ಟಿ ಇಡುವೆನು.
ಯೆರೆಮಿಯ 22:3
ನ್ಯಾಯವನ್ನೂ ನೀತಿಯನ್ನೂ ನಡಿಸಿರಿ; ಸುಲಿಗೆಯಾದ ವನನ್ನು ಬಲಾತ್ಕಾರಿಯ ಕೈಯೊಳಗಿಂದ ತಪ್ಪಿಸಿರಿ; ಪರದೇಶಸ್ಥನಿಗೆ ದಿಕ್ಕಿಲ್ಲದವನಿಗೆ ವಿಧವೆಗೆ ಉಪದ್ರವವ ನ್ನಾದರೂ ಬಲಾತ್ಕಾರವನ್ನಾದರೂ ಮಾಡಬೇಡಿರಿ; ಇಲ್ಲವೆ ಈ ಸ್ಥಳದಲ್ಲಿ ನಿರಪರಾಧದ ರಕ್ತವನ್ನು ಚೆಲ್ಲ ಬೇಡಿರಿ.
ದಾನಿಯೇಲನು 5:1
ಅರಸನಾದ ಬೆಲ್ಯಚ್ಚರನು ತನ್ನ ಪ್ರಭುಗಳಲ್ಲಿ ಸಾವಿರ ಮಂದಿಗೆ ದೊಡ್ಡ ಔತಣವನ್ನು ಮಾಡಿಸಿ, ಆ ಸಾವಿರ ಮಂದಿಯ ಮುಂದೆ ಅವನು ದ್ರಾಕ್ಷಾರಸವನ್ನು ಕುಡಿದನು.
ದಾನಿಯೇಲನು 5:30
ಅದೇ ರಾತ್ರಿಯಲ್ಲಿ ಕಸ್ದೀಯರ ಅರಸನಾದ ಬೇಲ್ಯಚ್ಚರನು ಕೊಲ್ಲಲ್ಪಟ್ಟನು.
ಹೋಶೇ 7:5
ನಮ್ಮ ಅರಸನ ದಿನದಲ್ಲಿ ಪ್ರಧಾನರು ದ್ರಾಕ್ಷಾರಸದ ಬುದ್ದಲಿಗಳಿಂದ ಅಸ್ವಸ್ಥರಾ ಗುತ್ತಾರೆ, ಅವನು ಪರಿಹಾಸ್ಯಗಾರರ ಸಂಗಡ ತನ್ನ ಕೈಚಾಚುತ್ತಾನೆ.
ಹಬಕ್ಕೂಕ್ಕ 3:16
ನಾನು ಕೇಳಿದಾಗ ನನ್ನ ಹೊಟ್ಟೆಯು ತಳಮಳಗೊಂಡಿತು, ಆ ಶಬ್ದಕ್ಕೆ ನನ್ನ ತುಟಿಗಳು ಅದರಿದವು; ಇಕ್ಕಟ್ಟಿನ ದಿನದಲ್ಲಿ ನಾನು ವಿಶ್ರಾಂತಿಯನ್ನು ಹೊಂದುವ ಹಾಗೆ ಕೊಳೆಯುವಿಕೆಯು ನನ್ನ ಎಲುಬುಗಳಲ್ಲಿ ಸೇರಿತು, ನಾನು ನಿಂತ ಹಾಗೆಯೇ ನಡುಗಿದೆನು; ಆತನು ಜನರ ಬಳಿಗೆ ಬರುವಾಗ ತನ್ನ ಸೈನ್ಯಗಳ ಕೂಡ ಅವರ ಮೇಲೆ ದಾಳಿ ಮಾಡುವನು.
ಹಗ್ಗಾಯ 1:2
ಸೈನ್ಯಗಳ ಕರ್ತನು ಮಾತನಾಡಿ ಹೀಗೆ ಹೇಳುತ್ತಾನೆ, ಏನಂದರೆ--ಕಾಲವು ಅಂದರೆ ಕರ್ತನ ಆಲಯವನ್ನು ಕಟ್ಟುವ ಕಾಲವು ಬರಲಿಲ್ಲ ಎಂದು ಈ ಜನರು ಅನ್ನು ತ್ತಾರೆ.
ಅಪೊಸ್ತಲರ ಕೃತ್ಯಗ 24:26
ಫೇಲಿಕ್ಸನು ಪೌಲನನ್ನು ಬಿಡಿಸುವಂತೆ ಅವನಿಂದ ತನಗೆ ಹಣ ಸಿಕ್ಕೀತೆಂದು ನಿರೀಕ್ಷಿಸಿದ ಕಾರಣ ಪದೇ ಪದೇ ಅವನನ್ನು ಕರೆಯಿಸಿ ಅವನೊಂದಿಗೆ ಸಂಭಾಷಣೆ ಮಾಡುತ್ತಿದ್ದನು.