ಅಪೊಸ್ತಲರ ಕೃತ್ಯಗ 26:17 in Kannada

ಕನ್ನಡ ಕನ್ನಡ ಬೈಬಲ್ ಅಪೊಸ್ತಲರ ಕೃತ್ಯಗ ಅಪೊಸ್ತಲರ ಕೃತ್ಯಗ 26 ಅಪೊಸ್ತಲರ ಕೃತ್ಯಗ 26:17

Acts 26:17
ಈ ಜನರಿಂದ ಮತ್ತು ಈಗ ನಾನು ನಿನ್ನನ್ನು ಕಳುಹಿಸುವ ಅನ್ಯಜನರಿಂದ ನಿನ್ನನ್ನು ಬಿಡಿಸುವದಕ್ಕೂ

Acts 26:16Acts 26Acts 26:18

Acts 26:17 in Other Translations

King James Version (KJV)
Delivering thee from the people, and from the Gentiles, unto whom now I send thee,

American Standard Version (ASV)
delivering thee from the people, and from the Gentiles, unto whom I send thee,

Bible in Basic English (BBE)
And I will keep you safe from the people, and from the Gentiles, to whom I send you,

Darby English Bible (DBY)
taking thee out from among the people, and the nations, to whom *I* send thee,

World English Bible (WEB)
delivering you from the people, and from the Gentiles, to whom I send you,

Young's Literal Translation (YLT)
delivering thee from the people, and the nations, to whom now I send thee,

Delivering
ἐξαιρούμενόςexairoumenosayks-ay-ROO-may-NOSE
thee
σεsesay
from
ἐκekake
the
τοῦtoutoo
people,
λαοῦlaoula-OO
and
καὶkaikay
the
from
τῶνtōntone
Gentiles,
ἐθνῶνethnōnay-THNONE
unto
εἰςeisees
whom
οὓςhousoos
now
νῦνnynnyoon
I
send
σεsesay
thee,
ἀποστέλλωapostellōah-poh-STALE-loh

Cross Reference

ಅಪೊಸ್ತಲರ ಕೃತ್ಯಗ 9:15
ಆದರೆ ಕರ್ತನು ಅವನಿಗೆ--ನೀನು ಹೋಗು; ಯಾಕಂದರೆ ಆ ಮನುಷ್ಯನು ಅನ್ಯಜನರ ಮುಂದೆಯೂ ಅರಸುಗಳ ಮುಂದೆಯೂ ಇಸ್ರಾಯೇಲ್ಯರ ಮುಂದೆಯೂ ನನ್ನ ಹೆಸರನ್ನು ಹೊರುವದಕ್ಕಾಗಿ ನಾನು ಆರಿಸಿಕೊಂಡ ಪಾತ್ರೆಯಾಗಿದ್ದಾನೆ.

ಯೆರೆಮಿಯ 1:19
ಅವರು ನಿನಗೆ ವಿರೋಧವಾಗಿ ಯುದ್ಧ ಮಾಡುವರು; ಆದರೆ ನಿನ್ನನ್ನು ಗೆಲ್ಲುವದಿಲ್ಲ; ನಿನ್ನನ್ನು ತಪ್ಪಿಸುವದಕ್ಕೆ ನಾನೇ ನಿನ್ನ ಸಂಗಡ ಇದ್ದೇನೆ ಎಂದು ಕರ್ತನು ಅನ್ನುತ್ತಾನೆ.

1 ತಿಮೊಥೆಯನಿಗೆ 2:7
ಆ ಸಾಕ್ಷಿಯನ್ನು ಪ್ರಸಿದ್ಧಿ ಪಡಿಸುವದಕ್ಕಾಗಿಯೇ ನಾನು ಸಾರುವವನಾಗಿಯೂ ಅಪೊಸ್ತಲನಾಗಿಯೂ ನಂಬಿಕೆಯಿಂದ ಮತ್ತು ಸತ್ಯದಿಂದ ಅನ್ಯಜನರಿಗೆ ಬೋಧಿಸುವವನಾಗಿಯೂ ನೇಮಿಸಲ್ಪ ಟ್ಟೆನು. (ಇದನ್ನು ಸುಳ್ಳಾಡದೆ ಕ್ರಿಸ್ತನಲ್ಲಿ ಸತ್ಯವಾಗಿ ಹೇಳುತ್ತೇನೆ.)

ರೋಮಾಪುರದವರಿಗೆ 11:13
ಅನ್ಯಜನರಾದ ನಿಮ್ಮೊಂದಿಗೆ ನಾನು ಮಾತನಾಡು ತ್ತೇನೆ. ನಾನು ಅನ್ಯಜನಗಳಿಗೆ ಅಪೊಸ್ತಲನಾಗಿ ರುವದರಿಂದ ನನ್ನ ಉದ್ಯೋಗವನ್ನು ಗಣನೆಗೆ ತರುತ್ತೇನೆ.

ಯೆರೆಮಿಯ 1:8
ಅವರಿಗೆ ಭಯಪಡಬೇಡ; ನಿನ್ನನ್ನು ತಪ್ಪಿಸುವದಕ್ಕೆ ನಾನೇ ನಿನ್ನ ಸಂಗಡ ಇದ್ದೇನೆ ಎಂದು ಕರ್ತನು ಅಂದನು.

2 ಕೊರಿಂಥದವರಿಗೆ 1:8
ಸಹೋದರರೇ, ಆಸ್ಯದಲ್ಲಿ ನಮ್ಮಗುಂಟಾದ ಉಪದ್ರವವನ್ನು ನೀವು ತಿಳಿಯ ಬೇಕೆಂದು ನಾನು ಅಪೇಕ್ಷಿಸುತ್ತೇನೆ; ಹೇಗಂದರೆ ನಾವು ಜೀವದ ನಿರೀಕ್ಷೆಯಿಲ್ಲದವರಾಗುವಷ್ಟೂ ಅಳತೆಗೆಟ್ಟು ಬಲ ವಿಾರಿ ಕುಗ್ಗಿ ಹೋದೆವು.

ರೋಮಾಪುರದವರಿಗೆ 15:16
ಹೀಗೆ ಅನ್ಯಜನಗಳೆಂಬ ಅರ್ಪಣೆಯು ಪವಿತ್ರಾತ್ಮನ ಮೂಲಕ ಶುದ್ಧೀಕರಿಸಲ್ಪಟ್ಟು ಆತನಿಂದ ಅಂಗೀಕಾರವಾಗುವಂತೆ ನಾನು ದೇವರ ಸುವಾರ್ತಾ ಸೇವೆಯನ್ನು ನಡಿಸುತ್ತಾ ಅನ್ಯಜನರಿಗೆ ಯೇಸು ಕ್ರಿಸ್ತನ ಸೇವಕನಾಗಿರುವೆನು.

ಅಪೊಸ್ತಲರ ಕೃತ್ಯಗ 28:28
ಆದಕಾರಣ ದೇವರ ರಕ್ಷಣೆಯು ಅನ್ಯಜನಾಂಗದವರಿಗೆ ಕಳುಹಿಸಲ್ಪಟ್ಟಿದೆ; ಅದನ್ನು ಅವರು ಕೇಳುವರು ಎಂಬದಾಗಿ ನಿಮಗೆ ತಿಳಿದಿರಲಿ ಅಂದನು.

ಅಪೊಸ್ತಲರ ಕೃತ್ಯಗ 27:42
ಸೆರೆಯವರಲ್ಲಿ ಯಾರಾದರೂ ಈಜಿ ತಪ್ಪಿಸಿಕೊಂಡಾರೆಂದು ಅವರನ್ನು ಕೊಲ್ಲಬೇಕೆಂಬದಾಗಿ ಸೈನಿಕರು ಆಲೋಚಿಸಿದರು.

2 ಕೊರಿಂಥದವರಿಗೆ 4:8
ಎಲ್ಲಾ ಕಡೆಗಳಲ್ಲಿ ನಮಗೆ ಕಳವಳ ವಿದ್ದರೂ ನಾವು ಸಂಕಟಪಡುವವರಲ್ಲ; ನಾವು ದಿಕ್ಕು ಕಾಣದವರಾಗಿದ್ದರೂ ಕೇವಲ ದೆಸೆಗೆಟ್ಟವರಲ್ಲ.

2 ಕೊರಿಂಥದವರಿಗೆ 11:23
ಅವರು ಕ್ರಿಸ್ತನ ಸೇವಕರೋ? (ನಾನು ಬುದ್ಧಿಹೀನನಂತೆ ಮಾತನಾಡು ತ್ತೇನೆ) ಅವರಿಗಿಂತ ನಾನು ಹೆಚ್ಚಾಗಿ ಸೇವೆ ಮಾಡುವವ ನಾಗಿದ್ದೇನೆ; ಹೆಚ್ಚಾಗಿ ಪ್ರಯಾಸಪಟ್ಟೆನು. ಮಿತಿವಿಾರಿ ಪೆಟ್ಟುಗಳನ್ನು ತಿಂದೆನು; ಹೆಚ್ಚಾಗಿ ಸೆರೆಮನೆಗಳಲ್ಲಿ ಬಿದ್ದೆನು; ಅನೇಕ ಸಾರಿ ಮರಣಗಳಲ್ಲಿ ಸಿಕ್ಕಿಕೊಂಡೆನು.

ಗಲಾತ್ಯದವರಿಗೆ 2:9
ಸ್ತಂಭಗಳೆಂದು ಕಾಣಿಸಿ ಕೊಂಡಿರುವ ಯಾಕೋಬ ಕೇಫ ಯೋಹಾನರು ನನಗೆ ದಯಪಾಲಿಸಿರುವ ಕೃಪೆಯನ್ನು ತಿಳಿದುಕೊಂಡು ಅನ್ಯೋ ನ್ಯತೆಯನ್ನು ತೋರಿಸುವದಕ್ಕಾಗಿ ನನಗೂ ಬಾರ್ನಬ ನಿಗೂ ಬಲಗೈಕೊಟ್ಟು --ತಾವು ಸುನ್ನತಿಯವರ ಬಳಿಗೂ ನಾವು ಅನ್ಯಜನರ ಬಳಿಗೂ ಹೋಗುವದಕ್ಕೆ ಹೇಳಿ ದರು.

ಎಫೆಸದವರಿಗೆ 3:7
ದೇವರು ತನ್ನ ಶಕ್ತಿಯ ಪ್ರಯೋಗದಲ್ಲಿ ನನಗೆ ಅನುಗ್ರಹಿಸಿದ ಕೃಪಾದಾನಕ್ಕನುಸಾರವಾಗಿ ನಾನು ಈ ಸುವಾರ್ತೆಗೆ ಸೇವಕನಾದೆನು.

2 ತಿಮೊಥೆಯನಿಗೆ 1:11
ಅದಕ್ಕೋಸ್ಕರ ನಾನು ಸಾರುವವನಾಗಿಯೂ ಅಪೊಸ್ತಲನಾಗಿಯೂ ಅನ್ಯಜನ ರಿಗೆ ಉಪದೇಶಕನಾಗಿಯೂ ನೇಮಿಸಲ್ಪಟ್ಟೆನು.

2 ತಿಮೊಥೆಯನಿಗೆ 3:11
ಅಂತಿಯೋಕ್ಯ ಇಕೋನ್ಯ ಲುಸ್ತ್ರ ಎಂಬ ಪಟ್ಟಣಗಳಲ್ಲಿ ನನಗೆ ಸಂಭವಿಸಿದ ಹಿಂಸೆಗಳನ್ನೂ ಕಷ್ಟಾನುಭವಗಳನ್ನೂ ನಾನು ಎಂಥೆಂಥ ಹಿಂಸೆಗಳನ್ನು ಸಹಿಸಿಕೊಂಡೆನೆಂಬ ದನ್ನೂ ನೀನು ಪೂರ್ಣವಾಗಿ ತಿಳಿದವನಾಗಿದ್ದೀ. ಆದರೆ ಅವೆಲ್ಲವುಗಳೊಳಗಿಂದ ಕರ್ತನು ನನ್ನನ್ನು ಬಿಡಿಸಿದನು.

2 ತಿಮೊಥೆಯನಿಗೆ 4:16
ನಾನು ಮೊದಲನೆಯ ಸಾರಿ ಪ್ರತಿವಾದ ಮಾಡಿದಾಗ ಯಾರೂ ನನ್ನೊಂದಿಗೆ ನಿಲ್ಲಲಿಲ್ಲ. ಎಲ್ಲರೂ ನನ್ನನ್ನು ತೊರೆದುಬಿಟ್ಟರು; ಇದು ಅವರ ಲೆಕ್ಕಕ್ಕೆ ಸೇರಿಸಲ್ಪಡದೆ ಇರಲಿ ಎಂದು ನಾನು ದೇವರನ್ನು ಪ್ರಾರ್ಥಿಸುತ್ತೇನೆ.

ಅಪೊಸ್ತಲರ ಕೃತ್ಯಗ 25:9
ಆದರೆ ಯೆಹೂದ್ಯರನ್ನು ಸಂತೋಷ ಪಡಿಸುವದಕ್ಕಾಗಿ ಫೆಸ್ತನು ಪೌಲನಿಗೆ--ನೀನು ಯೆರೂಸಲೇಮಿಗೆ ಬಂದು ನನ್ನ ಮುಂದೆ ಇವುಗಳ ವಿಷಯವಾಗಿ ವಿಚಾರಿಸಲ್ಪಡುವದಕ್ಕೆ ನಿನಗೆ ಇಷ್ಟ ವಿದೆಯೋ ಎಂದು ಕೇಳಿದನು.

ಅಪೊಸ್ತಲರ ಕೃತ್ಯಗ 25:3
ಅವನನ್ನು ಕೊಲ್ಲುವದಕ್ಕಾಗಿ ದಾರಿಯಲ್ಲಿ ಹೊಂಚು ಹಾಕುತ್ತಾ ಅವನನ್ನು ಯೆರೂಸಲೇಮಿನಿಂದ ಕರೆಯಿಸ ಬೇಕೆಂದು ಅವನಿಗೆ ವಿರೋಧವಾಗಿ ಬೇಡಿಕೊಂಡರು.

ಅಪೊಸ್ತಲರ ಕೃತ್ಯಗ 23:10
ಅಲ್ಲಿ ದೊಡ್ಡ ಭೇದ ಉಂಟಾದಾಗ ಅವರು ಪೌಲನನ್ನು ಎಳೆದಾಡಿ ತುಂಡುತುಂಡಾಗಿ ಮಾಡಿ ಯಾರು ಎಂದು ಮುಖ್ಯ ನಾಯಕನು ಭಯಪಟ್ಟು ಅವನನ್ನು ಅವರೊಳಗಿಂದ ಬಲವಂತವಾಗಿ ಕೋಟೆಯೊಳಗೆ ತರಬೇಕೆಂದು ಸೈನಿಕರಿಗೆ ಆಜ್ಞಾಪಿಸಿದನು.

ಕೀರ್ತನೆಗಳು 34:19
ನೀತಿವಂತನಿಗೆ ಬರುವ ಕೇಡುಗಳು ಬಹಳವಾಗಿವೆ; ಆದರೆ ಅವೆಲ್ಲವುಗಳಿಂದ ಕರ್ತನು ಅವನನ್ನು ಬಿಡಿಸುತ್ತಾನೆ.

ಕೀರ್ತನೆಗಳು 37:32
ದುಷ್ಟನು ನೀತಿವಂತನಿಗಾಗಿ ಹೊಂಚು ಹಾಕು ತ್ತಾನೆ. ಅವನನ್ನು ಕೊಲ್ಲಲು ಹುಡುಕುತ್ತಾನೆ.

ಅಪೊಸ್ತಲರ ಕೃತ್ಯಗ 9:23
ಅನೇಕ ದಿವಸಗಳು ಹೋದಮೇಲೆ ಯೆಹೂ ದ್ಯರು ಅವನನ್ನು ಕೊಲ್ಲಬೇಕೆಂದು ಆಲೋಚನೆ ಮಾಡಿ ಕೊಂಡರು.

ಅಪೊಸ್ತಲರ ಕೃತ್ಯಗ 9:29
ಕರ್ತನಾದ ಯೇಸುವಿನ ಹೆಸರಿನಲ್ಲಿ ಧೈರ್ಯದಿಂದ ಮಾತನಾಡಿ ಗ್ರೀಕರೊಂದಿಗೆ ತರ್ಕಿಸುತ್ತಿ ದ್ದನು. ಆದರೆ ಅವರು ಅವನನ್ನು ಕೊಲ್ಲುವದಕ್ಕೆ ಪ್ರಯತ್ನ ಮಾಡಿದರು.

ಅಪೊಸ್ತಲರ ಕೃತ್ಯಗ 13:50
ಆದರೆ ಭಕ್ತಿಯುಳ್ಳ ಮತ್ತು ಗೌರವವುಳ್ಳ ಸ್ತ್ರೀಯರನ್ನೂ ಪಟ್ಟಣದ ಪ್ರಮುಖರನ್ನೂ ಯೆಹೂದ್ಯರು ಪ್ರೇರಿಸಿ ಪೌಲ ಬಾರ್ನಬರಿಗೆ ವಿರೋಧವಾಗಿ ಹಿಂಸೆ ಯನ್ನೆಬ್ಬಿಸಿ ತಮ್ಮ ಮೇರೆಗಳಿಂದ ಅವರನ್ನು ಅಟ್ಟಿಬಿಟ್ಟರು.

ಅಪೊಸ್ತಲರ ಕೃತ್ಯಗ 14:5
ಅನ್ಯಜನರೂ ಯೆಹೂದ್ಯರೂ ಕೂಡಿ ತಮ್ಮ ಅಧಿಪತಿಗಳೊಂದಿಗೆ ಅಪೊಸ್ತಲರನ್ನು ಅವಮಾನಪಡಿಸುವದಕ್ಕೂ ಕಲ್ಲೆಸೆದು ಕೊಲ್ಲುವದಕ್ಕೂ ಪ್ರವರ್ತಿಸಿದಾಗ

ಅಪೊಸ್ತಲರ ಕೃತ್ಯಗ 14:19
ತರುವಾಯ ಅಂತಿಯೋಕ್ಯದಿಂದಲೂ ಇಕೋನ್ಯ ದಿಂದಲೂ ಕೆಲವು ಯೆಹೂದ್ಯರು ಅಲ್ಲಿಗೆ ಬಂದು ಜನರನ್ನು ಪ್ರೇರೇಪಿಸಿ ಪೌಲನ ಮೇಲೆ ಕಲ್ಲೆಸೆದು ಅವನು ಸತ್ತನೆಂದು ಭಾವಿಸಿ ಪಟ್ಟಣದ ಹೊರಕ್ಕೆ ಎಳೆದುಬಿಟ್ಟರು.

ಅಪೊಸ್ತಲರ ಕೃತ್ಯಗ 16:39
ಅವರ ಬಳಿಗೆ ಬಂದು ಅವರು ವಿನಯವಾಗಿ ಮಾತನಾಡಿ ಹೊರಗೆ ಕರೆದುಕೊಂಡು ಹೋಗಿ ಊರನ್ನು ಬಿಟ್ಟು ಹೋಗ ಬೇಕೆಂದು ಅವರನ್ನು ಬೇಡಿಕೊಂಡರು.

ಅಪೊಸ್ತಲರ ಕೃತ್ಯಗ 17:10
ಕೂಡಲೆ ಸಹೊದರರು ರಾತ್ರಿಯಲ್ಲಿ ಪೌಲಸೀಲ ರನ್ನು ಬೆರೋಯಕ್ಕೆ ಕಳುಹಿಸಿಬಿಟ್ಟರು; ಅವರು ಅಲ್ಲಿಗೆ ಸೇರಿ ಯೆಹೂದ್ಯರ ಸಭಾಮಂದಿರದೊಳಕ್ಕೆ ಹೋದರು.

ಅಪೊಸ್ತಲರ ಕೃತ್ಯಗ 17:14
ಕೂಡಲೆ ಸಹೋದರರು ಪೌಲನನ್ನು ಸಮುದ್ರದ ತನಕ ಸಾಗ ಕಳುಹಿಸಿದರು. ಆದರೆ ಸೀಲನೂ ತಿಮೊಥೆಯನೂ ಅಲ್ಲೇ ನಿಂತರು.

ಅಪೊಸ್ತಲರ ಕೃತ್ಯಗ 18:10
ನಾನೇ ನಿನ್ನೊಂದಿಗಿದ್ದೇನೆ; ಯಾರೂ ನಿನ್ನ ಮೇಲೆ ಬಿದ್ದು ಕೇಡುಮಾಡುವದಿಲ್ಲ; ಈ ಪಟ್ಟಣದಲ್ಲಿ ಬಹಳ ಮಂದಿ ನನಗೆ ಇದ್ದಾರೆ ಎಂದು ಹೇಳಿದನು.

ಅಪೊಸ್ತಲರ ಕೃತ್ಯಗ 18:12
ಗಲ್ಲಿಯೋನನು ಅಖಾಯದ ಪ್ರತಿನಿಧಿ ಯಾಗಿದ್ದಾಗ ಯೆಹೂದ್ಯರು ಒಮ್ಮನಸ್ಸಿನಿಂದ ಪೌಲನಿಗೆ ವಿರೋಧವಾಗಿ ಧಂಗೆ ಎಬ್ಬಿಸಿ ನ್ಯಾಯಸ್ಥಾನದ ಮುಂದೆ ಹಿಡುಕೊಂಡು ಬಂದು--

ಅಪೊಸ್ತಲರ ಕೃತ್ಯಗ 19:28
ಅವರು ಈ ಮಾತುಗಳನ್ನು ಕೇಳಿ ರೌದ್ರವುಳ್ಳವರಾಗಿ-- ಎಫೆಸದವರ ಡಯಾನಿಯು ದೊಡ್ಡವಳು ಎಂದು ಕೂಗುತ್ತಾ ಹೇಳಿದರು.

ಅಪೊಸ್ತಲರ ಕೃತ್ಯಗ 21:28
ಇಸ್ರಾಯೇಲ್‌ ಜನರೇ, ಸಹಾಯ ಮಾಡಿರಿ; ಎಲ್ಲಾ ಕಡೆಯಲ್ಲಿ ಜನರಿಗೂ ಈ ನ್ಯಾಯ ಪ್ರಮಾಣಕ್ಕೂ ಈ ಸ್ಥಳಕ್ಕೂ ವಿರೋಧವಾಗಿ ಎಲ್ಲರಿಗೂ ಬೋಧಿಸುತ್ತಿದ್ದವನು ಈ ಮನುಷ್ಯನೇ; ಇದಲ್ಲದೆ ಗ್ರೀಕರನ್ನು ಸಹ ಈ ದೇವಾಲಯದೊಳಗೆ ಕರೆದು ಕೊಂಡು ಬಂದು ಈ ಪರಿಶುದ್ಧಸ್ಥಳವನ್ನು ಹೊಲೆ ಮಾಡಿದ್ದಾನೆ ಎಂದು ಕೂಗಿ

ಅಪೊಸ್ತಲರ ಕೃತ್ಯಗ 22:21
ಅದಕ್ಕೆ ಆತನು--ಹೋಗು, ನಾನು ನಿನ್ನನ್ನು ದೂರಕ್ಕೆ ಅನ್ಯಜನರ ಬಳಿಗೆ ಕಳುಹಿಸುವೆನು ಎಂದು ನನಗೆ ಹೇಳಿದನು.

1 ಪೂರ್ವಕಾಲವೃತ್ತಾ 16:35
ನಮ್ಮ ರಕ್ಷಣೆಯ ದೇವರೇ, ನಾವು ನಿನ್ನ ಪರಿಶುದ್ಧ ಹೆಸ ರನ್ನು ಕೊಂಡಾಡಿ ನಿನ್ನ ಸ್ತೋತ್ರದಲ್ಲಿ ಹೆಚ್ಚಳ ಪಡುವ ಹಾಗೆ ನಮ್ಮನ್ನು ರಕ್ಷಿಸು; ಜನಾಂಗಗಳೊಳಗಿಂದ ನಮ್ಮನ್ನು ತೆಗೆದು ಕೂಡಿಸು.