ದಾನಿಯೇಲನು 3:28 in Kannada

ಕನ್ನಡ ಕನ್ನಡ ಬೈಬಲ್ ದಾನಿಯೇಲನು ದಾನಿಯೇಲನು 3 ದಾನಿಯೇಲನು 3:28

Daniel 3:28
ಆಮೇಲೆ ನೆಬೂಕದ್ನೆಚ್ಚರನು ಮಾತನಾಡಿ--ಶದ್ರಕ್‌ ಮೇಷಕ್‌ ಅಬೇದ್‌ನೆಗೂ ಎಂಬವರ ದೇವರಿಗೆ ಸ್ತೋತ್ರ ವಾಗಲಿ. ಆತನು ತನ್ನ ದೂತನನ್ನು ಕಳುಹಿಸಿ ತನ್ನಲ್ಲಿ ನಂಬಿಕೆ ಯಿಟ್ಟಂತ ಅರಸನ ಆಜ್ಞೆಯನ್ನು ವಿಾರಿದಂತಹ ಸ್ವಂತ ದೇವರನ್ನೇ ಹೊರತು ಬೇರೆ ಯಾವ ದೇವರನ್ನೂ ಸೇವಿಸದೆ ಆರಾಧಿಸದೇ ಇರುವ ಹಾಗೆ ತಮ್ಮ ಶರೀರ ವನ್ನು ಒಪ್ಪಿಸಿದಂತೆ ಸೇವಕರುಗಳನ್ನು ರಕ್ಷಿಸಿದ್ದಾನೆ.

Daniel 3:27Daniel 3Daniel 3:29

Daniel 3:28 in Other Translations

King James Version (KJV)
Then Nebuchadnezzar spake, and said, Blessed be the God of Shadrach, Meshach, and Abednego, who hath sent his angel, and delivered his servants that trusted in him, and have changed the king's word, and yielded their bodies, that they might not serve nor worship any god, except their own God.

American Standard Version (ASV)
Nebuchadnezzar spake and said, Blessed be the God of Shadrach, Meshach, and Abed-nego, who hath sent his angel, and delivered his servants that trusted in him, and have changed the king's word, and have yielded their bodies, that they might not serve nor worship any god, except their own God.

Bible in Basic English (BBE)
Nebuchadnezzar made answer and said, Praise be to the God of Shadrach, Meshach, and Abed-nego, who has sent his angel and kept his servants safe who had faith in him, and who put the king's word on one side and gave up their bodies to the fire, so that they might not be servants or worshippers of any other god but their God.

Darby English Bible (DBY)
Nebuchadnezzar spoke and said, Blessed be the God of Shadrach, Meshach, and Abed-nego, who hath sent his angel, and delivered his servants who trusted in him, and who changed the king's word, and yielded their bodies, that they might not serve nor worship any god, except their own God!

World English Bible (WEB)
Nebuchadnezzar spoke and said, Blessed be the God of Shadrach, Meshach, and Abednego, who has sent his angel, and delivered his servants who trusted in him, and have changed the king's word, and have yielded their bodies, that they might not serve nor worship any god, except their own God.

Young's Literal Translation (YLT)
Nebuchadnezzar hath answered and hath said, `Blessed `is' the God of Shadrach, Meshach, and Abed-Nego, who hath sent His messenger, and hath delivered His servants who trusted on Him, and the word of the king changed, and gave up their bodies that they might not serve nor do obeisance to any god except to their own God.

Then
Nebuchadnezzar
עָנֵ֨הʿānēah-NAY
spake,
נְבֽוּכַדְנֶצַּ֜רnĕbûkadneṣṣarneh-voo-hahd-neh-TSAHR
and
said,
וְאָמַ֗רwĕʾāmarveh-ah-MAHR
Blessed
בְּרִ֤יךְbĕrîkbeh-REEK
God
the
be
אֱלָהֲהוֹן֙ʾĕlāhăhônay-la-huh-HONE
of
דִּֽיdee
Shadrach,
שַׁדְרַ֤ךְšadrakshahd-RAHK
Meshach,
מֵישַׁךְ֙mêšakmay-shahk
Abed-nego,
and
וַעֲבֵ֣דwaʿăbēdva-uh-VADE
who
נְג֔וֹnĕgôneh-ɡOH
hath
sent
דִּֽיdee
his
angel,
שְׁלַ֤חšĕlaḥsheh-LAHK
delivered
and
מַלְאֲכֵהּ֙malʾăkēhmahl-uh-HAY
his
servants
וְשֵׁיזִ֣בwĕšêzibveh-shay-ZEEV
that
לְעַבְד֔וֹהִיlĕʿabdôhîleh-av-DOH-hee
trusted
דִּ֥יdee
him,
in
הִתְרְחִ֖צוּhitrĕḥiṣûheet-reh-HEE-tsoo
and
have
changed
עֲל֑וֹהִיʿălôhîuh-LOH-hee
the
king's
וּמִלַּ֤תûmillatoo-mee-LAHT
word,
מַלְכָּא֙malkāʾmahl-KA
and
yielded
שַׁנִּ֔יוšannîwsha-NEEOO
their
bodies,
וִיהַ֣בוּwîhabûvee-HA-voo
that
גֶשְׁמְיה֗וֹןgešmĕyhônɡesh-meh-HONE
not
might
they
דִּ֠יdee
serve
לָֽאlāʾla
nor
יִפְלְח֤וּןyiplĕḥûnyeef-leh-HOON
worship
וְלָֽאwĕlāʾveh-LA
any
יִסְגְּדוּן֙yisgĕdûnyees-ɡeh-DOON
god,
לְכָלlĕkālleh-HAHL
except
אֱלָ֔הּʾĕlāhay-LA
their
own
God.
לָהֵ֖ןlāhēnla-HANE
לֵאלָֽהֲהֽוֹן׃lēʾlāhăhônlay-LA-huh-HONE

Cross Reference

ಯೆಶಾಯ 26:3
ದೃಢಮನಸ್ಸುಳ್ಳವನನ್ನು ಪೂರ್ಣ ಸಮಾಧಾನದಲ್ಲಿ ನೆಲೆಗೊಳಿಸಿ ಕಾಯುವಿ. ಅವನಿಗೆ ನಿನ್ನಲ್ಲಿ ಭರವಸವಿದೆ.

ಕೀರ್ತನೆಗಳು 34:7
ಆತನಿಗೆ ಭಯಪಡುವವರ ಸುತ್ತಲೂ ಕರ್ತನ ದೂತನು ಇಳು ಕೊಂಡು ಅವರನ್ನು ಕಾಪಾಡುತ್ತಾನೆ.

ಅಪೊಸ್ತಲರ ಕೃತ್ಯಗ 5:19
ಆದರೆ ರಾತ್ರಿಯಲ್ಲಿ ಕರ್ತನ ದೂತನು ಸೆರೆ ಮನೆಯ ಬಾಗಿಲುಗಳನ್ನು ತೆರೆದು ಅವರನ್ನು ಹೊರಕ್ಕೆ ತಂದು--

ಕೀರ್ತನೆಗಳು 147:11
ಕರ್ತನು ತನಗೆ ಭಯಪಡುವವರಲ್ಲಿಯೂ ತನ್ನ ಕರುಣೆಗೆ ಎದುರು ನೋಡುವವರಲ್ಲಿಯೂ ಇಷ್ಟಪಡುತ್ತಾನೆ.

ವಿಮೋಚನಕಾಂಡ 20:5
ನೀನು ಅವುಗಳಿಗೆ ಅಡ್ಡಬೀಳಬಾರದು, ಸೇವಿಸಲೂ ಬಾರದು. ನಿನ್ನ ದೇವರಾದ ಕರ್ತನಾಗಿರುವ ನಾನು ರೋಷವುಳ್ಳ ದೇವರಾಗಿದ್ದೇನೆ. ನನ್ನನ್ನು ಹಗೆ ಮಾಡುವ ತಂದೆಗಳ ಅಪರಾಧವನ್ನು ಮಕ್ಕಳ ಮೇಲೆ ಯೂ ಮೂರನೆಯ ನಾಲ್ಕನೆಯ ತಲೆಗಳ ವರೆಗೂ ಬರಮಾಡುವೆನು.

2 ಪೂರ್ವಕಾಲವೃತ್ತಾ 32:21
ಆಗ ಕರ್ತನು ತನ್ನ ದೂತನನ್ನು ಕಳುಹಿಸಿದನು; ಅವನು ಅಶ್ಶೂರಿನ ಅರಸನ ದಂಡಿನಲ್ಲಿರುವ ಸಮಸ್ತ ಪರಾ ಕ್ರಮಶಾಲಿಗಳನ್ನೂ ನಾಯಕರನ್ನೂ ಅಧಿಪತಿಗಳನ್ನೂ ನಿರ್ಮೂಲಮಾಡಿದನು. ಹೀಗೆ ಇವನು ಲಜ್ಜಾ ಮುಖದಿಂದ ತನ್ನ ದೇಶಕ್ಕೆ ತಿರುಗಿದನು. ಅವನು ತನ್ನ ದೇವರ ಮನೆಯಲ್ಲಿ ಪ್ರವೇಶಿಸಿದಾಗ ಅವನ ಹೊಟ್ಟೆಯಲ್ಲಿ ಹುಟ್ಟಿದವರು ಅವನನ್ನು ಕತ್ತಿಯಿಂದ ಕೊಂದುಹಾಕಿದರು.

ಕೀರ್ತನೆಗಳು 22:4
ನಿನ್ನಲ್ಲಿ ನಮ್ಮ ಪಿತೃಗಳು ಭರವಸವಿಟ್ಟರು; ಅವರು ಭರವಸವಿಟ್ಟದ್ದರಿಂದ ನೀನು ಅವರನ್ನು ತಪ್ಪಿ ಸಿದಿ.

ಕೀರ್ತನೆಗಳು 62:8
ಎಲ್ಲಾ ಕಾಲದಲ್ಲಿ ಆತನಲ್ಲಿ ಭರವಸ ವಿಡಿರಿ, ಜನರೇ; ನಿಮ್ಮ ಹೃದಯವನ್ನು ಆತನ ಮುಂದೆ ಹೊಯ್ಯಿರಿ; ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ.

ಯೆಶಾಯ 37:36
ಆಗ ಕರ್ತನ ದೂತನು ಹೊರಟು ಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರ ಮಂದಿಯನ್ನು ಹೊಡೆದನು. ಇನ್ನೂ ಮೊಬ್ಬಿರು ವಾಗಲೇ ಎದ್ದಾಗ ಇಗೋ, ಅವರು ಸತ್ತ ಹೆಣಗಳಾ ಗಿದ್ದರು.

ದಾನಿಯೇಲನು 2:47
ಅರಸನು ದಾನಿಯೇಲನಿಗೆ ಉತ್ತರವಾಗಿ--ನೀನು ಈ ರಹಸ್ಯವನ್ನು ಪ್ರಕಟ ಮಾಡಲು ಸಮರ್ಥನಾದದರಿಂದ ನಿಶ್ಚಯವಾಗಿ ನಿಮ್ಮ ದೇವರು ದೇವರುಗಳಿಗೆ ದೇವರಾಗಿಯೂ ಅರಸುಗಳ ಕರ್ತನಾಗಿಯೂ ರಹಸ್ಯಗಳನ್ನು ಪ್ರಕಟಮಾಡುವಾತ ನಾಗಿಯೂ ಆಗಿದ್ದಾನೆ ಅಂದನು.

ದಾನಿಯೇಲನು 3:25
ಆಗ ಅರಸನು ಅವರಿಗೆ ಪ್ರತ್ಯುತ್ತರವಾಗಿ--ಇಗೋ, ಕಟ್ಟಲ್ಪಡದ ನಾಲ್ಕು ಮನುಷ್ಯರು ಬೆಂಕಿಯಲ್ಲಿ ನಡೆಯುತ್ತಿ ರುವದನ್ನು ನೋಡುತ್ತೇನೆ; ಅವರಿಗೆ ಯಾವ ಹಾನಿಯೂ ಇಲ್ಲ; ಅಲ್ಲದೆ ನಾಲ್ಕನೆಯವನ ರೂಪವು ದೇವ ಕುಮಾರನ ಹಾಗಿದೆ ಎಂದು ಹೇಳಿದನು.

ಪ್ರಕಟನೆ 12:11
ಅವರು ಪ್ರಾಣದ ಮೇಲಣ ಪ್ರೀತಿಯನ್ನು ತೊರೆದು ಕುರಿಮರಿಯಾದಾತನ ರಕ್ತದಿಂದಲೂ ತಮ್ಮ ಸಾಕ್ಷಿಯ ವಾಕ್ಯದಿಂದಲೂ ಅವ ನನ್ನು ಜಯಿಸಿದರು.

ರೋಮಾಪುರದವರಿಗೆ 14:7
ನಮ್ಮಲ್ಲಿ ಒಬ್ಬನಾದರೂ ತನಗಾಗಿ ಬದುಕುವದೂ ಇಲ್ಲ, ತನಗಾಗಿ ಸಾಯುವದೂ ಇಲ್ಲ.

ರೋಮಾಪುರದವರಿಗೆ 12:1
ಆದದರಿಂದ ಸಹೋದರರೇ, ನೀವು ನಿಮ್ಮ ದೇಹಗಳನ್ನು ಪರಿಶುದ್ಧವೂ ದೇವರಿಗೆ ಮೆಚ್ಚಿಕೆಯೂ ಆಗಿರುವ ಸಜೀವಯಜ್ಞವಾಗಿ ಸಮರ್ಪಿಸ ಬೇಕೆಂದು ದೇವರ ಕರುಣೆಯಿಂದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಇದೇ ನಿಮ್ಮ ಯೋಗ್ಯವಾದ ಸೇವೆ ಯಾಗಿದೆ.

ದಾನಿಯೇಲನು 4:34
ಆ ಕೊನೆಯ ದಿನಗಳಲ್ಲಿ ನೆಬೂಕದ್ನೆಚ್ಚರನಾದ ನಾನು ನನ್ನ ಕಣ್ಣುಗಳನ್ನು ಪರ ಲೋಕದ ಕಡೆಗೆ ಎತ್ತಿದೆನು; ನನ್ನ ತಿಳುವಳಿಕೆ ನನಗೆ ತಿರುಗಿ ಬಂತು; ಆಗ ನಾನು ಮಹೋನ್ನತನನ್ನು ಸ್ತುತಿಸಿ ನಿರಂತರವಾಗಿ ಜೀವಿಸುವಾತನೂ ನಿತ್ಯವಾದ ಆಳ್ವಿಕೆ ಯನ್ನು ಆಳುವಾತನನ್ನು ತಲತಲಾಂತರಗಳ ವರೆಗೂ ರಾಜ್ಯ ಉಳ್ಳಾತನನ್ನು ಹೊಗಳಿ ಘನಪಡಿಸಿದೆನು.

ಎಜ್ರನು 6:11
ನಾನು ಕೊಡುವ ಅಪ್ಪಣೆ ಏನಂದರೆ--ಯಾವನಾದರೂ ಈ ಮಾತನ್ನು ಬದಲು ಮಾಡಿದರೆ ಅವನ ಮನೆಯಿಂದ ಮರ ಕಿತ್ತು ನೆಡಲ್ಪಡಲಿ; ಅವನು ಅದರಲ್ಲಿ ಗಲ್ಲಿಗೆ ಹಾಕಲ್ಪಡಲಿ; ಅವನ ಮನೆಯು ಇದರ ನಿಮಿತ್ತ ತಿಪ್ಪೆ ಮಾಡಲ್ಪಡಲಿ.

1 ಪೇತ್ರನು 1:21
ಹೀಗಿರ ಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡಿರುವಂತೆ ಆತನನ್ನು ಸತ್ತವರೊಳಗಿಂದ ಎಬ್ಬಿಸಿ ಆತನಿಗೆ ಪ್ರಭಾವವನ್ನು ಕೊಟ್ಟ ದೇವರಲ್ಲಿ ನೀವು ಆತನ ಮೂಲಕ ವಿಶ್ವಾಸವಿಟ್ಟವರಾದಿರಷ್ಟೆ.

ಇಬ್ರಿಯರಿಗೆ 11:37
ಕೆಲವರನ್ನು ಕಲ್ಲೆಸೆ ದರು; ಕೆಲವರನ್ನು ಗರಗಸದಿಂದ ಕೊಯ್ದುಕೊಂದರು. ಕೆಲವರನ್ನು ಪರಿಶೋಧಿಸಿದರು, ಕೆಲವರನ್ನು ಕತ್ತಿಯಿಂದ ಕೊಂದರು; ಕೆಲವರು ಕೊರತೆ ಹಿಂಸೆ ಬಾಧೆ ಇವುಗಳನ್ನು ಅನುಭವಿಸುವವರಾಗಿದ್ದು ಕುರಿ ಮೇಕೆಗಳ ಚರ್ಮ ಗಳನ್ನು ಉಟ್ಟುಕೊಂಡವರಾಗಿ ಅಲೆದಾಡಿದರು.

ಇಬ್ರಿಯರಿಗೆ 1:14
ಇವರೆಲ್ಲರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿ ಸಲ್ಪಟ್ಟ ಊಳಿಗದ ಆತ್ಮಗಳಲ್ಲವೋ?

ಫಿಲಿಪ್ಪಿಯವರಿಗೆ 1:20
ಹೇಗೆಂದರೆ, ನಾನು ಯಾವ ವಿಷಯದಲ್ಲಾದರೂ ನಾಚಿಕೆಪಡದೆ ಎಂದಿನಂತೆ ಈಗಲೂ ಸಹ ತುಂಬಾ ಧೈರ್ಯದಿಂದಿರುವದರಿಂದ ಬದುಕಿದರೂ ಸರಿಯೇ ಸತ್ತರೂ ಸರಿಯೇ ನನ್ನ ದೇಹದ ಮೂಲಕ ಕ್ರಿಸ್ತನಿಗೆ ಮಹಿಮೆಯುಂಟಾಗಬೇಕೆಂದು ನನಗೆ ಬಹಳ ಅಭಿಲಾಷೆಯೂ ನಿರೀಕ್ಷೆಯೂ ಉಂಟು.

ಎಫೆಸದವರಿಗೆ 1:12
ಕ್ರಿಸ್ತನ ಮಹಿಮೆಯು ಸ್ತುತಿಸಲ್ಪಡುವಂತೆ ಆತನಲ್ಲಿ ನಾವು ಮೊದಲು ನಂಬಿಕೆಯಿಟ್ಟೆವು.

2 ಕೊರಿಂಥದವರಿಗೆ 1:9
ಆದರೆ ಮರಣವಾಗು ತ್ತದೆಂಬ ನಿರ್ಣಯವು ನಮ್ಮೊಳಗೆ ಉಂಟಾಯಿತು; ನಾವು ನಮ್ಮ ಮೇಲೆ ಭರವಸವಿಟ್ಟುಕೊಳ್ಳದೆ ಸತ್ತವರನ್ನು ಎಬ್ಬಿಸುವ ದೇವರ ಮೇಲೆಯೇ ಭರವಸವಿಡುವವ ರಾಗಬೇಕೆಂದು ಹೀಗಾಯಿತು.

ಕೀರ್ತನೆಗಳು 34:22
ಕರ್ತನು ತನ್ನ ಸೇವಕರ ಪ್ರಾಣವನ್ನು ವಿಮೋಚಿಸುತ್ತಾನೆ; ಆತನಲ್ಲಿ ಭರವಸವಿಡುವವರು ಹಾಳಾಗುವದಿಲ್ಲ.

ಕೀರ್ತನೆಗಳು 33:21
ಆತನಲ್ಲಿ ನಮ್ಮ ಹೃದಯವು ಸಂತೋಷಿಸುತ್ತದೆ; ನಾವು ಆತನ ಪರಿಶುದ್ಧವಾದ ಹೆಸರಿನಲ್ಲಿ ಭರಸವಿಟ್ಟಿದ್ದೇವೆ.

ಕೀರ್ತನೆಗಳು 33:18
ಇಗೋ, ಕರ್ತನ ಕಣ್ಣು ಆತನಿಗೆ ಭಯಪಡುವ ವರ ಮೇಲೆಯೂ ಆತನ ಕರುಣೆಯನ್ನು ಎದುರು ನೋಡುವವರ ಮೇಲೆಯೂ ಅದೆ.

ಎಜ್ರನು 7:23
ಪರಲೋಕದ ದೇವರಿಂದ ಏನಾದರೂ ಆಜ್ಞಾಪಿಸ ಲ್ಪಟ್ಟರೆ ಅದು ಪರಲೋಕದ ದೇವರ ಆಲಯಕ್ಕೋಸ್ಕರ ಜಾಗ್ರತೆಯಾಗಿ ಮಾಡಲ್ಪಡಲಿ. ಯಾಕಂದರೆ ಅರಸನೂ ಅವನ ಕುಮಾರರೂ ಆಳುವ ರಾಜ್ಯದ ಮೇಲೆ ರೌದ್ರ ಯಾಕೆ ಇರಬೇಕು?

ಎಜ್ರನು 1:3
ಆತನ ಸಮಸ್ತ ಜನರಾದ ನಿಮ್ಮೊಳಗೆ ಯಾರಿದ್ದೀರಿ? ಅವನ ಸಂಗಡ ಅವನ ದೇವರು ಇರಲಿ. ಅವನು ಯೆಹೂದದಲ್ಲಿ ರುವ ಯೆರೂಸಲೇಮಿಗೆ ಹೋಗಲಿ. ಯೆರೂಸಲೇಮಿನಲ್ಲಿರುವ ಇಸ್ರಾಯೇಲಿನ ದೇವರಾದ ಕರ್ತನ ಆಲಯವನ್ನು ಕಟ್ಟಲಿ (ಆತನೇ ದೇವರು).

2 ಪೂರ್ವಕಾಲವೃತ್ತಾ 20:20
ಅವರು ಉದಯದಲ್ಲಿ ಎದ್ದು ತೆಕೋವದ ಅರ ಣ್ಯಕ್ಕೆ ಹೊರಟರು. ಅವರು ಹೊರಟು ಹೋಗುತ್ತಿ ರುವಾಗ ಯೆಹೋಷಾಫಾಟನು ನಿಂತುಕೊಂಡು--ಓ ಯೆಹೂದದವರೇ, ಯೆರೂಸಲೇಮಿನ ನಿವಾಸಿಗಳೇ, ನನ್ನ ಮಾತನ್ನು ಕೇಳಿರಿ. ನಿಮ್ಮ ದೇವರಾದ ಕರ್ತನನ್ನು ನಂಬಿಕೊಳ್ಳಿರಿ, ಸ್ಥಿರವಾಗಿರ್ರಿ; ಆತನ ಪ್ರವಾದಿಗಳನ್ನು ನಂಬಿಕೊಳ್ಳಿರಿ; ಆಗ ಜಯಹೊಂದುವಿರಿ ಅಂದನು.

1 ಪೂರ್ವಕಾಲವೃತ್ತಾ 5:20
ಇವರು ಅವರಿಗೆ ವಿರೋಧವಾಗಿ ಸಹಾಯಹೊಂದಿ ದ್ದರಿಂದ ಹಗ್ರೀಯರೂ ಅವರ ಸಂಗಡ ಕೂಡಿದ್ದ ವರೆಲ್ಲರೂ ಇವರ ಕೈಯಲ್ಲಿ ಒಪ್ಪಿಸಲ್ಪಟ್ಟರು. ಯಾಕಂದರೆ ಅವರು ಯುದ್ಧದಲ್ಲಿ ದೇವರಿಗೆ ಮೊರೆಯಿಟ್ಟು ಆತನಲ್ಲಿ ಭರವಸವಿಟ್ಟದ್ದರಿಂದ ಆತನು ಅವರ ಮನವಿಯನ್ನು ಕೇಳಿದನು.

ಆದಿಕಾಂಡ 19:15
ಸೂರ್ಯೋದಯವಾದಾಗ ದೂತರು ಲೋಟನನ್ನು ತ್ವರೆಪಡಿಸಿ--ನೀನು ಈ ಪಟ್ಟಣದ ದುಷ್ಟತನದಿಂದ ನಾಶವಾಗದ ಹಾಗೆ ಎದ್ದು ನಿನ್ನ ಹೆಂಡತಿಯನ್ನೂ ಇಲ್ಲಿರುವ ನಿನ್ನ ಇಬ್ಬರು ಕುಮಾರ್ತೆಯರನ್ನೂ ಕರಕೊಂಡು ನಡೆ ಅಂದರು.

ಕೀರ್ತನೆಗಳು 84:11
ದೇವರಾದ ಕರ್ತನು ಸೂರ್ಯ ನೂ ಗುರಾಣಿಯೂ ಆಗಿದ್ದಾನೆ; ಕರ್ತನು ಕೃಪೆಯನ್ನೂ ಮಹಿಮೆಯನ್ನೂ ಕೊಡುತ್ತಾನೆ; ಸಂಪೂರ್ಣವಾಗಿ ನಡೆದುಕೊಳ್ಳುವವರಿಗೆ ಆತನು ಯಾವ ಒಳ್ಳೇದನ್ನು ಹಿಂದೆಗೆಯುವದಿಲ್ಲ.

ಕೀರ್ತನೆಗಳು 103:20
ಆತನ ದೂತರೇ, ಆತನ ಮಾತಿನ ಸ್ವರವನ್ನು ಕೇಳಿ, ಆತನ ಆಜ್ಞೆಗಳನ್ನು ನಡಿಸುವ ಶ್ರೇಷ್ಠರಾದ ಶೂರರೇ,

ಅಪೊಸ್ತಲರ ಕೃತ್ಯಗ 12:7
ಆಗ ಇಗೋ, ಕರ್ತನ ದೂತನು ಪೇತ್ರನ ಬಳಿಗೆ ಬಂದಾಗ ಅವನಿದ್ದ ಸೆರೆಮನೆಯಲ್ಲಿ ಬೆಳಕು ಹೊಳೆಯಿತು. ಅವನು ಪೇತ್ರನನ್ನು ಪಕ್ಕೆ ತಟ್ಟಿ ಎಬ್ಬಿಸಿ--ತಟ್ಟನೆ ಏಳು ಅಂದನು. ಆಗಲೇ ಅವನ ಕೈಗಳಿಂದ ಸರಪಣಿಗಳು ಕಳಚಿಬಿದ್ದವು.

ಅಪೊಸ್ತಲರ ಕೃತ್ಯಗ 4:19
ಅದಕ್ಕೆ ಪೇತ್ರ ಯೋಹಾನರು ಪ್ರತ್ಯುತ್ತರವಾಗಿ ಅವರಿಗೆ--ದೇವರ ಮಾತಿಗಿಂತ ನಿಮ್ಮ ಮಾತನ್ನು ಕೇಳು ವದು ದೇವರ ದೃಷ್ಟಿಯಲ್ಲಿ ಸರಿಯೋ ನೀವೇ ತೀರ್ಪು ಮಾಡಿರಿ.

ಮತ್ತಾಯನು 4:10
ಆಗ ಯೇಸು ಅವನಿಗೆ--ಸೈತಾನನೇ, ಇಲ್ಲಿಂದ ತೊಲಗಿಹೋಗು; ಯಾಕಂದರೆ--ನೀನು ನಿನ್ನ ದೇವ ರಾದ ಕರ್ತನನ್ನು ಮಾತ್ರ ಆರಾಧಿಸಿ ಆತನೊಬ್ಬನನ್ನೇ ಸೇವಿಸಬೇಕು ಎಂಬದಾಗಿ ಬರೆದದೆ ಅಂದನು.

ದಾನಿಯೇಲನು 6:26
ನಾನು ಮಾಡುವ ತೀರ್ಮಾನವೇನಂದರೆ, ನನ್ನ ರಾಜ್ಯದ ಪ್ರತಿಯೊಬ್ಬ ಮನುಷ್ಯರು ದಾನಿಯೇಲನ ದೇವರಿಗೆ ಭಯಭಕ್ತಿ ಯಿಂದ ನಡೆದುಕೊಳ್ಳಬೇಕು. ಯಾಕಂದರೆ ಜೀವವುಳ್ಳ ದೇವರಾಗಿದ್ದು ಎಂದೆಂದಿಗೂ ಸ್ಥಿರವಾದವನು ಆತನೇ. ಆತನ ರಾಜ್ಯವು ನಾಶವಾಗದೆ ಆತನ ಆಳಿಕೆಯು ಶಾಶ್ವತವಾಗಿ ಕೊನೆಯವರೆಗೂ ನಿಲ್ಲುವದು.

ದಾನಿಯೇಲನು 6:22
ನನ್ನ ದೇವರು ತನ್ನ ದೂತನನ್ನು ಕಳುಹಿಸಿ ನನಗೆ ಕೇಡು ಮಾಡದ ಹಾಗೆ ಸಿಂಹಗಳ ಬಾಯಿಗಳನ್ನು ಮುಚ್ಚಿ ಹಾಕಿದ್ದಾನೆ; ಆತನ ಮುಂದೆ ನಾನು ಯಥಾರ್ಥನೆಂದು ತಿಳಿದುಬಂದಿದ್ದೇನೆ. ಓ ಅರಸನೇ, ನಿನ್ನ ಮುಂದೆಯೂ ಸಹ ನಾನು ಯಾರಿಗೂ ಕೇಡುಮಾಡಲಿಲ್ಲ ಎಂದು ಹೇಳಿದನು.

ದಾನಿಯೇಲನು 3:15
ಈಗ ನೀವು ಸಿದ್ಧ ವಾಗಿದ್ದು ಕೊಂಬು, ಕೊಳಲು, ತಂಬೂರಿ, ವೀಣೆ, ಕಿನ್ನರಿ, ನಾದಸ್ವರ ಎಲ್ಲಾ ವಿಧವಾದ ವಾದ್ಯಗಳ ಶಬ್ದವನ್ನು ಕೇಳುವ ಸಮಯದಲ್ಲಿ ನಾನು ಮಾಡಿಸಿದ ಪ್ರತಿಮೆ ಯನ್ನು ಆರಾಧಿಸಿದರೆ ಸರಿ; ಆದರೆ ನೀವು ಆರಾಧಿಸ ದಿದ್ದರೆ ಅದೇ ಗಳಿಗೆಯಲ್ಲಿ ಉರಿಯುವ ಬೆಂಕಿಯ ಆವಿಗೆಯ ಮಧ್ಯದಲ್ಲಿ ಹಾಕಲ್ಪಡುವಿರಿ. ನನ್ನ ಕೈಯಿಂದ ನಿಮ್ಮನ್ನು ಬಿಡಿಸುವ ಆ ದೇವರು ಯಾರು ಎಂದು ಹೇಳಿದನು.

ಯೆರೆಮಿಯ 17:7
ಯಾವನು ಕರ್ತನಲ್ಲಿ ಭರವಸವಿಟ್ಟಿರುವನೋ ಯಾವನಿಗೆ ಕರ್ತನು ನಿರೀಕ್ಷೆ ಯಾಗಿದ್ದಾನೋ ಆ ಮನುಷ್ಯನು ಧನ್ಯನು.

ಕೀರ್ತನೆಗಳು 146:5
ಯಾಕೋಬನ ದೇವರನ್ನು ತನ್ನ ಸಹಾಯವನ್ನಾಗಿ ಮಾಡಿಕೊಂಡವನು ಧನ್ಯನು; ಅವನು ತನ್ನ ದೇವರಾದ ಕರ್ತನ ಮೇಲೆ ತನ್ನ ನಿರೀಕ್ಷೆ ಇಡುವನು.

ಆದಿಕಾಂಡ 9:26
ಶೇಮನ ದೇವ ರಾದ ಕರ್ತನು ಸ್ತುತಿಸಲ್ಪಡಲಿ; ಕಾನಾನನು ಅವನಿಗೆ ದಾಸನಾಗಿರಲಿ.