ಇಬ್ರಿಯರಿಗೆ 2:2 in Kannada

ಕನ್ನಡ ಕನ್ನಡ ಬೈಬಲ್ ಇಬ್ರಿಯರಿಗೆ ಇಬ್ರಿಯರಿಗೆ 2 ಇಬ್ರಿಯರಿಗೆ 2:2

Hebrews 2:2
ಯಾಕಂದರೆ ದೂತರ ಮೂಲಕ ಹೇಳಲ್ಪಟ್ಟ ವಾಕ್ಯವು ಸ್ಥಿರವಾಗಿದ್ದು ಅದನ್ನು ವಿಾರಿ ಮಾಡಿದ ಪ್ರತಿಯೊಂದು ತಪ್ಪಿಗೂ ಅವಿಧೇಯತ್ವಕ್ಕೂ ನ್ಯಾಯ ವಾದ ಪ್ರತಿಫಲ ಹೊಂದಿದ ಮೇಲೆ

Hebrews 2:1Hebrews 2Hebrews 2:3

Hebrews 2:2 in Other Translations

King James Version (KJV)
For if the word spoken by angels was stedfast, and every transgression and disobedience received a just recompence of reward;

American Standard Version (ASV)
For if the word spoken through angels proved stedfast, and every transgression and disobedience received a just recompense of reward;

Bible in Basic English (BBE)
Because if the word which came through the angels was fixed, and in the past every evil act against God's orders was given its full punishment;

Darby English Bible (DBY)
For if the word which was spoken by angels was firm, and every transgression and disobedience received just retribution,

World English Bible (WEB)
For if the word spoken through angels proved steadfast, and every transgression and disobedience received a just recompense;

Young's Literal Translation (YLT)
for if the word being spoken through messengers did become stedfast, and every transgression and disobedience did receive a just recompense,

For
εἰeiee
if
γὰρgargahr
the
hooh
word
δι'dithee
spoken
ἀγγέλωνangelōnang-GAY-lone
by
λαληθεὶςlalētheisla-lay-THEES
angels
λόγοςlogosLOH-gose
was
ἐγένετοegenetoay-GAY-nay-toh
stedfast,
βέβαιοςbebaiosVAY-vay-ose
and
καὶkaikay
every
πᾶσαpasaPA-sa
transgression
παράβασιςparabasispa-RA-va-sees
and
καὶkaikay
disobedience
παρακοὴparakoēpa-ra-koh-A
received
ἔλαβενelabenA-la-vane
a
just
recompence
of
ἔνδικονendikonANE-thee-kone
reward;
μισθαποδοσίανmisthapodosianmee-stha-poh-thoh-SEE-an

Cross Reference

ಅಪೊಸ್ತಲರ ಕೃತ್ಯಗ 7:53
ದೇವದೂತರ ಮೂಲಕ ನೇಮಕವಾದ ನ್ಯಾಯ ಪ್ರಮಾಣವನ್ನು ನೀವು ಹೊಂದಿದವರಾದರೂ ಅದನ್ನು ಅನುಸರಿಸಲಿಲ್ಲ ಎಂದು ಹೇಳಿದನು.

ಇಬ್ರಿಯರಿಗೆ 10:35
ಆದದರಿಂದ ನಿಮ್ಮ ಭರವಸವನ್ನು ಬಿಟ್ಟುಬಿಡಬೇಡಿರಿ; ಅದಕ್ಕೆ ನಷ್ಟ ಪರಿಹಾರದ ದೊಡ್ಡ ಪ್ರತಿಫಲ ಉಂಟು.

ಇಬ್ರಿಯರಿಗೆ 10:28
ಮೋಶೆಯ ನ್ಯಾಯಪ್ರಮಾಣವನ್ನು ಅಸಡ್ಡೆ ಮಾಡಿ ದವನನ್ನು ಇಬ್ಬರು ಇಲ್ಲವೆ ಮೂವರು ಸಾಕ್ಷಿಗಳಿಂದ ಕನಿಕರವಿಲ್ಲದೆ ಕೊಲ್ಲುತ್ತಿದ್ದರು.

ಗಲಾತ್ಯದವರಿಗೆ 3:19
ಹಾಗಾದರೆ ನ್ಯಾಯಪ್ರಮಾಣವು ಯಾತಕ್ಕೆ? ವಾಗ್ದಾನದ ಸಂತತಿಯಾದಾತನು ಬರುವತನಕ ದೇವರು ಇಂಥಿಂಥದ್ದು ಅಪರಾಧವೆಂದು ತೋರಿಸುವದಕ್ಕಾಗಿ ಅದನ್ನು ವಾಗ್ದಾನದ ತರುವಾಯ ನೇಮಿಸಿ ದೂತರ ಮುಖಾಂತರ ಒಬ್ಬ ಮಧ್ಯಸ್ಥನ ಕೈಯಲ್ಲಿ ಕೊಟ್ಟನು.

ಧರ್ಮೋಪದೇಶಕಾಂಡ 27:26
ಈ ನ್ಯಾಯಪ್ರಮಾಣದ ಮಾತುಗಳನ್ನು ಸ್ಥಾಪಿ ಸದೆ, ಕೈಕೊಳ್ಳದೆ ಇರುವವನಿಗೆ ಶಾಪ. ಜನವೆಲ್ಲಾ ಆಮೆನ್‌ ಎಂದು ಹೇಳಲಿ ಎಂದು ಹೇಳಬೇಕು.

ಧರ್ಮೋಪದೇಶಕಾಂಡ 17:12
ಅಲ್ಲಿ ನಿನ್ನ ದೇವ ರಾದ ಕರ್ತನಿಗೆ ಸೇವೆಮಾಡುವದಕ್ಕೆ ನಿಂತ ಯಾಜಕನ ಮಾತಾದರೂ ನ್ಯಾಯಾಧಿಪತಿಯ ಮಾತಾದರೂ ಕೇಳದೆ ಅಹಂಕಾರದಿಂದ ಏನಾದರೂ ಮಾಡುವ ದಾದರೆ ಆ ಮನುಷ್ಯನು ಸಾಯಬೇಕು; ಹೀಗೆ ಕೆಟ್ಟದ್ದನ್ನು ಇಸ್ರಾಯೇಲಿನಿಂದ ತೆಗೆದುಹಾಕಬೇಕು;

ಇಬ್ರಿಯರಿಗೆ 11:26
ಐಗುಪ್ತದಲ್ಲಿನ ಐಶ್ವರ್ಯಗಳಿಗಿಂತಲೂ ಕ್ರಿಸ್ತನ ವಿಷಯವಾದ ನಿಂದೆಯು ಅಧಿಕ ಐಶ್ವರ್ಯ ವೆಂದೆಣಿಸಿಕೊಂಡನು; ಯಾಕಂದರೆ ಪ್ರತಿಫಲದ ಬಹು ಮಾನವನ್ನು ಅವನು ಗೌರವಿಸಿದನು.

ಯೂದನು 1:5
ನೀವು ಇದನ್ನು ಒಂದು ಸಾರಿ ತಿಳಿದವರಾಗಿದ್ದರೂ ನಾನು ಅದನ್ನೇ ನಿಮ್ಮ ಜ್ಞಾಪಕಕ್ಕೆ ತರಬೇಕೆಂದು ಅಪೇಕ್ಷಿಸುತ್ತೇನೆ. ಅದು ಯಾವದಂದರೆ--ಕರ್ತನು (ತನ್ನ) ಪ್ರಜೆಯನ್ನು ಐಗುಪ್ತದೇಶದೊಳಗಿಂದ ರಕ್ಷಿಸಿ ದರೂ ತರುವಾಯ ಅವರೊಳಗೆ ನಂಬದೆ ಹೋದ ವರನ್ನು ಸಂಹಾರ ಮಾಡಿದನು.

ಇಬ್ರಿಯರಿಗೆ 11:6
ಆದರೆ ನಂಬಿಕೆಯಿಲ್ಲದೆ ದೇವರನ್ನು ಮೆಚ್ಚಿಸುವದು ಅಸಾಧ್ಯ; ಯಾಕಂದರೆ ದೇವರ ಬಳಿಗೆ ಬರುವವನು ದೇವರು ಇದ್ದಾನೆ, ತನ್ನನ್ನು ಜಾಗ್ರತೆಯಾಗಿ ಹುಡುಕು ವವನಿಗೆ ಪ್ರತಿಫಲವನ್ನು ಕೊಡುತ್ತಾನೆ ಎಂದು ನಂಬು ವದು ಅವಶ್ಯ.

ಧರ್ಮೋಪದೇಶಕಾಂಡ 17:5
ನೀನು ಆ ಗಂಡಸನ್ನಾದರೂ ಹೆಂಗಸ ನ್ನಾದರೂ ಆ ಕೆಟ್ಟ ಕಾರ್ಯವನ್ನು ಮಾಡಿದ ಗಂಡಸನ್ನೂ ಮತ್ತು ಹೆಂಗಸನ್ನೂ ನಿನ್ನ ಬಾಗಲುಗಳ ಬಳಿಗೆ ಹೊರಗೆ ತಂದು ಅವರು ಸಾಯುವ ಹಾಗೆ ಕಲ್ಲೆಸೆಯಬೇಕು.

ಧರ್ಮೋಪದೇಶಕಾಂಡ 17:2
ನಿನ್ನ ದೇವರಾದ ಕರ್ತನ ಮುಂದೆ ಕೆಟ್ಟದ್ದನ್ನು ಮಾಡಿ ಆತನ ಒಡಂಬಡಿಕೆಯನ್ನು ವಿಾರಿ ಬಿಟ್ಟು

ಅರಣ್ಯಕಾಂಡ 15:30
ಆದರೆ ಯಾವನಾದರೂ ಅಂದರೆ ದೇಶದಲ್ಲಿ ಹುಟ್ಟಿದವನಾಗಲಿ ಪರಕೀಯನಾಗಲಿ ಹಟದಿಂದ ಪಾಪಮಾಡಿದರೆ ಅವನು ಕರ್ತನನ್ನು ನಿಂದಿಸುತ್ತಾನೆ. ಆ ಮನುಷ್ಯನು ತನ್ನ ಜನರ ಮಧ್ಯದಿಂದ ತೆಗೆದುಹಾಕ ಲ್ಪಡಬೇಕು.

ಇಬ್ರಿಯರಿಗೆ 1:1
ಕಳೆದ ಕಾಲದಲ್ಲಿ ಪಿತೃಗಳ ಸಂಗಡ ಪ್ರವಾದಿಗಳ ಮುಖಾಂತರ ನಾನಾ ಸಮಯಗಳಲ್ಲಿ ವಿಧವಿಧವಾದ ರೀತಿಯಲ್ಲಿ ಮಾತನಾಡಿದ ದೇವರು

1 ಕೊರಿಂಥದವರಿಗೆ 10:5
ಆದರೆ ಅವ ರೊಳಗೆ ಅನೇಕರ ವಿಷಯದಲ್ಲಿ ದೇವರು ಸಂತೋಷಿ ಸಲಿಲ್ಲ; ಯಾಕಂದರೆ ಅವರು ಅಡವಿಯೊಳಗೆ ಸಂಹರಿ ಸಲ್ಪಟ್ಟರು.

ಕೀರ್ತನೆಗಳು 68:17
ದೇವರ ರಥಗಳು ಇಪ್ಪತ್ತು ಸಾವಿರವು, ಸಾವಿರಾರು ದೂತರು ಗಳು; ಕರ್ತನು ಸೀನಾಯಿಯಲ್ಲಿ ಇದ್ದ ಹಾಗೆ ಅವರೊಳಗೆ ಪರಿಶುದ್ಧ ಸ್ಥಳದಲ್ಲಿ ಇದ್ದಾನೆ.

ಯಾಜಕಕಾಂಡ 10:1
ಇದಲ್ಲದೆ ಆರೋನನ ಕುಮಾರರಾದ ನಾದಾಬ್‌ ಅಬೀಹು ಅವರವರ ಅಗ್ನಿ ಪಾತ್ರೆಗಳನ್ನು ತೆಗೆದುಕೊಂಡು ಅದರಲ್ಲಿ ಬೆಂಕಿಯನ್ನಿಟ್ಟು ಅದರ ಮೇಲೆ ಸುವಾಸನೆಯ ಧೂಪವನ್ನು ಹಾಕಿ ಕರ್ತನು ಆಜ್ಞಾಪಿಸದೆ ಇದ್ದ ಬೇರೆ ಬೆಂಕಿಯನ್ನು ಕರ್ತನ ಸನ್ನಿಧಿಯಲ್ಲಿ ಸಮರ್ಪಿಸಿದರು.

ಯಾಜಕಕಾಂಡ 24:14
ಶಪಿಸಿದವನನ್ನು ಪಾಳೆಯದ ಆಚೆಗೆ ತೆಗೆದುಕೊಂಡು ಹೋಗಿರಿ; ಅವನಿಂದ ಕೇಳಿದ ವರೆಲ್ಲರು ಅವನ ತಲೆಯ ಮೇಲೆ ತಮ್ಮ ಕೈಗಳನ್ನಿಡಲಿ, ಸಭೆಯವರೆಲ್ಲರೂ ಅವನಿಗೆ ಕಲ್ಲೆಸೆಯಲಿ.

ಅರಣ್ಯಕಾಂಡ 11:33
ಆದರೆ ಮಾಂಸವು ಇನ್ನೂ ಅವರ ಹಲ್ಲುಗಳ ನಡುವೆ ಇದ್ದಾಗ ಅದನ್ನು ಅಗಿಯುವದಕ್ಕಿಂತ ಮುಂಚೆ ಕರ್ತನ ಕೋಪವು ಜನರಮೇಲೆ ಉರಿದದ್ದರಿಂದ ಆತನು ಜನರನ್ನು ಮಹಾ ದೊಡ್ಡ ವ್ಯಾಧಿಯಿಂದ ಹೊಡೆದನು.

ಅರಣ್ಯಕಾಂಡ 14:28
ಆದದರಿಂದ ನೀನು ಅವರಿಗೆ--ನನ್ನ ಜೀವದಾಣೆ, ನೀವು ನನ್ನ ಕಿವಿಗಳು ಕೇಳುವಂತೆ ಮಾತನಾಡಿದ ಪ್ರಕಾರವೇ ನಿಮಗೆ ಮಾಡುವೆನು ಎಂದು ಕರ್ತನು ಹೇಳುತ್ತಾನೆ.

ಅರಣ್ಯಕಾಂಡ 16:31
ಇದಾದ ಮೇಲೆ ಅವನು ಹೇಳಬೇಕಾದವುಗಳನ್ನೆಲ್ಲಾ ಹೇಳಿ ಮುಗಿಸಿದಾಗಲೇ ಅವರ ಕೆಳಗಿರುವ ನೆಲವು ಸೀಳಿ

ಅರಣ್ಯಕಾಂಡ 16:49
ಆದರೆ ಕೋರಹನ ನಿಮಿತ್ತ ಸತ್ತುಹೋದವರ ಹೊರತಾಗಿ ವ್ಯಾಧಿಯಲ್ಲಿ ಸತ್ತವರು ಹದಿನಾಲ್ಕುಸಾವಿರದ ಏಳು ನೂರು ಮಂದಿಯಾಗಿದ್ದರು.

ಅರಣ್ಯಕಾಂಡ 20:11
ಮೋಶೆಯು ತನ್ನ ಕೈಯನ್ನು ಎತ್ತಿ ತನ್ನ ಕೋಲಿನಿಂದ ಬಂಡೆಯನ್ನು ಎರಡು ಸಾರಿ ಹೊಡೆದನು; ಆಗ ಬಹಳ ನೀರು ಹೊರಗೆ ಬಂತು; ಸಭೆಯೂ ಅವರ ಪಶುಗಳೂ ಕುಡಿದವು.

ಅರಣ್ಯಕಾಂಡ 21:6
ಆಗ ಕರ್ತನು ಜನರೊಳಗೆ ಉರಿ ಸರ್ಪ ಗಳನ್ನು ಕಳುಹಿಸಿದನು; ಅವು ಜನರನ್ನು ಕಚ್ಚಿದ್ದರಿಂದ ಇಸ್ರಾಯೇಲ್ಯರಲ್ಲಿ ಬಹು ಜನರು ಸತ್ತುಹೋದರು.

ಅರಣ್ಯಕಾಂಡ 25:9
ಆದರೆ ವ್ಯಾಧಿ ಯಿಂದ ಸತ್ತವರು ಇಪ್ಪತ್ತುನಾಲ್ಕು ಸಾವಿರ ಮಂದಿಯಾಗಿದ್ದರು.

ಧರ್ಮೋಪದೇಶಕಾಂಡ 4:3
ಬಾಳ್ಪೆಯೋರನ ವಿಷಯದಲ್ಲಿ ಕರ್ತನು ಮಾಡಿದವುಗಳನ್ನು ನಿಮ್ಮ ಕಣ್ಣುಗಳು ನೋಡಿದವು; ಬಾಳ್ಪೆ ಯೋರನನ್ನು ಹಿಂಬಾಲಿಸಿದ ಮನುಷ್ಯರನ್ನೆಲ್ಲಾ ನಿನ್ನ ದೇವರಾದ ಕರ್ತನು ನಿಮ್ಮ ಮಧ್ಯದಲ್ಲಿಂದ ನಾಶ ಮಾಡಿದನಲ್ಲವೇ?

ಧರ್ಮೋಪದೇಶಕಾಂಡ 32:2
ನನ್ನ ಬೋಧನೆಯು ಮಳೆಯಂತೆ ಸುರಿಯುವದು; ನನ್ನ ಮಾತು ಮಂಜಿನಂತೆಯೂ ಹುಲ್ಲಿನ ಮೇಲೆ ಬೀಳುವ ತುಂತುರಿನ ಹಾಗೆಯೂ ಪಲ್ಯದ ಮೇಲೆ ಬೀಳುವ ವೃಷ್ಟಿಗಳ ಹಾಗೆಯೂ ಬೀಳುವದು.

ವಿಮೋಚನಕಾಂಡ 32:27
ಅವನು ಅವರಿಗೆ--ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಪ್ರತಿಯೊಬ್ಬನು ತನ್ನ ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಂಡು ಪಾಳೆಯದಲ್ಲೆಲ್ಲಾ ಒಳಗಿನಿಂದ ಹೊರಕ್ಕೆ ದ್ವಾರದಿಂದ ದ್ವಾರಕ್ಕೆ ಹೋಗಿ ತನ್ನ ಸಹೋದರನನ್ನೂ ತನ್ನ ಜೊತೆಗಾರನನ್ನೂ ತನ್ನ ನೆರೆಯವನನ್ನೂ ಕೊಲ್ಲಲಿ ಎಂದು ಹೇಳಿದನು.