Isaiah 10:1
ಅನೀತಿಯ ನೇಮಕಗಳನ್ನು ನೇಮಿಸಿ, ಕ್ರೂರವಾದ ಬರಹ ಬರೆಯುವವರಿಗೆ ಅಯ್ಯೋ!
Isaiah 10:1 in Other Translations
King James Version (KJV)
Woe unto them that decree unrighteous decrees, and that write grievousness which they have prescribed;
American Standard Version (ASV)
Woe unto them that decree unrighteous decrees, and to the writers that write perverseness;
Bible in Basic English (BBE)
Cursed are those who make evil decisions, and the writers who make the records of their cruel acts:
Darby English Bible (DBY)
Woe unto them that decree iniquitous decrees, and to the writers that prescribe oppression,
World English Bible (WEB)
Woe to those who decree unrighteous decrees, and to the writers who write perverseness;
Young's Literal Translation (YLT)
Wo `to' those decreeing decrees of iniquity, And writers who have prescribed perverseness.
| Woe | ה֥וֹי | hôy | hoy |
| unto them that decree | הַחֹֽקְקִ֖ים | haḥōqĕqîm | ha-hoh-keh-KEEM |
| unrighteous | חִקְקֵי | ḥiqqê | heek-KAY |
| decrees, | אָ֑וֶן | ʾāwen | AH-ven |
| write that and | וּֽמְכַתְּבִ֥ים | ûmĕkattĕbîm | oo-meh-ha-teh-VEEM |
| grievousness | עָמָ֖ל | ʿāmāl | ah-MAHL |
| which they have prescribed; | כִּתֵּֽבוּ׃ | kittēbû | kee-tay-VOO |
Cross Reference
ಲೂಕನು 11:52
ನ್ಯಾಯ ಶಾಸ್ತ್ರಿಗಳೇ, ನಿಮಗೆ ಅಯ್ಯೋ! ಯಾಕಂದರೆ ನೀವು ಜ್ಞಾನದ ಬೀಗದ ಕೈಯನ್ನು ತಕ್ಕೊಂಡಿದ್ದೀರಿ, ನೀವಂತೂ ಒಳಗೆ ಪ್ರವೇಶಿಸಲಿಲ್ಲ. ಒಳಗೆ ಪ್ರವೇಶಿಸುತ್ತಿರುವವ ರಿಗೂ ನೀವು ತಡೆದಿರಿ ಎಂದು ಹೇಳಿದನು.
ಕೀರ್ತನೆಗಳು 94:20
ವಿಧಿಯಿಂದ ಕೇಡನ್ನು ಕಲ್ಪಿಸುವ ಅಪರಾಧದ ಸಿಂಹಾಸನವು ನಿನ್ನ ಸಂಗಡ ಅನ್ಯೋನ್ಯವಾಗಿರು ವದೋ?
ಯೆಶಾಯ 5:8
ಸ್ಥಳ ಮಿಗಿಸದೆ ನೀವು ಭೂಮಿಯ ಮಧ್ಯದಲ್ಲಿ ಒಂಟಿಯಾಗಿ ವಾಸಿಸುವಂತೆ ಮನೆಗೆ ಮನೆ ಕೂಡಿಸಿ ಹೊಲಕ್ಕೆ ಹೊಲ ಸೇರಿಸುವವರಿಗೆ ಅಯ್ಯೋ!
ಮಿಕ 3:1
ಆಗ ನಾನು ಹೇಳಿದ್ದೇನಂದರೆ--ಯಾಕೋಬಿನ ಮುಖ್ಯಸ್ಥರೇ, ಇಸ್ರಾಯೇ ಲಿನ ಮನೆತನದ ಪ್ರಧಾನರೇ, ಈಗ ಕೇಳಿರಿ; ನ್ಯಾಯ ವನ್ನು ತಿಳಿಯುವದು ನಿಮ್ಮದಲ್ಲವೋ?
ಹಬಕ್ಕೂಕ್ಕ 2:6
ಇವರೆಲ್ಲರು ಅವನ ಮೇಲೆ ಸಾಮ್ಯವನ್ನೂ ಹಾಸ್ಯದ ಸಾಮತಿಯನ್ನೂ ಎತ್ತಿ--ತನಗಲ್ಲದ್ದನ್ನು ಹೆಚ್ಚಿಸಿಕೊಳ್ಳು ವವನಿಗೆ ಅಯ್ಯೋ! ಅದು ಎಷ್ಟರ ವರೆಗೆ? ತಾನಾಗಿ ತನ್ನ ಮೇಲೆ ಗಟ್ಟಿ ಮಣ್ಣನ್ನು ಹೊತ್ತುಕೊಳ್ಳುವವನಿಗೆ ಅಯ್ಯೋ ಎಂದು ಹೇಳರೋ?
ಮತ್ತಾಯನು 23:23
ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮರುಗ ಸೋಪು ಜೀರಿಗೆ ಗಳಲ್ಲಿ ದಶಮ ಭಾಗವನ್ನು ಸಲ್ಲಿಸುತ್ತೀರಿ. ಆದರೆ ನ್ಯಾಯ ಪ್ರಮಾಣದ ತೀರ್ಪು ಕರುಣೆ ನಂಬಿಕೆ ಎಂಬ ಈ ಪ್ರಾಮುಖ್ಯವಾದವುಗಳನ್ನು ಬಿಟ್ಟುಬಿಟ್ಟಿದ್ದೀರಿ. ಇವುಗ ಳೊಂದಿಗೆ ಆ ಬೇರೆಯವುಗಳನೂ
ಲೂಕನು 11:42
ಆದರೆ ಫರಿಸಾಯರೇ, ನಿಮಗೆ ಅಯ್ಯೋ! ಯಾಕಂದರೆ ನೀವು ಮರುಗಪತ್ರೆ ಸದಾಪು ಸಕಲ ವಿಧವಾದ ಸೊಪ್ಪುಗಳಲ್ಲಿ ದಶಮಭಾಗವನ್ನು ಕೊಟ್ಟು ನ್ಯಾಯತೀರ್ಪನ್ನೂ ದೇವರಪ್ರೀತಿಯನ್ನೂ ಲಕ್ಷಿಸದೆ ಹೋಗುತ್ತೀರಿ. ಇವುಗಳನ್ನು ತಪ್ಪದೆ ಮಾಡಿ ಬೇರೆಯವು ಗಳನ್ನು ಬಿಡದೆ ಮಾಡಬೇಕಾಗಿತ್ತು.
ಮತ್ತಾಯನು 23:27
ಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ಯಾಕಂದರೆ ನೀವು ಸುಣ್ಣಾ ಹಚ್ಚಿದ ಸಮಾಧಿ ಗಳಿಗೆ ಹೋಲಿಕೆಯಾಗಿದ್ದೀರಿ. ಅವು ಹೊರಗೆ ನಿಜಕ್ಕೂ ಅಂದವಾಗಿ ಕಾಣುತ್ತವೆ; ಆದರೆ ಒಳಗೆ ಸತ್ತವರ ಎಲುಬು ಗಳಿಂದಲೂ ಎಲ್ಲಾ ಅಶುದ್ಧತೆಯಿಂದಲೂ ತುಂಬಿರು ತ್ತವೆ.
ಮತ್ತಾಯನು 23:29
ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ಯಾಕಂದರೆ ನೀವು ಪ್ರವಾದಿಗಳ ಸಮಾಧಿಗಳನ್ನು ಕಟ್ಟಿ ನೀತಿವಂತರ ಸಮಾಧಿಗಳನ್ನು ಅಲಂಕರಿಸುತ್ತೀರಿ.
ಮತ್ತಾಯನು 26:24
ಮನುಷ್ಯಕುಮಾರನು ತನ್ನ ವಿಷಯದಲ್ಲಿ ಬರೆದಿರುವ ಪ್ರಕಾರ ಹೋಗುತ್ತಾನೆ; ಆದರೆ ಮನುಷ್ಯಕುಮಾರನು ಯಾವನಿಂದ ಹಿಡಿದು ಕೊಡಲ್ಪಡುತ್ತಾನೋ ಆ ಮನುಷ್ಯನಿಗೆ ಅಯ್ಯೋ! ಆ ಮನುಷ್ಯನು ಹುಟ್ಟದೆ ಹೋಗಿದ್ದರೆ ಅವನಿಗೆ ಒಳ್ಳೇದಾಗುತ್ತಿತ್ತು ಅಂದನು.
ಲೂಕನು 11:46
ಅದಕ್ಕೆ ಆತನು--ನ್ಯಾಯಶಾಸ್ತ್ರಿಗಳಾದ ನಿಮಗೂ ಅಯ್ಯೋ! ಯಾಕಂದರೆ ಹೊರಲು ಕಠಿಣವಾದ ಹೊರೆ ಗಳನ್ನು ಮನುಷ್ಯರ ಮೇಲೆ ಹೊರಿಸಿ ನಿಮ್ಮ ಬೆರಳುಗಳಲ್ಲಿ ಒಂದರಿಂದಾದರೂ ನೀವು ಆ ಹೊರೆಗಳನ್ನು ಮುಟ್ಟು ವದಿಲ್ಲ.
ಯೋಹಾನನು 9:22
ಅವನ ತಂದೆತಾಯಿಗಳು ಯೆಹೂದ್ಯರಿಗೆ ಭಯಪಟ್ಟ ದ್ದರಿಂದ ಈ ಮಾತುಗಳನ್ನು ಹೇಳಿದರು; ಯಾಕಂದರೆ ಯಾವನಾದರೂ ಆತನು ಕ್ರಿಸ್ತನೆಂದು ಒಪ್ಪಿಕೊಂಡರೆ ಅವನನ್ನು ಸಭಾಮಂದಿರದಿಂದ ಬಹಿಷ್ಕರಿಸಬೇಕೆಂದು ಯೆಹೂದ್ಯರು ಆಗಲೇ ನಿರ್ಣಯಿಸಿದ್ದರು.
ಯೋಹಾನನು 19:6
ಪ್ರಧಾನಯಾಜಕರೂ ಅಧಿಕಾರಿಗಳೂ ಆತನನ್ನು ನೋಡಿದಾಗ--ಅವನನ್ನು ಶಿಲುಬೆಗೆ ಹಾಕಿಸು, ಅವ ನನ್ನು ಶಿಲುಬೆಗೆ ಹಾಕಿಸು ಎಂದು ಕೂಗಿದರು. ಅದಕ್ಕೆ ಪಿಲಾತನು ಅವರಿಗೆ--ನೀವೇ ಆತನನ್ನು ತಕ್ಕೊಂಡು ಹೋಗಿ ಶಿಲುಬೆಗೆ ಹಾಕಿರಿ; ಯಾಕಂದರೆ ನಾನು ಆತನಲ್ಲಿ ಯಾವ ಅಪರಾಧವನ್ನೂ ಕಾಣಲಿಲ್ಲ ಅಂದನು.
ಯೂದನು 1:11
ಅವರು ಕಾಯಿನನ ಮಾರ್ಗ ಹಿಡಿದವರೂ ಪ್ರತೀಕಾರ ಹೊಂದುವದಕ್ಕಾಗಿ ಬಿಳಾಮನ ದೋಷವನ್ನು ಮಾಡುವದಕ್ಕೆ ದುರಾಶೆ ಯಿಂದ ಓಡುವವರೂ ಕೋರಹನಂತೆ ಎದುರು ಮಾತನಾಡಿ ನಾಶವಾಗುವವರೂ ಆಗಿರುವ ಅವರಿಗೆ ಅಯ್ಯೋ!
ಮತ್ತಾಯನು 23:13
ಆದರೆ ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮನುಷ್ಯರ ಮುಂದೆ ಪರ ಲೋಕರಾಜ್ಯವನ್ನು ಮುಚ್ಚುತ್ತೀರಿ. ನೀವಂತೂ ಪ್ರವೇಶಿ ಸುವದಿಲ್ಲ, ಪ್ರವೇಶಿಸುವವರನ್ನೂ ನೀವು ಒಳಗೆ ಹೋಗಗೊಡಿಸುವದಿಲ್ಲ.
ಮತ್ತಾಯನು 11:21
ಖೊರಾಜಿನೇ, ನಿನಗೆ ಅಯ್ಯೋ! ಬೆತ್ಸಾಯಿದವೇ, ನಿನಗೆ ಅಯ್ಯೋ! ಯಾಕಂದರೆ ನಿನ್ನೊಳಗೆ ನಡೆದ ಮಹತ್ಕಾರ್ಯಗಳು ತೂರ್ ಮತ್ತು ಸೀದೋನ್ಗಳಲ್ಲಿ ನಡೆಯುತ್ತಿದ್ದರೆ ಅವುಗಳು ಆಗಲೇ ಗೋಣೀತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕೂತು ಮಾನಸಾಂತರಪಡುತ್ತಿದ್ದವು.
ಹಬಕ್ಕೂಕ್ಕ 2:19
ಮರಕ್ಕೆ--ಎಚ್ಚರವಾಗು; ಮೂಕವಾದ ಕಲ್ಲಿಗೆ--ಎದ್ದು ಬೋಧಿಸಲಿ ಎಂದು ಹೇಳುವವನಿಗೆ ಅಯ್ಯೋ! ಇಗೋ, ಅದು ಬಂಗಾರದಿಂದಲೂ ಬೆಳ್ಳಿಯಿಂದಲೂ ಹೊದಿಸಲ್ಪಟ್ಟಿದೆ, ಆದರೆ ಅದರಲ್ಲಿ ಉಸಿರು ಎಷ್ಟು ಮಾತ್ರವೂ ಇಲ್ಲ.
ಎಸ್ತೇರಳು 3:10
ಆಗ ಅರಸನು ತನ್ನ ಕೈಯಲ್ಲಿದ್ದ ಉಂಗುರವನ್ನು ತೆಗೆದು ಯೆಹೂದ್ಯರ ವೈರಿಯಾದ ಅಗಾಗನಾದ ಹಮ್ಮೆದಾತನ ಮಗನಾದ ಹಾಮಾನನಿಗೆ ಕೊಟ್ಟನು.
ಕೀರ್ತನೆಗಳು 58:2
ಹೌದು, ನಿಮ್ಮ ಹೃದಯದಲ್ಲಿ ದುಷ್ಟತ್ವ ವನ್ನು ಮಾಡುತ್ತೀರಲ್ಲಾ, ಲೋಕದಲ್ಲಿ ನಿಮ್ಮ ಕೈಗಳ ಬಲಾತ್ಕಾರವನ್ನು ತೂಗುತ್ತೀರಲ್ಲಾ.
ಯೆಶಾಯ 5:18
ವ್ಯರ್ಥವಾದ ಹಗ್ಗಗಳಿಂದ ಅಪರಾಧವನ್ನೂ ಬಂಡಿ ಹಗ್ಗದಿಂದಲೋ ಎಂಬಂತೆ ಪಾಪವನ್ನೂ ಎಳೆದು --
ಯೆಶಾಯ 5:20
ಕೇಡಿಗೆ ಮೇಲೆಂದೂ ಮೇಲಿಗೆ ಕೇಡೆಂದೂ ಕರೆದು ಕತ್ತಲೆಯನ್ನು ಬೆಳಕೆಂದೂ ಬೆಳಕನ್ನು ಕತ್ತಲೆ ಯೆಂದೂ ಕಹಿಯನ್ನು ಸಿಹಿಯೆಂದೂ ಸಿಹಿಯನ್ನು ಕಹಿ ಯೆಂದೂ ಎಣಿಸುವವರಿಗೆ ಅಯ್ಯೋ!
ಯೆರೆಮಿಯ 22:13
ಅನೀತಿಯಿಂದ ತನ್ನ ಮನೆಯನ್ನು ಅನ್ಯಾಯದಿಂದ ತನ್ನ ಕೊಠಡಿಗಳನ್ನು ಕಟ್ಟಿಸಿಕೊಳ್ಳು ವವನಿಗೂ ಕೂಲಿಕೊಡದೆ ತನ್ನ ನೆರೆಯವನ ಕೈಯಿಂದ ಸುಮ್ಮನೆ ಕೆಲಸತಕ್ಕೊಳ್ಳುವವನಿಗೂ ಅಯ್ಯೋ!
ದಾನಿಯೇಲನು 6:8
ಓ ರಾಜನೇ, ಈಗ ನೀನು ಈ ನಿಬಂಧನೆಯನ್ನು ವಿಧಿಸಿ ಇದು ಬದಲಾಗದಂತೆ ಮೇದ್ಯಯರ ಮತ್ತು ಪಾರಸೀಯರ ನ್ಯಾಯಪ್ರಮಾಣದ ಪ್ರಕಾರ ಇದು ಬೇರೆಯಾಗದಂತೆ ನಿರ್ಣಯವನ್ನು ರೂಪಿಸಿ ಬರಹಕ್ಕೆ ರುಜುಹಾಕು ಅಂದರು.
ಮಿಕ 3:9
ಯಾಕೋಬನ ಮನೆತನದವರ ಪ್ರಧಾನರೇ, ಇಸ್ರಾಯೇಲಿನ ಮನೆತನದವರ ನ್ಯಾಯಾ ಧಿಪತಿಗಳೇ, ನ್ಯಾಯವನ್ನು ಅಸಹ್ಯಿಸಿ ಎಲ್ಲಾ ಯಥಾರ್ಥ ತ್ವವನ್ನು ಡೊಂಕು ಮಾಡುವವರೇ,
ಮಿಕ 6:16
ಒಮ್ರಿಯ ನಿಯಮಗಳನ್ನೂ ಅಹಾಬನ ಮನೆಯ ಸಮಸ್ತ ಕ್ರಿಯೆಗಳನ್ನೂ ಕೈಕೊಳ್ಳುತ್ತೀರಿ; ನಾನು ನಿನ್ನನ್ನು ಹಾಳಾ ಗಿಯೂ ಅದರ ನಿವಾಸಿಗಳನ್ನು ಸಿಳ್ಳಿಡುವಿಕೆಗಾಗಿಯೂ ಮಾಡುವ ಹಾಗೆ ಅವರ ಆಲೋಚನೆಗಳಲ್ಲಿ ನಡ ಕೊಳ್ಳುತ್ತೀರಿ; ಆದದರಿಂದ ನನ್ನ ಜನರ ನಿಂದೆಯನ್ನು ಹೊರುವಿರಿ.
ಹಬಕ್ಕೂಕ್ಕ 2:9
ತನ್ನ ಗೂಡನ್ನು ಉನ್ನತದಲ್ಲಿ ಇಡುವ ಹಾಗೆಯೂ ಕೇಡಿನ ಕೈಗೆ ತಪ್ಪಿಸಿಕೊಳ್ಳುವ ಹಾಗೆಯೂ ತನ್ನ ಮನೆ ಗೋಸ್ಕರ ದುರ್ಲಾಭವನ್ನು ಆಶಿಸುವವನಿಗೆ ಅಯ್ಯೋ!
ಹಬಕ್ಕೂಕ್ಕ 2:12
ಊರನ್ನು ರಕ್ತದಿಂದ ಕಟ್ಟಿ, ಪಟ್ಟಣವನ್ನು ಅನ್ಯಾಯ ದಿಂದ ಸ್ಥಾಪಿಸುವವನಿಗೆ ಅಯ್ಯೋ!
ಹಬಕ್ಕೂಕ್ಕ 2:15
ತನ್ನ ನೆರೆಯವ ನಿಗೆ ಕುಡಿಯಕೊಟ್ಟು ನಿನ್ನ ಬುಟ್ಟಿಯನ್ನು ಹೊಯಿದು ಅವರ ಬೆತ್ತಲೆತನವನ್ನು ನೋಡುವ ಹಾಗೆ ಅಮಲೇರಿ ಸುವವನಿಗೆ ಅಯ್ಯೋ!
ಯೆಶಾಯ 5:11
ಮದ್ಯಪಾನವನ್ನು ಅತಿಯಾಗಿ ಕುಡಿಯಲು ಬೆಳ ಗಿನ ಜಾವದಲ್ಲಿ ಎದ್ದು ರಾತ್ರಿಯ ವರೆಗೂ ದ್ರಾಕ್ಷಾ ರಸದಿಂದ ಅಮಲೇರಿದವರಾಗಿ ಕಾಲ ಕಳೆಯುವವರಿಗೆ ಅಯ್ಯೋ!
ಯೆಶಾಯ 3:11
ಕೆಡುಕರಿಗೆ ಅಯ್ಯೋ! ಅವರಿಗೆ ಕೇಡೇ ಇರಲಿ; ಅವನ ಕೈಗಳ ಪ್ರತಿಫಲವು ಅವನಿಗೆ ಕೊಡಲ್ಪಡುವದು.
1 ಅರಸುಗಳು 21:13
ಆಗ ಬೆಲಿಯಾಳನ ಮಕ್ಕಳಾದ ಇಬ್ಬರು ಮನುಷ್ಯರು ಬಂದು ಅವನಿಗೆದುರಾಗಿ ಕುಳಿತು ಕೊಂಡರು; ಈ ಬೆಲಿಯಾಳನ ಮನುಷ್ಯರು ಜನರ ಸಮ್ಮುಖದಲ್ಲಿ ನಾಬೋತನಿಗೆ ವಿರೋಧವಾಗಿ--ಈ ನಾಬೋತನು ದೇವರನ್ನೂ ಅರಸನನ್ನೂ ದೂಷಿಸಿದ ನೆಂದು ಸಾಕ್ಷಿ ಹೇಳಿದರು. ಆಗ ಅವನನ್ನು ಪಟ್ಟಣದ ಹೊರಗೆ ತಕ್ಕೊಂಡು ಹೋಗಿ ಅವನು ಸಾಯುವ ಹಾಗೆ ಅವರು ಅವನಿಗೆ ಕಲ್ಲೆಸೆದರು. ಅವನು ಸತ್ತನು.