ಯೆರೆಮಿಯ 42:19 in Kannada

ಕನ್ನಡ ಕನ್ನಡ ಬೈಬಲ್ ಯೆರೆಮಿಯ ಯೆರೆಮಿಯ 42 ಯೆರೆಮಿಯ 42:19

Jeremiah 42:19
ಯೆಹೂದದ ಶೇಷವೇ, ಕರ್ತನು ನಿಮ್ಮ ವಿಷಯ ಹೇಳಿದ್ದೇನಂದರೆ--ಐಗುಪ್ತಕ್ಕೆ ಹೋಗ ಬೇಡಿರಿ; ನಾನು ಈ ಹೊತ್ತು ನಿಮಗೆ ಸಾಕ್ಷಿ ಕೊಟ್ಟಿದ್ದೇ ನೆಂದು ಚೆನ್ನಾಗಿ ತಿಳುಕೊಳ್ಳಿರಿ. ನಿಶ್ಚಯವಾಗಿ ಸ್ವಂತ ಪ್ರಾಣಗಳಿಗೆ ವಿರೋಧವಾಗಿ ಮೋಸಮಾಡಿದ್ದೀರಿ;

Jeremiah 42:18Jeremiah 42Jeremiah 42:20

Jeremiah 42:19 in Other Translations

King James Version (KJV)
The LORD hath said concerning you, O ye remnant of Judah; Go ye not into Egypt: know certainly that I have admonished you this day.

American Standard Version (ASV)
Jehovah hath spoken concerning you, O remnant of Judah, Go ye not into Egypt: know certainly that I have testified unto you this day.

Bible in Basic English (BBE)
The Lord has said about you, O last of Judah, Go not into Egypt: be certain that I have given witness to you this day.

Darby English Bible (DBY)
Jehovah hath said concerning you, the remnant of Judah, Go ye not into Egypt. Know certainly that I have admonished you this day.

World English Bible (WEB)
Yahweh has spoken concerning you, remnant of Judah, Don't you go into Egypt: know certainly that I have testified to you this day.

Young's Literal Translation (YLT)
`Jehovah hath spoken against you, O remnant of Judah, do not enter Egypt: know certainly that I have testified against you to-day;

The
Lord
דִּבֶּ֨רdibberdee-BER
hath
said
יְהוָ֤הyĕhwâyeh-VA
concerning
עֲלֵיכֶם֙ʿălêkemuh-lay-HEM
remnant
ye
O
you,
שְׁאֵרִ֣יתšĕʾērîtsheh-ay-REET
of
Judah;
יְהוּדָ֔הyĕhûdâyeh-hoo-DA
Go
אַלʾalal
not
ye
תָּבֹ֖אוּtābōʾûta-VOH-oo
into
Egypt:
מִצְרָ֑יִםmiṣrāyimmeets-RA-yeem
know
יָדֹ֙עַ֙yādōʿaya-DOH-AH
certainly
תֵּֽדְע֔וּtēdĕʿûtay-deh-OO
that
כִּיkee
admonished
have
I
הַעִידֹ֥תִיhaʿîdōtîha-ee-DOH-tee
you
this
day.
בָכֶ֖םbākemva-HEM
הַיּֽוֹם׃hayyômha-yome

Cross Reference

ಧರ್ಮೋಪದೇಶಕಾಂಡ 17:16
ಆದರೆ ಅವನು ತನಗೆ ಕುದುರೆಗಳನ್ನು ಹೆಚ್ಚಿಸಿ ಕೊಳ್ಳಬಾರದು; ಕುದುರೆಗಳನ್ನು ಹೆಚ್ಚಿಸಿಕೊಳ್ಳುವ ಹಾಗೆ ಜನಗಳನ್ನು ಐಗುಪ್ತ ದೇಶಕ್ಕೆ ತಿರುಗಿಸಬಾರದು; ಆ ಮಾರ್ಗವಾಗಿ ನೀವು ಇನ್ನು ತಿರುಗಿ ಹೋಗ ಬಾರದೆಂದು ಕರ್ತನು ನಿಮಗೆ ಹೇಳಿದನಲ್ಲಾ.

ಯೆಶಾಯ 30:1
ಕರ್ತನು ಹೀಗೆ ಅನ್ನುತ್ತಾನೆ. ತಿರುಗಿ ಬೀಳುವ ಮಕ್ಕಳಿಗೆ ಅಯ್ಯೋ ಅವರು ಆಲೋಚನೆಯನ್ನು ಮಾಡುತ್ತಾರೆ, ಆದರೆ ನನ್ನಿಂದಲ್ಲ; ನನ್ನ ಆತ್ಮಪ್ರೇರಿತರಾಗದೆ ಉಪಾಯವನ್ನು ನೇಯ್ದು ಪಾಪದ ಮೇಲೆ ಪಾಪವನ್ನು ಸೇರಿಸಿಕೊಂಡಿದ್ದಾರೆ.

ನೆಹೆಮಿಯ 9:29
ನೀನು ಅವರನ್ನು ನಿನ್ನ ನ್ಯಾಯಪ್ರಮಾಣಕ್ಕೆ ತಿರಿಗಿ ಬರುವ ಹಾಗೆ ಅವರಿಗೆ ವಿರೋಧವಾಗಿ ಸಾಕ್ಷಿ ಹೇಳಿದಿ. ಆದರೆ ಅವರು ಗರ್ವಪಟ್ಟು ನಿನ್ನ ಆಜ್ಞೆಗಳನ್ನು ಕೇಳದೆ ಮನುಷ್ಯರು ಯಾವವುಗಳನ್ನು ಕೈಕೊಳ್ಳುವದರಿಂದ ಬದುಕುವರೋ ಆ ನಿನ್ನ ನ್ಯಾಯಗಳಿಗೆ ವಿರೋಧವಾಗಿ ಪಾಪಮಾಡಿಹೆಗಲುಕೊಡದೆ ಕುತ್ತಿಗೆಯನ್ನು ಕಠಿಣಪಡಿಸಿಕೊಂಡು ಕೇಳದೆಹೋದರು.

ನೆಹೆಮಿಯ 9:26
ಆದಾಗ್ಯೂ ಅವರು ನಿನಗೆ ಅವಿಧೇಯರಾಗಿ, ವಿರೋಧವಾಗಿ, ನಿಂತು ತಿರುಗಿಬಿದ್ದು, ನಿನ್ನ ನ್ಯಾಯ ಪ್ರಮಾಣವನ್ನು ತಮ್ಮ ಬೆನ್ನಿನ ಹಿಂದಕ್ಕೆ ಬಿಸಾಡಿ, ಅವರು ನಿನ್ನ ಕಡೆಗೆ ತಿರುಗಬೇಕೆಂದು ಸಾಕ್ಷಿ ಹೇಳಿದ ನಿನ್ನ ಪ್ರವಾದಿಗಳನ್ನು ಕೊಂದು ಬಹು ಕೋಪೋದ್ರೇಕ ಗೊಳಿಸಿದರು.

1 ಥೆಸಲೊನೀಕದವರಿಗೆ 4:6
ಈ ವಿಷಯದಲ್ಲಿ ಯಾರೂ ಅತಿಕ್ರಮಿಸಿ ತನ್ನ ಸಹೋದರನನ್ನು ವಂಚಿಸಬಾರದು; ನಾವು ಮುಂಚೆ ತಿಳಿಸಿ ನಿಮಗೆ ಖಂಡಿತವಾಗಿ ಹೇಳಿದ ಪ್ರಕಾರ ಇವೆಲ್ಲವುಗಳ ವಿಷಯದಲ್ಲಿ ಕರ್ತನು ಮುಯ್ಯಿಗೆ ಮುಯ್ಯಿ ತೀರಿಸುವ ವನಾಗಿದ್ದಾನೆ.

ಎಫೆಸದವರಿಗೆ 4:17
ಆದದರಿಂದ ಅನ್ಯಜನರು ನಡೆದುಕೊಳ್ಳುವ ಪ್ರಕಾರ ನೀವು ಇನ್ನು ಮೇಲೆ ನಡೆದುಕೊಳ್ಳಬಾರ ದೆಂದು ಕರ್ತನಲ್ಲಿರುವವನಾಗಿ ನಾನು ನಿಮಗೆ ಖಂಡಿತವಾಗಿ ಹೇಳುತ್ತೇನೆ. ಅವರು ನಿಷ್ಪ್ರಯೋಜನ ವಾದ ಬುದ್ಧಿಯುಳ್ಳವರಾಗಿ ನಡೆದುಕೊಳ್ಳುತ್ತಾರೆ;

ಅಪೊಸ್ತಲರ ಕೃತ್ಯಗ 20:26
ಆದಕಾರಣ ಎಲ್ಲಾ ಮನುಷ್ಯರ ರಕ್ತದ ವಿಷಯದಲ್ಲಿ ನಾನು ನಿರ್ದೋಷಿಯಾಗಿದ್ದೇನೆಂಬದಕ್ಕೆ ಈ ದಿವಸ ನೀವೇ ನನಗೆ ಸಾಕ್ಷಿಗಳು.

ಅಪೊಸ್ತಲರ ಕೃತ್ಯಗ 2:40
ಅವನು ಇನ್ನೂ ಬೇರೆ ಅನೇಕ ಮಾತುಗಳಿಂದ ಸಾಕ್ಷಿಕೊಟ್ಟು--ಈ ಮೂರ್ಖ ಸಂತತಿಯವರಿಂದ ನಿಮ್ಮನ್ನು ನೀವು ರಕ್ಷಿಸಿಕೊಳ್ಳಿರಿ ಎಂದು ಎಚ್ಚರಿಸಿ ಹೇಳಿದನು.

ಯೆಹೆಜ್ಕೇಲನು 17:15
ಆದರೆ ಇವನು ಅವನಿಗೆ ವಿರುದ್ಧವಾಗಿ ತಿರುಗಿಬಿದ್ದು ತನ್ನ ರಾಯಭಾರಿಗಳನ್ನು ಐಗುಪ್ತಕ್ಕೆ ಕಳು ಹಿಸಿ ತನಗೆ ಕುದುರೆಗಳನ್ನೂ ಬಹಳ ಜನರನ್ನೂ ಕೊಡ ಬೇಕೆಂದು ಹೇಳಿ ಕಳುಹಿಸಿದನು. ಇವನು ಅಭಿವೃದ್ಧಿ ಯಾಗುವನೋ? ಇಂಥಾ ಸಂಗತಿಗಳನ್ನು ಮಾಡುವ ವನು ತಪ್ಪಿಸಿಕೊಳ್ಳುವನೋ? ಅಥವಾ ಒಡಂಬಡಿಕೆ ಯನ್ನು ಮುರಿದು ತಪ್ಪಿಸಿಕೊಳ್ಳಲಾಗುವದೋ?

ಯೆಹೆಜ್ಕೇಲನು 3:21
ಆದಾಗ್ಯೂ ನೀತಿವಂತನು ಪಾಪ ಮಾಡದ ಹಾಗೆ ನೀನು ನೀತಿವಂತನನ್ನು ಎಚ್ಚರಿಸುವಾಗ ಅವನು ಪಾಪಮಾಡದೆ ಎಚ್ಚರಿಕೆಯಾದದರಿಂದ ನಿಶ್ಚಯವಾಗಿ ಬದುಕುವನು; ನೀನು ನಿನ್ನ ಪ್ರಾಣವನ್ನು ಸಹ ಉಳಿಸಿಕೊಂಡಿರುವಿ.

ಯೆಹೆಜ್ಕೇಲನು 2:5
ಅವರು ಕೇಳಲಿ ಅಥವಾ ಕೇಳದಿರಲಿ (ಅವರು ತಿರುಗಿಬೀಳುವ ಮನೆಯವರು); ಆದರೆ ತಮ್ಮೊಳಗೆ ಒಬ್ಬ ಪ್ರವಾದಿ ಇರುವನೆಂದು ತಿಳಿದು ಕೊಂಡರೆ ಸಾಕು.

ಯೆರೆಮಿಯ 38:21
ಆದರೆ ನೀನು ಹೊರಗೆ ಹೋಗಲು ಮನಸ್ಸಿ ಲ್ಲದ ಪಕ್ಷದಲ್ಲಿ ಕರ್ತನು ನನಗೆ ತೋರಿಸಿದ ಮಾತು ಇದೇ--

ಯೆಶಾಯ 31:1
1 ಸಹಾಯಕ್ಕಾಗಿ ಐಗುಪ್ತವನ್ನು ಸೇರಿ ಅಶ್ವ ಬಲವನ್ನು ರಥವನ್ನು ಆಶ್ರಯಿಸುವವರಿಗೆ ಅಯ್ಯೊ! ರಥಗಳು ಬಹಳವೆಂದೂ ಸವಾರರು ಬಹು ಬಲಿಷ್ಠರೆಂದೂ ಅವರ ಮೇಲೆ ಭರವಸವಿಡುತ್ತಾರೆ. ಆದರೆ ಇಸ್ರಾಯೇಲಿನ ಪರಿಶುದ್ಧನ ಮೇಲೆ ದೃಷ್ಟಿ ಇಡುವದಿಲ್ಲ; ಇಲ್ಲವೆ ಕರ್ತನನ್ನು ಆಶ್ರಯಿಸು (ಹುಡು ಕು)ವದಿಲ್ಲ.

2 ಪೂರ್ವಕಾಲವೃತ್ತಾ 24:19
ಆದಾಗ್ಯೂ ಕರ್ತನು ತನ್ನ ಕಡೆಗೆ ಅವರನ್ನು ತಿರುಗಿಸುವದಕ್ಕೆ ಪ್ರವಾದಿಗಳನ್ನು ಅವರ ಬಳಿಗೆ ಕಳುಹಿಸಿದನು; ಇವರು ಅವರಿಗೆ ಸಾಕ್ಷಿಯಾಗಿ ಹೇಳಿದರು; ಆದರೆ ಅವರು ಕಿವಿಗೊಡದೆ ಹೋದರು.

ಧರ್ಮೋಪದೇಶಕಾಂಡ 31:21
ಅನಂತರ ಬಹಳ ಕೇಡುಗಳೂ ಇಕ್ಕಟ್ಟುಗಳೂ ಅವರಿಗೆ ಸಂಭವಿಸು ವಾಗ ಈ ಹಾಡು ಅವರಿಗೆ ವಿರೋಧವಾಗಿ ಸಾಕ್ಷಿಯಾಗಿ ಉತ್ತರ ಕೊಡುವದು; ಯಾಕಂದರೆ ಅದು ಅವರ ಸಂತತಿಯ ಬಾಯಿಯಲ್ಲಿಂದ ಮರೆತುಹೋಗುವದಿಲ್ಲ; ನಾನು ಪ್ರಮಾಣಮಾಡಿದ ದೇಶದಲ್ಲಿ ಅವರನ್ನು ತರುವದಕ್ಕಿಂತ ಮುಂಚೆ ಅವರು ಈಹೊತ್ತು ಮಾಡುವ ಕಲ್ಪನೆಗಳನ್ನು ನಾನು ಬಲ್ಲೆನು.