Romans 5:1
ಹೀಗಿರಲಾಗಿ ನಾವು ನಂಬಿಕೆಯಿಂದ ನೀತಿವಂತರಾದ ಕಾರಣ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನಮಗೆ ದೇವರೊಂದಿಗೆ ಸಮಾಧಾನ ಉಂಟಾಗಿದೆ.
Romans 5:1 in Other Translations
King James Version (KJV)
Therefore being justified by faith, we have peace with God through our Lord Jesus Christ:
American Standard Version (ASV)
Being therefore justified by faith, we have peace with God through our Lord Jesus Christ;
Bible in Basic English (BBE)
For which reason, because we have righteousness through faith, let us be at peace with God through our Lord Jesus Christ;
Darby English Bible (DBY)
Therefore having been justified on the principle of faith, we have peace towards God through our Lord Jesus Christ;
World English Bible (WEB)
Being therefore justified by faith, we have peace with God through our Lord Jesus Christ;
Young's Literal Translation (YLT)
Having been declared righteous, then, by faith, we have peace toward God through our Lord Jesus Christ,
| Therefore | Δικαιωθέντες | dikaiōthentes | thee-kay-oh-THANE-tase |
| being justified | οὖν | oun | oon |
| by | ἐκ | ek | ake |
| faith, | πίστεως | pisteōs | PEE-stay-ose |
| we have | εἰρήνην | eirēnēn | ee-RAY-nane |
| peace | ἔχομεν | echomen | A-hoh-mane |
| with | πρὸς | pros | prose |
| τὸν | ton | tone | |
| God | θεὸν | theon | thay-ONE |
| through | διὰ | dia | thee-AH |
| our | τοῦ | tou | too |
| κυρίου | kyriou | kyoo-REE-oo | |
| Lord | ἡμῶν | hēmōn | ay-MONE |
| Jesus | Ἰησοῦ | iēsou | ee-ay-SOO |
| Christ: | Χριστοῦ | christou | hree-STOO |
Cross Reference
ರೋಮಾಪುರದವರಿಗೆ 15:13
ನಿರೀಕ್ಷೆಗೆ ಆಧಾರನಾದ ದೇವರು ಪವಿತ್ರಾತ್ಮನ ಬಲದಿಂದ ನೀವು ನಿರೀಕ್ಷೆಯಲ್ಲಿ ಅಭಿವೃದ್ಧಿ ಹೊಂದು ವಂತೆ ನಂಬಿಕೆಯಿಂದುಂಟಾದ ಸಂತೋಷ ಸಮಾಧಾನಗಳಿಂದ ನಿಮ್ಮನ್ನು ತುಂಬಿಸಲಿ.
ರೋಮಾಪುರದವರಿಗೆ 6:23
ಯಾಕಂದರೆ ಪಾಪದ ಸಂಬಳ ಮರಣ. ಆದರೆ ದೇವರ ದಾನವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮುಖಾಂತರ ನಿತ್ಯಜೀವವು.
ಯೆಶಾಯ 32:17
ನೀತಿಯ ಕೆಲಸವು ಸಮಾಧಾನವೂ ನೀತಿಯ ಫಲವು ನಿತ್ಯವಾದ ಶಾಂತಿಯೂ ಭರವಸವೂ ಆಗಿರುವದು.
ರೋಮಾಪುರದವರಿಗೆ 14:17
ಯಾಕಂದರೆ ತಿನ್ನುವದೂ ಕುಡಿಯುವದೂ ದೇವರ ರಾಜ್ಯವಲ್ಲ; ಆದರೆ ನೀತಿಯೂ ಸಮಾಧಾನವೂ ಪವಿತ್ರಾತ್ಮನಲ್ಲಿರುವ ಆನಂದವೂ ಆಗಿದೆ.
ಅಪೊಸ್ತಲರ ಕೃತ್ಯಗ 13:38
ಆದದರಿಂದ ಜನರೇ, ಸಹೋದರರೇ, ಈ ಮನುಷ್ಯನ ಮೂಲಕವಾಗಿ ಪಾಪಪರಿಹಾರವು ದೊರೆಯುತ್ತದೆಂಬದು ನಿಮಗೆ ಸಾರೋಣವಾಗು ತ್ತದೆಂದೂ
ಯೋಹಾನನು 14:27
ನಾನು ನಿಮಗೆ ಸಮಾಧಾನವನ್ನು ಬಿಟ್ಟು ಹೋಗುತ್ತೇನೆ, ನನ್ನ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ; ಲೋಕವು ಕೊಡುವ ರೀತಿಯಲ್ಲಿ ನಾನು ನಿಮಗೆ ಕೊಡುವದಿಲ್ಲ, ನಿಮ್ಮ ಹೃದಯವು ಕಳವಳಗೊಳ್ಳ ದಿರಲಿ ಇಲ್ಲವೆ ಅಂಜದಿರಲಿ.
ಕೊಲೊಸ್ಸೆಯವರಿಗೆ 1:20
ಆತನ ಶಿಲುಬೆಯ ರಕ್ತದಿಂದ ತಾನು ಸಮಾಧಾನವನ್ನು ಉಂಟುಮಾಡಿ ಆತನಿಂದ ಭೂಪರ ಲೋಕಗಳಲ್ಲಿರುವ ಎಲ್ಲವುಗಳನ್ನು ಆತನ ಮೂಲಕ ತನಗೆ ಸಂಧಾನಪಡಿಸಿಕೊಂಡನು.
ಕೊಲೊಸ್ಸೆಯವರಿಗೆ 3:15
ದೇವರ ಸಮಾಧಾನವು ನಿಮ್ಮ ಹೃದಯಗಳಲ್ಲಿ ಆಳಲಿ; ಅದಕ್ಕಾಗಿಯೇ ನೀವು ಸಹ ಒಂದೇ ದೇಹವಾಗಿರುವಂತೆ ಕರೆಯಲ್ಪಟ್ಟಿದ್ದೀರಿ; ಇದಲ್ಲದೆ ನೀವು ಕೃತಜ್ಞತೆಯುಳ್ಳವರಾಗಿರ್ರಿ.
2 ಥೆಸಲೊನೀಕದವರಿಗೆ 3:16
ಶಾಂತಿದಾಯಕನಾದ ಕರ್ತನು ತಾನೇ ಸದಾಕಾಲ ದಲ್ಲಿಯೂ ಸಕಲವಿಧದಲ್ಲಿಯೂ ನಿಮಗೆ ಶಾಂತಿಯನ್ನು ದಯಪಾಲಿಸಲಿ. ಕರ್ತನು ನಿಮ್ಮೆಲ್ಲರೊಂದಿಗೆ ಇರಲಿ.
ಕೀರ್ತನೆಗಳು 85:8
ಕರ್ತನಾದ ದೇವರು ಏನು ಹೇಳುತ್ತಾನೋ ಅದನ್ನು ಕೇಳುವೆನು; ನಿಶ್ಚಯವಾಗಿ ಜನರಿಗೂ ತನ್ನ ಪರಿಶುದ್ಧ ರಿಗೂ ಸಮಾಧಾನದ ಮಾತು ಹೇಳುವನು; ಇನ್ನು ಬುದ್ಧಿಹೀನತ್ವಕ್ಕೆ ಅವರು ತಿರುಗಿಕೊಳ್ಳದೆ ಇರಲಿ.
ಯೆಶಾಯ 27:5
ಇಲ್ಲದಿದ್ದರೆ ಅವನು ನನ್ನ ಸಂಗಡ ಸಮಾಧಾನ ಮಾಡಿಕೊಳ್ಳುವ ಹಾಗೆ ನನ್ನ ಬಲವನ್ನು ಹಿಡುಕೊ ಳ್ಳಲಿ, ನನ್ನೊಡನೆ ಸಮಾಧಾನ ಮಾಡಿಕೊಳ್ಳಲಿ.
ಯೆಶಾಯ 57:19
ನಾನು ತುಟಿಗಳಿಗೆ ಫಲವನ್ನುಂಟು ಮಾಡುವ ವನಾಗಿ ಅವನಿಗೆ ದೂರವಾದವನಿಗೂ ಅವನಿಗೆ ಸವಿಾಪವಾದವನಿಗೂ ಸಮಾಧಾನವಿರಲಿ. ನಾನು ಅವನನ್ನು ಸ್ವಸ್ಥಮಾಡುವೆ ನೆಂದು ಕರ್ತನು ಹೇಳು ತ್ತಾನೆ.
ಲೂಕನು 10:5
ನೀವು ಯಾವ ಮನೆಯಲ್ಲಿಯಾದರೂ ಪ್ರವೇಶಿಸುವಾಗ ಮೊದಲು--ಈ ಮನೆಗೆ ಸಮಾಧಾನವಾಗಲಿ ಎಂದು ಹೇಳಿರಿ.
ಲೂಕನು 19:38
ಕರ್ತನ ಹೆಸರಿನಲ್ಲಿ ಬರುವ ಅರ ಸನು ಸ್ತುತಿಹೊಂದಲಿ; ಪರಲೋಕದಲ್ಲಿ ಸಮಾಧಾನ, ಮತ್ತು ಅತ್ಯುನ್ನತದಲ್ಲಿ ಮಹಿಮೆ ಎಂದು ಹೇಳಿದರು.
ಲೂಕನು 19:42
ನೀನು ಈ ನಿನ್ನ ದಿನದಲ್ಲಿಯಾದರೂ ನಿನ್ನ ಸಮಾ ಧಾನಕ್ಕೆ ಸಂಬಂಧಪಟ್ಟವುಗಳನ್ನು ತಿಳಿದುಕೊಳ್ಳಬೇಕಾ ಗಿತ್ತು; ಆದರೆ ಈಗ ಅವುಗಳು ನಿನ್ನ ಕಣ್ಣುಗಳಿಗೆ ಮರೆಯಾಗಿವೆ.
ಯೋಹಾನನು 16:33
ನನ್ನಲ್ಲಿ ನಿಮಗೆ ಸಮಾಧಾನವು ಉಂಟಾಗುವಂತೆ ಇವುಗಳನ್ನು ನಾನು ನಿಮಗೆ ಹೇಳಿದ್ದೇನೆ, ಲೋಕದಲ್ಲಿ ನಿಮಗೆ ಸಂಕಟ ಇರುವದು; ಆದರೆ ಧೈರ್ಯವಾಗಿರ್ರಿ; ನಾನು ಲೋಕ ವನ್ನು ಜಯಿಸಿದ್ದೇನೆ ಅಂದನು.
ಅಪೊಸ್ತಲರ ಕೃತ್ಯಗ 10:36
ಯೇಸು ಕ್ರಿಸ್ತನ ಮೂಲಕ ದೇವರು ಸಮಾಧಾನವನ್ನು ಪ್ರಕಟಿಸುತ್ತಾ ಇಸ್ರಾಯೇಲ್ ಜನರಿಗೆ ವಾಕ್ಯವನ್ನು ಅನುಗ್ರಹಿಸಿದ್ದಾನೆ; (ಆತನು ಎಲ್ಲರಿಗೂ ಕರ್ತನಾಗಿದ್ದಾನೆ.)
ರೋಮಾಪುರದವರಿಗೆ 1:7
ಇದಲ್ಲದೆ ದೇವರಿಗೆ ಪ್ರಿಯ ರಾಗಿದ್ದು ಪರಿಶುದ್ಧರಾಗುವದಕ್ಕೆ ಕರೆಯಲ್ಪಟ್ಟ ರೋಮ್ ನಲ್ಲಿರುವವರೆಲ್ಲರಿಗೆ ನಮ್ಮ ತಂದೆಯಾದ ದೇವ ರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಸಮಾಧಾನವೂ ಉಂಟಾಗಲಿ.
ರೋಮಾಪುರದವರಿಗೆ 4:5
ಆದರೆ ಯಾವನು ಪುಣ್ಯಕ್ರಿಯೆಗಳನ್ನು ಮಾಡಿದವನಾಗಿರದೆ ಭಕ್ತಿಹೀನರನ್ನು ನೀತಿವಂತರೆಂದು ನಿರ್ಣಯಿಸುವಾತನಲ್ಲಿ ನಂಬಿಕೆ ಯಿಡುತ್ತಾನೋ ಅವನ ನಂಬಿಕೆಯೇ ನೀತಿ ಎಂದು ಎಣಿಸಲ್ಪಡುವದು.
ರೋಮಾಪುರದವರಿಗೆ 5:9
ಈಗ ನಾವು ಆತನ ರಕ್ತದಿಂದ ನೀತಿವಂತ ರಾಗಿರಲಾಗಿ ಬರುವ ಕೋಪದಿಂದ ಆತನ ಮೂಲಕ ರಕ್ಷಿಸಲ್ಪಡುವದು ಮತ್ತೂ ನಿಶ್ಚಯವಲ್ಲವೇ.
ರೋಮಾಪುರದವರಿಗೆ 15:33
ಶಾಂತಿದಾಯಕನಾದ ದೇವರು ನಿಮ್ಮೆಲ್ಲರೊಂದಿಗಿ ರಲಿ. ಆಮೆನ್.
2 ಕೊರಿಂಥದವರಿಗೆ 5:18
ಎಲ್ಲವುಗಳು ದೇವರವುಗಳಾಗಿವೆ; ಆತನು ಯೇಸು ಕ್ರಿಸ್ತನ ಮೂಲಕ ನಮ್ಮನ್ನು ತನಗೆ ಸಮಾಧಾನಪಡಿಸಿಕೊಂಡು ಸಮಾಧಾನದ ವಿಷಯವಾದ ಸೇವೆಯನ್ನು ನಮಗೆ ಅನುಗ್ರಹಿಸಿದ್ದಾನೆ.
ಎಫೆಸದವರಿಗೆ 2:14
ನಿಮ್ಮನ್ನೂ ನಮ್ಮನ್ನೂ ಒಂದು ಮಾಡಿದ ಆತನೇ ನಮ್ಮ ಸಮಾಧಾನವಾಗಿ ನಮ್ಮಿಬ್ಬರನ್ನು ಅಗಲಿ ಸಿದ ಅಡ್ಡಗೋಡೆಯನ್ನು ಆತನು ಕೆಡವಿಹಾಕಿದನು.
1 ಥೆಸಲೊನೀಕದವರಿಗೆ 5:23
ಶಾಂತಿದಾಯಕನಾದ ದೇವರು ತಾನೇ ನಿಮ್ಮನ್ನು ಪರಿಪೂರ್ಣವಾಗಿ ಪವಿತ್ರ ಮಾಡಲಿ; ಇದಲ್ಲದೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಬರೋಣದಲ್ಲಿ ನಿಮ್ಮ ಆತ್ಮ ಪ್ರಾಣ ಶರೀರಗಳು ದೋಷವಿಲ್ಲದೆ ಸಂಪೂರ್ಣ ವಾಗಿ ಕಾಣಿಸುವಂತೆ ಮಾಡಲಿ.
ಫಿಲಿಪ್ಪಿಯವರಿಗೆ 3:9
ನಾನು ಕ್ರಿಸ್ತನಲ್ಲಿರುವ ವನಾಗಿ ಕಾಣಿಸಿಕೊಳ್ಳಬೇಕೆಂದು ನ್ಯಾಯಪ್ರಮಾಣ ದಿಂದಾಗುವ ಸ್ವನೀತಿಯನ್ನಾಶ್ರಯಿಸದೆ ಆತನನ್ನು ನಂಬು ವದರಿಂದ ದೊರಕುವಂಥ ಅಂದರೆ ನಂಬಿಕೆಯ ಆಧಾರ ದಿಂದ ದೇವರು ಕೊಡುವಂಥ ನೀತಿಯನ್ನೇ ಹೊಂದಿ ದ್ದೇನೆ.
ರೋಮಾಪುರದವರಿಗೆ 1:17
ನೀತಿವಂತನು ನಂಬಿಕೆಯಿಂದಲೇ ಜೀವಿಸುವನು ಎಂದು ಬರೆಯಲ್ಪಟ್ಟಂತೆ ದೇವರ ನೀತಿಯು ಅದರಲ್ಲಿ ವಿಶ್ವಾಸದಿಂದ ವಿಶ್ವಾಸಕ್ಕೆ ಪ್ರಕಟವಾಯಿತು.
ಹಬಕ್ಕೂಕ್ಕ 2:4
ಇಗೋ, ಹೆಚ್ಚಿಸಿಕೊಂಡವನ ಆತ್ಮವು ತನ್ನಲ್ಲಿ ಯಥಾರ್ಥವಲ್ಲ; ಆದರೆ ನೀತಿವಂತನು ತನ್ನ ವಿಶ್ವಾಸದಿಂದ ಬದುಕುವನು.
ಯೆಶಾಯ 54:13
ನಿನ್ನ ಮಕ್ಕಳೆಲ್ಲಾ ಕರ್ತನಿಂದ ಬೋಧಿಸಲ್ಪಡು ವರು; ನಿನ್ನ ಮಕ್ಕಳ ಸಮಾಧಾನವು ಅಧಿಕವಾಗಿರು ವದು.
ರೋಮಾಪುರದವರಿಗೆ 3:30
ದೇವರು ಒಬ್ಬನೇ ಆಗಿರಲಾಗಿ ಆತನು ಸುನ್ನತಿಯವರನ್ನು ನೀತಿವಂತರೆಂದು ನಿರ್ಣಯಿಸು ವದಕ್ಕೆ ಅವರ ನಂಬಿಕೆಯಿಂದಲೇ. ಸುನ್ನತಿಯಿಲ್ಲ ದವರನ್ನು ಹಾಗೆಯೇ ನಿರ್ಣಯಿಸುವದು ನಂಬಿಕೆಯ ಮೂಲಕವೇ.
ರೋಮಾಪುರದವರಿಗೆ 3:26
ತನ್ನ ನೀತಿಯನ್ನು ಈಗಿನ ಕಾಲದಲ್ಲಿ ಹೀಗೆ ತೋರಿಸಿ ತಾನು ನೀತಿವಂತನಾಗಿಯೂ ಯೇಸುವಿನಲ್ಲಿ ನಂಬಿಕೆಯಿಡುವವರನ್ನು ನೀತಿವಂತ ರೆಂದು ನಿರ್ಣಯಿಸುವವನಾಗಿಯೂ ಪ್ರಸಿದ್ಧಿಪಡಿಸಿ ಕೊಂಡನು.
ರೋಮಾಪುರದವರಿಗೆ 3:22
ದೇವರಿಂದಾಗುವ ಆ ನೀತಿಯು ಯಾವ ದೆಂದರೆ ಯೇಸು ಕ್ರಿಸ್ತನನ್ನು ನಂಬುವದರಿಂದಲೇ. ನಂಬುವವರೆಲ್ಲರಿಗೆ ಮತ್ತು ಎಲ್ಲರ ಮೇಲೆಯೂ ದೊರ ಕುವಂಥದು. ಹೆಚ್ಚು ಕಡಿಮೆ ಏನೂ ಇಲ್ಲ;
ಯೋಹಾನನು 20:31
ಆದರೆ ಯೇಸುವೇ ದೇವಕುಮಾರ ನಾದ ಕ್ರಿಸ್ತನೆಂದು ನೀವು ನಂಬುವಂತೆಯೂ ನಂಬಿ ಆತನ ಹೆಸರಿನ ಮೂಲಕ ಜೀವವನ್ನು ಪಡೆದುಕೊಳ್ಳುವಂತೆಯೂ ಇವುಗಳು ಬರೆಯಲ್ಪಟ್ಟಿವೆ.
ಯೋಹಾನನು 5:24
ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿ ದಾತನನ್ನು ನಂಬುವವನು ನಿತ್ಯಜೀವವನ್ನು ಹೊಂದಿ ದ್ದಾನೆ. ಅವನು ತೀರ್ಪಿಗೆ ಗುರಿಯಾಗುವದಿಲ್ಲ; ಆದರೆ ಮರಣದಿಂದ ಜೀವಕ್ಕೆ ದಾಟಿದ್ದಾನೆ.
ಯೋಹಾನನು 3:16
ದೇವರು ಲೋಕವನ್ನು ಎಷ್ಟೋ ಪ್ರೀತಿಮಾಡಿ ತನ್ನ ಒಬ್ಬನೇ ಮಗನನ್ನು ಕೊಟ್ಟನು; ಆತನನ್ನು ನಂಬುವ ಯಾವನಾದರೂ ನಾಶವಾಗದೆ ನಿತ್ಯಜೀವ ವನ್ನು ಪಡೆದವನಾಗಿರುವನು.
ಲೂಕನು 2:14
ಮಹೋನ್ನತ ದಲ್ಲಿರುವ ದೇವರಿಗೆ ಮಹಿಮೆ, ಭೂಮಿಯ ಮೇಲೆ ಸಮಾಧಾನ, ಮನುಷ್ಯರ ಕಡೆಗೆ ದಯೆ ಎಂದು ಹೇಳಿದರು.
ಜೆಕರ್ಯ 6:13
ಹೌದು, ಆತನು ಕರ್ತನ ದೇವಾಲಯವನ್ನು ಕಟ್ಟು ವನು; ಆತನು ಮಹಿಮೆಯನ್ನು ಧರಿಸುವನು; ಕೂತು ಕೊಂಡು ತನ್ನ ಸಿಂಹಾಸನದಲ್ಲಿ ಆಳುವನು, ತನ್ನ ಸಿಂಹಾಸನದಲ್ಲಿ ಯಾಜಕನಾಗಿರುವನು; ಸಮಾಧಾನದ ಆಲೋಚನೆ ಅವರಿಬ್ಬರೊಳಗೆ ಇರುವದು.
ಯೆಶಾಯ 55:12
ನೀವು ಆನಂದದೊಡನೆ ಹೋಗುವಿರಿ ಸಮಾಧಾನದಿಂದ ನಡಿಸಲ್ಪಡುವಿರಿ; ಪರ್ವತಗಳು ಮತ್ತು ಗುಡ್ಡಗಳು ನಿಮ್ಮ ಮುಂದೆ ಹರ್ಷಧ್ವನಿಗೈಯುವವು. ಹೊಲದ ಮರಗಳೆಲ್ಲಾ ಚಪ್ಪಾಳೆ ಹೊಡೆಯುವವು.
ಕೀರ್ತನೆಗಳು 122:6
ಯೆರೂಸಲೇಮಿನ ಸಮಾಧಾನಕ್ಕಾಗಿ ಪ್ರಾರ್ಥಿಸಿರಿ. ಯೆರೂಸಲೇಮನ್ನು ಪ್ರೀತಿಮಾಡುವವರು ಅಭಿವೃದ್ಧಿ ಯಾಗುವರು.
ರೋಮಾಪುರದವರಿಗೆ 4:24
ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದಾತನನ್ನು ನಂಬುವ ನಾವು ನಂಬಿಕೆಯಿಂದ ನೀತಿವಂತರೆಂದು ಎಣಿಸಲ್ಪಡುವಂತೆ ನಮಗೋಸ್ಕರವೂ ಬರೆಯಲ್ಪಟ್ಟಿದೆ.
ರೋಮಾಪುರದವರಿಗೆ 5:18
ಹೀಗಿರಲಾಗಿ ಒಬ್ಬನ ಅಪರಾಧದಿಂದಲೇ ಎಲ್ಲಾ ಮನುಷ್ಯರಿಗೆ ಅಪರಾಧ ನಿರ್ಣಯವು ಹೇಗೆ ಬಂತೋ ಹಾಗೆಯೇ ಒಬ್ಬನ ನೀತಿಯಿಂದಲೇ ಉಚಿತಾರ್ಥವಾದ ದಾನವು ಎಲ್ಲಾ ಮನುಷ್ಯರಿಗೆ ಜೀವದ ನೀತಿ ನಿರ್ಣಯಕ್ಕಾಗಿ ಬಂದಿತು.
ಯಾಕೋಬನು 2:23
ಹೀಗೆ--ಅಬ್ರಹಾಮನು ದೇವರನ್ನು ನಂಬಿದನು; ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟಿತು ಎಂಬ ಬರಹವು ಹೇಳುವಂತೆ ನೆರವೇರಿತು. ಅವನು ದೇವರ ಸ್ನೇಹಿತ ನೆಂದು ಕರೆಯಲ್ಪಟ್ಟನು.
ಇಬ್ರಿಯರಿಗೆ 13:20
ಶಾಶ್ವತವಾದ ಒಡಂಬಡಿಕೆಯ ರಕ್ತದ ಮೂಲಕ ಕುರಿ ಹಿಂಡಿಗೆ ದೊಡ್ಡ ಕುರುಬನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರ ಮಾಡಿದ ಶಾಂತಿದಾಯಕನಾದ ದೇವರು
ಎಫೆಸದವರಿಗೆ 2:7
ಹೀಗೆ ಕ್ರಿಸ್ತ ಯೇಸುವಿನ ಲ್ಲಿರುವ ಕರುಣೆಯ ಮೂಲಕ ತನ್ನ ಅಪಾರವಾದ ಕೃಪಾತಿಶಯವನ್ನು ಮುಂದಣ ಯುಗಗಳಲ್ಲಿ ನಮಗೆ ತೋರಿಸಬೇಕೆಂದಿದ್ದನು.
ಗಲಾತ್ಯದವರಿಗೆ 5:4
ನಿಮ್ಮಲ್ಲಿ ಯಾರಾದರೂ ನ್ಯಾಯ ಪ್ರಮಾಣದ ಮೂಲಕ ನೀತಿವಂತರಾಗಬೇಕೆಂದಿದ್ದರೆ ಅವರಿಗೆ ಕ್ರಿಸ್ತನಿಂದ ಯಾವ ಪ್ರಯೋಜನವೂ ಆಗುವದಿಲ್ಲ; ನೀವು ಕೃಪೆಯಿಂದ ಬಿದ್ದವರಾಗಿದ್ದೀರಿ.
ಗಲಾತ್ಯದವರಿಗೆ 3:25
ಆದರೆ ನಂಬಿಕೆಯು ಬಂದಿರಲಾಗಿ ನಾವಿನ್ನು ಉಪಾಧ್ಯಾಯನ ಕೆಳಗೆ ಎಂದಿಗೂ ಇರುವವರಲ್ಲ.
ಗಲಾತ್ಯದವರಿಗೆ 3:11
ಇದಲ್ಲದೆ ನ್ಯಾಯಪ್ರಮಾಣದಿಂದ ಯಾವನೂ ದೇವರ ಸನ್ನಿಧಿಯಲ್ಲಿ ನೀತಿವಂತ ನಾಗುವದಿಲ್ಲವೆಂಬದು ಸ್ಪಷ್ಟವಾಗಿದೆ. ಯಾಕಂದರೆ-- ನೀತಿವಂತನು ನಂಬಿಕೆಯಿಂದಲೇ ಬದುಕುವನು ಎಂಬದು.
ಗಲಾತ್ಯದವರಿಗೆ 2:16
ಆದರೆ ಯಾವನಾದರೂ ಯೇಸು ಕ್ರಿಸ್ತನ ಮೇಲಣ ನಂಬಿಕೆಯಿಂದಲೇ ಹೊರತು ನ್ಯಾಯ ಪ್ರಮಾಣದ ಕ್ರಿಯೆಗಳಿಂದ ನೀತಿವಂತನೆಂದು ನಿರ್ಣ ಯಿಸಲ್ಪಡುವದಿಲ್ಲವೆಂಬದು ನಮಗೆ ತಿಳಿದಿರುವದ ರಿಂದ ನಾವು ಸಹ ನ್ಯಾಯ ಪ್ರಮಾಣದ ಕ್ರಿಯೆ ಗಳಿಂದಲ್ಲ, ಆದರೆ ಕ್ರಿಸ್ತನ ಮೇಲಣ ನಂಬಿಕೆಯಿಂದಲೇ ನೀತಿವಂತರೆಂದು ನಿರ್ಣಯಿ
ರೋಮಾಪುರದವರಿಗೆ 10:15
ಇದ ಲ್ಲದೆ ಸಾರುವವರನ್ನು ಕಳುಹಿಸದಿದ್ದರೆ ಅವರು ಸಾರು ವದು ಹೇಗೆ? ಮತ್ತು--ಸಮಾಧಾನದ ಸುವಾರ್ತೆ ಯನ್ನು ಸಾರುವವರ ಮತ್ತು ಸಂತೋಷದ ಸುವರ್ತ ಮಾನವನ್ನು ತರುವವರ ಪಾದಗಳು ಎಷ್ಟೋ ಅಂದ ವಾಗಿವೆ ಎಂದು ಬರೆದದೆ.
ರೋಮಾಪುರದವರಿಗೆ 10:10
ಹೃದಯದಿಂದ ನಂಬುವದರ ಮೂಲಕ ನೀತಿಯು ದೊರೆಯುತ್ತದೆ. ಬಾಯಿಂದ ಅರಿಕೆಮಾಡುವದರ ಮೂಲಕ ರಕ್ಷಣೆಯಾಗುತ್ತದೆ.
ರೋಮಾಪುರದವರಿಗೆ 9:30
ಹಾಗಾದರೆ ನಾವು ಏನು ಹೇಳೋಣ? ನೀತಿ ಯನ್ನು ಹೊಂದುವದಕ್ಕೆ ಪ್ರಯತ್ನಮಾಡದ ಅನ್ಯ ಜನರಿಗೆ ನೀತಿಯು ಅಂದರೆ ನಂಬಿಕೆಯಿಂದುಂಟಾಗುವ ನೀತಿಯು ದೊರಕಿತು.
ಯೋಬನು 21:21
ಅವನ ಬಳಿಕ ಅವನ ತಿಂಗಳಲೆಕ್ಕ ಮಧ್ಯದಲ್ಲಿ ಹರಿದ ಮೇಲೆ ಅವನ ಮನೆಯಲ್ಲಿ ಅವನಿಗೆ ಏನು ಸಂತೋಷ?