ತೀತನಿಗೆ 2:11 in Kannada

ಕನ್ನಡ ಕನ್ನಡ ಬೈಬಲ್ ತೀತನಿಗೆ ತೀತನಿಗೆ 2 ತೀತನಿಗೆ 2:11

Titus 2:11
ಯಾಕಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನುಂಟು ಮಾಡುವ ದೇವರ ಕೃಪೆಯು ಪ್ರತ್ಯಕ್ಷವಾಯಿತು.

Titus 2:10Titus 2Titus 2:12

Titus 2:11 in Other Translations

King James Version (KJV)
For the grace of God that bringeth salvation hath appeared to all men,

American Standard Version (ASV)
For the grace of God hath appeared, bringing salvation to all men,

Bible in Basic English (BBE)
For the grace of God has come, giving salvation to all men,

Darby English Bible (DBY)
For the grace of God which carries with it salvation for all men has appeared,

World English Bible (WEB)
For the grace of God has appeared, bringing salvation to all men,

Young's Literal Translation (YLT)
For the saving grace of God was manifested to all men,

For
Ἐπεφάνηepephanēape-ay-FA-nay
the
γὰρgargahr
grace
ay
of

χάριςcharisHA-rees
God
τοῦtoutoo
that
θεοῦtheouthay-OO
salvation
bringeth
ay
hath
appeared
σωτήριοςsōtēriossoh-TAY-ree-ose
to
all
πᾶσινpasinPA-seen
men,
ἀνθρώποιςanthrōpoisan-THROH-poos

Cross Reference

1 ತಿಮೊಥೆಯನಿಗೆ 2:4
ಎಲ್ಲಾ ಮನುಷ್ಯರು ರಕ್ಷಣೆಯನ್ನು ಹೊಂದಿ ಸತ್ಯದ ಜ್ಞಾನಕ್ಕೆ ಸೇರ ಬೇಕೆಂಬದು ಆತನ ಚಿತ್ತವಾಗಿದೆ.

ಇಬ್ರಿಯರಿಗೆ 2:9
ಆದರೂ ದೂತರಿಗಿಂತ ಸ್ವಲ್ಪ ಕಡಿಮೆಯಾಗಿ ಮಾಡಲ್ಪಟ್ಟ ಒಬ್ಬಾತನು ಅಂದರೆ ಯೇಸುವು, ಪ್ರಭಾವವನ್ನೂ ಮಾನವನ್ನೂ ಕಿರೀಟವಾಗಿ ಹೊಂದಿರುವದನ್ನು ನಾವು ನೋಡುತ್ತೇವೆ; ಆತನು ಮೃತಪಟ್ಟದ್ದರಿಂದಲೇ ಮಾನ ಪ್ರಭಾವಗಳನ್ನು ಹೊಂದಿದನು; ಆತನು ದೇವರ ಕೃಪೆ ಯಿಂದ ಎಲ್ಲರಿಗೋಸ್ಕರ ಮರ

2 ಥೆಸಲೊನೀಕದವರಿಗೆ 2:16
ನಮ್ಮನ್ನು ಪ್ರೀತಿಸಿ ನಮಗೆ ನಿತ್ಯವಾದ ಆದರಣೆಯನ್ನೂ ಉತ್ತಮವಾದ ನಿರೀಕ್ಷೆಯನ್ನೂ ಕೃಪೆಯಿಂದ ಅನುಗ್ರ ಹಿಸಿದ ನಮ ಕರ್ತನಾದ ಯೇಸು ಕ್ರಿಸ್ತನೂ ನಮ್ಮ ತಂದೆಯಾದ ದೇವರೂ

ರೋಮಾಪುರದವರಿಗೆ 15:9
ಈ ಕಾರಣದಿಂದ ನಾನು ಅನ್ಯಜನಗಳ ಮಧ್ಯದಲ್ಲಿ ನಿನ್ನನು ಅರಿಕೆ ಮಾಡಿ ನಿನ್ನ ನಾಮವನ್ನು ಸಂಕೀರ್ತಿಸುವೆನು ಎಂದು ಬರೆದಿರುವ ಪ್ರಕಾರ ಅನ್ಯಜನಗಳು ದೇವರ ಕರುಣೆಗಾಗಿ ಆತನನ್ನು ಮಹಿಮೆಪಡಿಸುವರು.

ರೋಮಾಪುರದವರಿಗೆ 11:5
ಅದರಂತೆ ಈಗಿನ ಕಾಲದಲ್ಲಿ ಕೃಪೆಯ ಆಯ್ಕೆಯ ಪ್ರಕಾರ ಒಂದಂಶವು ಉಳಿದಿದೆ.

2 ಕೊರಿಂಥದವರಿಗೆ 6:1
ಆದದರಿಂದ ನಾವು ಆತನೊಂದಿಗೆ ಕೆಲಸ ನಡಿಸುವವರಾಗಿದ್ದೇವೆ; ನೀವು ಸಹ ಹೊಂದಿದ ದೇವರ ಕೃಪೆಯನ್ನು ವ್ಯರ್ಥಮಾಡಿ ಕೊಳ್ಳಬೇಡಿರಿ ಎಂದು ನಿಮ್ಮನ್ನು ಬೇಡಿಕೊಳ್ಳುತ್ತೇವೆ.

ಅಪೊಸ್ತಲರ ಕೃತ್ಯಗ 13:47
ಯಾಕಂ ದರೆ--ನೀನು ಲೋಕದ ಕಟ್ಟಕಡೆಯ ವರೆಗೆ ರಕ್ಷಣೆಗೆ ಕಾರಣವಾಗಿರುವಂತೆ ನಾನು ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ನೇಮಿಸಿದ್ದೇನೆ ಎಂದು ಹೇಳಿದ ಹಾಗೆ ಕರ್ತನು ನಮಗೆ ಅಪ್ಪಣೆ ಕೊಟ್ಟಿದ್ದಾನೆ.

ಅಪೊಸ್ತಲರ ಕೃತ್ಯಗ 13:43
ಸಭೆಯು ಮುಗಿದ ತರುವಾಯ ಯೆಹೂದ್ಯರಲ್ಲಿಯೂ ಯೆಹೂದ್ಯ ಮತಾವಲಂಬಿ ಗಳಲ್ಲಿಯೂ ಅನೇಕರು ಪೌಲ ಬಾರ್ನಬರನ್ನು ಹಿಂಬಾ ಲಿಸಿದರು. ಇವರು ಅವರ ಸಂಗಡ ಮಾತನಾಡಿ ದೇವರ ಕೃಪೆಯಲ್ಲಿ ನೆಲೆಗೊಂಡಿರಬೇಕೆಂದು ಅವರನ್ನು ಪ್ರೋತ್ಸಾಹಪಡಿಸಿದರು.

ಅಪೊಸ್ತಲರ ಕೃತ್ಯಗ 11:23
ಅವನು ಬಂದು ದೇವರ ಕೃಪೆಯನ್ನು ನೋಡಿ ಸಂತೋಷಪಟ್ಟು ದೃಢಮನಸ್ಸಿನಿಂದ ಕರ್ತನನ್ನು ಅಂಟಿ ಕೊಂಡಿರಬೇಕೆಂದು ಅವರೆಲ್ಲರನ್ನು ಪ್ರೇರೇಪಿಸಿದನು.

ಯೋಹಾನನು 1:16
ಆತನ ಸಂಪೂರ್ಣತೆಯೊಳಗಿಂದ ನಾವೆಲ್ಲರೂ ಕೃಪೆಗಾಗಿ ಕೃಪೆಯನ್ನು ಹೊಂದಿದೆವು.

ಯೋಹಾನನು 1:14
ಇದಲ್ಲದೆ ಆ ವಾಕ್ಯವಾಗಿರುವಾತನು ಶರೀರಧಾರಿ ಯಾಗಿ ಕೃಪೆಯಿಂದಲೂ ಸತ್ಯದಿಂದಲೂ ತುಂಬಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. (ತಂದೆಯಿಂದ ಹುಟ್ಟಿದ ಒಬ್ಬನೇ ಮಗನ ಮಹಿಮೆಯಂತೆ ನಾವು ಆತನ ಮಹಿಮೆಯನ್ನು ನೋಡಿದೆವು).

ಯೋಹಾನನು 1:9
ಲೋಕದಲ್ಲಿ ಬರುವ ಪ್ರತಿಯೊಬ್ಬ ಮನುಷ್ಯನಿಗೆ ಆತನು ಬೆಳಕನ್ನು ಕೊಡುವ ನಿಜವಾದ ಬೆಳಕಾಗಿದ್ದನು.

ಲೂಕನು 24:47
ಯೆರೂಸಲೇಮು ಮೊದಲುಗೊಂಡು ಎಲ್ಲಾ ಜನಾಂಗದವ ರೊಳಗೆ ಆತನ ಹೆಸರಿನಲ್ಲಿ ಮಾನಸಾಂತರ ಮತ್ತು ಪಾಪಗಳ ಕ್ಷಮಾಪಣೆ ಸಾರಲ್ಪಡಬೇಕೆಂತಲೂ ಬರೆಯ ಲ್ಪಟ್ಟಿದೆ.

ಅಪೊಸ್ತಲರ ಕೃತ್ಯಗ 20:24
ಆದಾಗ್ಯೂ ಇವುಗಳಲ್ಲಿ ಯಾವದೊಂದು ನನ್ನನ್ನು ಕದಲಿಸುವದಿಲ್ಲ; ಇಲ್ಲವೆ ನನ್ನ ಪ್ರಾಣವು ನನಗೆ ಪ್ರಿಯವಾದದ್ದೆಂದು ನಾನು ಎಣಿಸುವದಿಲ್ಲ; ಹೀಗೆ ದೇವರ ಕೃಪೆಯ ಸುವಾರ್ತೆಯನ್ನು ಸಾಕ್ಷಿಕರಿಸು ವದಕ್ಕಾಗಿ ನಾನು ಕರ್ತನಾದ ಯೇಸುವಿನಿಂದ ಹೊಂದಿದ ಸೇವೆಯೆಂಬ ಓಟವನ್ನು ಸಂತೋಷದಿಂದ ಕೊನೆಗಾಣಿಸುವ

ರೋಮಾಪುರದವರಿಗೆ 4:4
ಕೆಲಸ ಮಾಡಿದವನಿಗೆ ಬರುವ ಸಂಬಳವು ಕೃಪೆಯಿಂದ ದೊರಕುವಂಥದ್ದೆಂದು ಎಣಿಕೆ ಯಾಗುವದಿಲ್ಲ; ಅದು ಸಲ್ಲತಕ್ಕದ್ದೇ.

ರೋಮಾಪುರದವರಿಗೆ 5:2
ಈಗ ನಾವು ನೆಲೆ ಗೊಂಡಿರುವ ಈ ಕೃಪೆಯಲ್ಲಿ ಆತನ ಮುಖಾಂತರವೇ ನಂಬಿಕೆಯಿಂದ ಪ್ರವೇಶವಾದದರಿಂದ ದೇವರ ಮಹಿ ಮೆಯ ನಿರೀಕ್ಷೆಯಲ್ಲಿ ಉಲ್ಲಾಸಿಸುತ್ತೇವೆ.

ರೋಮಾಪುರದವರಿಗೆ 5:15
ಆದರೆ ಆ ಅಪರಾಧವು ಇದ್ದಂತೆ ಉಚಿತವಾದ ದಾನವು ಇರುವದಿಲ್ಲ; ಹೇಗಂದರೆ ಆ ಒಬ್ಬನ ಅಪ ರಾಧದಿಂದ ಎಲ್ಲಾ ಮನುಷ್ಯರು ಸತ್ತವರಾಗಿದ್ದರೆ ದೇವರ ಕೃಪೆಯೂ ಯೇಸು ಕ್ರಿಸ್ತನೆಂಬ ಈ ಒಬ್ಬ ಮನುಷ್ಯನ ಕೃಪೆಯಿಂದಾದ ದಾನವೂ ಅನೇಕರಿಗೆ ಹೇರಳವಾಗಿ ದೊರೆಯುವದು ಮತ್ತೂ ನಿಶ್ಚಯವಲ್ಲವೇ.

ರೋಮಾಪುರದವರಿಗೆ 10:18
ಆದರೆ--ಅವರು ಕೇಳಲಿಲ್ಲವೇನು ಎಂದು ನಾನು ಕೇಳುತ್ತೇನೆ. ಹೌದು ನಿಜವೇ, ಅವರ ಧ್ವನಿಯು ಭೂಮಿಯಲ್ಲೆಲ್ಲಾ ಪ್ರಸರಿಸಿತು, ಅವರ ನುಡಿಗಳು ಲೋಕದ ಕಟ್ಟಕಡೆಯ ವರೆಗೂ ವ್ಯಾಪಿಸಿದವು.

ಎಫೆಸದವರಿಗೆ 1:6
ತನ್ನ ಕೃಪಾಮಹಿಮೆಯ ಸ್ತುತಿಗಾಗಿ ಆತನು ನಮ್ಮನ್ನು ಆ ಪ್ರಿಯನಲ್ಲಿ ಅಂಗೀಕರಿಸಿದ್ದಾನೆ.

ಎಫೆಸದವರಿಗೆ 2:5
ಪಾಪಗಳ ದೆಸೆಯಿಂದ ಸತ್ತವರಾಗಿದ್ದ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದನು. (ನೀವು ಕೃಪೆಯಿಂದಲೇ ರಕ್ಷಣೆ ಹೊಂದಿದವರಾಗಿದ್ದೀರಿ;)

ಎಫೆಸದವರಿಗೆ 2:8
ನಂಬಿಕೆಯ ಮೂಲಕ ಕೃಪೆ ಯಿಂದಲೇ ನೀವು ರಕ್ಷಣೆ ಹೊಂದಿದವರಾಗಿದ್ದೀರಿ. ಆ ರಕ್ಷಣೆಯು ನಿಮ್ಮಿಂದುಂಟಾದದ್ದಲ್ಲ, ಅದು ದೇವರ ದಾನವೇ.

ಎಫೆಸದವರಿಗೆ 3:6
ಅದೇನಂದರೆ, ಅನ್ಯಜನರು (ಯೆಹೂದ್ಯರೊಂದಿಗೆ) ಸಹ ಬಾಧ್ಯರೂ ಒಂದೇ ದೇಹದವರೂ ಸುವಾರ್ತೆಯಿಂದ ಕ್ರಿಸ್ತನ ಮೂಲಕ ಆತನ ವಾಗ್ದಾನದಲ್ಲಿ ಪಾಲುಗಾರರೂ ಆಗಿರಬೇಕೆಂ ಬದೇ.

ಲೂಕನು 3:6
ಮಾನವರೆಲ್ಲರು ದೇವರ ರಕ್ಷಣೆಯನ್ನು ಕಾಣುವರು ಎಂದೂ ಬರೆದಿರುವಂತೆ ಹೀಗಾಯಿತು.

ಮಾರ್ಕನು 16:15
ಆತನು ಅವರಿಗೆ--ನೀವು ಸಮಸ್ತ ಲೋಕಕ್ಕೆ ಹೋಗಿ ಎಲ್ಲಾ ಸೃಷ್ಟಿಗೆ ಸುವಾರ್ತೆಯನ್ನು ಸಾರಿರಿ.

ಕೊಲೊಸ್ಸೆಯವರಿಗೆ 1:6
ನೀವು ಸತ್ಯದಲ್ಲಿ ದೇವರ ಕೃಪೆಯನ್ನು ಕೇಳಿ ತಿಳುಕೊಂಡ ದಿವಸದಿಂದ ನಿಮ್ಮ ಬಳಿಗೆ ಬಂದ ಆ ಸುವಾರ್ತೆಯು ಲೋಕದಲ್ಲೆಲ್ಲಾ ಫಲಕೊಟ್ಟಂತೆ ನಿಮ್ಮಲ್ಲಿಯೂ ಫಲ ಕೊಡುತ್ತದೆ.

ಕೀರ್ತನೆಗಳು 84:11
ದೇವರಾದ ಕರ್ತನು ಸೂರ್ಯ ನೂ ಗುರಾಣಿಯೂ ಆಗಿದ್ದಾನೆ; ಕರ್ತನು ಕೃಪೆಯನ್ನೂ ಮಹಿಮೆಯನ್ನೂ ಕೊಡುತ್ತಾನೆ; ಸಂಪೂರ್ಣವಾಗಿ ನಡೆದುಕೊಳ್ಳುವವರಿಗೆ ಆತನು ಯಾವ ಒಳ್ಳೇದನ್ನು ಹಿಂದೆಗೆಯುವದಿಲ್ಲ.

ಕೀರ್ತನೆಗಳು 96:1
ಕರ್ತನಿಗೆ ಹೊಸ ಹಾಡನ್ನು ಹಾಡಿರಿ; ಸಮಸ್ತ ಭೂಮಿಯೇ, ಕರ್ತನಿಗೆ ಹಾಡಿರಿ.

ಕೀರ್ತನೆಗಳು 96:10
ಕರ್ತನು ಆಳುತ್ತಾನೆ; ಲೋಕವು ಸ್ಥಿರವಾಗಿದೆ, ಕದಲುವದಿಲ್ಲ. ಆತನು ಜನಗಳಿಗೆ ನೀತಿಯಲ್ಲಿ ನ್ಯಾಯತೀರಿಸುವನೆಂದು ಅನ್ಯಜನಾಂಗಗಳಲ್ಲಿ ಹೇಳಿರಿ.

ಕೀರ್ತನೆಗಳು 98:1
ಕರ್ತನಿಗೆ ಹೊಸ ಹಾಡನ್ನು ಹಾಡಿರಿ; ಆತನು ಅದ್ಭುತಗಳನ್ನು ಮಾಡಿದ್ದಾನೆ; ಆತನ ಬಲಗೈಯೂ ಪರಿಶುದ್ಧತೋಳೂ ಆತನಿಗೆ ಜಯ ವನ್ನು ತಂದಿವೆ.

ಕೀರ್ತನೆಗಳು 117:1
ಎಲ್ಲಾ ಜನಾಂಗಗಳೇ, ಕರ್ತನನ್ನು ಸ್ತುತಿಸಿರಿ; ಸರ್ವಜನರೇ, ಕರ್ತನನ್ನು ಸ್ತುತಿಸಿರಿ.

ಯೆಶಾಯ 2:2
ಆ ಅಂತ್ಯ ದಿನಗಳಲ್ಲಿ ಆಗುವದೇನಂದರೆ--ಕರ್ತನ ಆಲಯದ ಪರ್ವತವು ಗುಡ್ಡಗಳಿಗಿಂತ ಎತ್ತರ ವಾಗಿ ಪರ್ವತಗಳ ತುದಿಯಲ್ಲಿ ನೆಲೆಯಾಗಿರುವದು. ಎಲ್ಲಾ ಜನಾಂಗಗಳು ಅದರ ಕಡೆಗೆ ತಂಡ ತಂಡವಾಗಿ ಬರುವವು.

ಯೆಶಾಯ 45:22
ಎಲ್ಲಾ ದಿಗಂತಗಳವರೇ, ನನ್ನ ಕಡೆಗೆ ನೋಡಿ ರಕ್ಷಣೆಯನ್ನು ಹೊಂದಿರಿ; ಯಾಕಂದರೆ ನಾನೇ ದೇವರು, ನನ್ನ ಹೊರತು ಯಾರೂ ಇಲ್ಲ.

ಮತ್ತಾಯನು 28:19
ಆದದರಿಂದ ನೀವು ಹೋಗಿ ಎಲ್ಲಾ ಜನಾಂಗಗಳಿಗೆ ಬೋಧಿಸಿ ತಂದೆಯ, ಮಗನ, ಪರಿಶುದ್ಧಾತ್ಮನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿರಿ;

ಜೆಕರ್ಯ 12:10
ದಾವೀದನ ಮನೆತನದವರ ಮೇಲೆಯೂ ಯೆರೂಸಲೇಮಿನ ನಿವಾಸಿಗಳ ಮೇಲೆಯೂ ಕೃಪೆಯ ಆತ್ಮವನ್ನೂ ಬಿನ್ನಹಗಳ ಆತ್ಮವನ್ನೂ ಒಯ್ಯುವೆನು; ಇರಿದವರು ಆತನನ್ನು ದೃಷ್ಟಿಸಿ ನೋಡುವರು; ಒಬ್ಬನೇ ಮಗನ ನಿಮಿತ್ತ ಗೋಳಾಡುವವನ ಹಾಗೆ ಆತನ ನಿಮಿತ್ತ ಗೋಳಾಡುವರು; ಚೊಚ್ಚಲ ಮಗನ ನಿಮಿತ್ತ ವ್ಯಥೆಪಡುವವನ ಹಾಗೆ ಆತನ ನಿಮಿತ್ತ ವ್ಯಥೆಪಡು ವರು.

ಜೆಕರ್ಯ 4:7
ಓ ಮಹಾ ಬೆಟ್ಟವೇ, ನೀನ್ಯಾರು? ಜೆರುಬ್ಬಾಬೆಲನ ಮುಂದೆ ಬೈಲಾಗುವಿ; ಅದಕ್ಕೆ--ಕೃಪೆಯೇ, ಕೃಪೆಯೇ ಎಂದು ಅರ್ಭಟಗಳ ಸಂಗಡ ಮುಖ್ಯ ಕಲ್ಲನ್ನು ಅವನು ಹೊರಗೆ ತರುವನು.

ಯೆಶಾಯ 60:1
ಏಳು, ಪ್ರಕಾಶಿಸು; ಯಾಕಂದರೆ, ನಿನ್ನ ಬೆಳಕು ಬಂತು; ಕರ್ತನ ಮಹಿಮೆಯು ನಿನ್ನ ಮೇಲೆ ಉದಯವಾಯಿತು.

ಯೆಶಾಯ 52:10
ಕರ್ತನು ತನ್ನ ಪರಿ ಶುದ್ಧವಾದ ಬಾಹುವನ್ನು ಸಕಲ ಜನಾಂಗಗಳ ಕಣ್ಣು ಗಳಿಗೆ ತೋರಮಾಡಿದ್ದಾನೆ. ಭೂಮಿಯ ಅಂತ್ಯದವ ರೆಲ್ಲಾ ನಮ್ಮ ದೇವರ ರಕ್ಷಣೆಯನ್ನು ನೋಡುವರು.

ಯೆಶಾಯ 49:6
ಆತನೇ ಈಗ ಹೀಗನ್ನುತ್ತಾನೆ--ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬನ ಕುಲಗಳನ್ನು ಉನ್ನತಪಡಿ ಸುವದೂ ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರಿಗಿ ಬರಮಾಡುವದೂ ಅಲ್ಪ ಕಾರ್ಯವೇ; ನನ್ನ ರಕ್ಷಣೆಯು ಲೋಕದ ಕಟ್ಟಕಡೆಯ ವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೆ ಬೆಳಕನ್ನಾಗಿ ದಯಪಾಲಿಸುವೆನು.

ಗಲಾತ್ಯದವರಿಗೆ 2:21
ನಾನು ದೇವರ ಕೃಪೆಯನ್ನು ನಿರರ್ಥಕ ಮಾಡುವದಿಲ್ಲ. ನ್ಯಾಯಪ್ರಮಾಣದಿಂದ ನೀತಿಯುಂಟಾಗುವದಾದರೆ ಕ್ರಿಸ್ತನು ಮರಣವನ್ನು ಹೊಂದಿದ್ದು ವ್ಯರ್ಥವಾಯಿತು.

ಕೊಲೊಸ್ಸೆಯವರಿಗೆ 1:23
ಪೌಲನೆಂಬ ನಾನು ಈ ಸುವಾರ್ತೆಗೆ ಸೇವಕನಾದೆನು; ನೀವು ಕೇಳಿದಂಥ ಮತ್ತು ಆಕಾಶದ ಕೆಳಗಿರುವ ಸರ್ವಸೃಷ್ಟಿಗೆ ಸಾರಲ್ಪಟ್ಟಂಥ ಸುವಾರ್ತೆಯಿಂದ ಉಂಟಾದ ನಿರೀಕ್ಷೆ ಯನ್ನು ಬಿಟ್ಟು ತೊಲಗಿಹೋಗದೆ ಅಸ್ತಿವಾರದ ಮೇಲೆ ನಿಂತು ಸ್ಥಿರವಾಗಿದ್ದು ನಂಬಿಕೆಯಲ್ಲಿ ನೆಲೆಗೊಂಡಿರು ವದಾದರೆ

1 ತಿಮೊಥೆಯನಿಗೆ 1:14
ನಮ್ಮ ಕರ್ತನ ಕೃಪೆಯು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆ ಮತ್ತು ಪ್ರೀತಿಯೊಂದಿಗೆ ಅತ್ಯಧಿಕವಾಯಿತು.

2 ತಿಮೊಥೆಯನಿಗೆ 4:17
ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸಾರಲ್ಪಡುವದು ಸಂಪೂರ್ಣವಾಗಿ ಗ್ರಹಿಕೆ ಯಾಗುವಂತೆಯೂ ಅನ್ಯಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು; ಇದಲ್ಲದೆ ಆತನು ನನ್ನನ್ನು ಸಿಂಹದ ಬಾಯೊಳಗಿಂದ ತಪ್ಪಿಸಿದನು.

ತೀತನಿಗೆ 3:4
ಆದರೆ ನಮ್ಮ ರಕ್ಷಕನಾದ ದೇವರ ದಯೆಯೂ ಪ್ರೀತಿಯೂ ಮನುಷ್ಯನ ಕಡೆಗೆ ಪ್ರತ್ಯಕ್ಷವಾದಾಗ

ಇಬ್ರಿಯರಿಗೆ 12:15
ನಿಮ್ಮಲ್ಲಿ ಯಾವನಾದರೂ ದೇವರ ಕೃಪೆಗೆ ತಪ್ಪಿ ಹೋಗ ದಂತೆಯೂ ಯಾವ ವಿಷವುಳ್ಳ ಬೇರೂ ನಿಮ್ಮಲ್ಲಿ ಚಿಗುರಿ ಕಳವಳ ಹುಟ್ಟಿಸಿ ಅದರಿಂದ ಅನೇಕರು ಅಶುದ್ಧರಾಗ ದಂತೆಯೂ

1 ಪೇತ್ರನು 1:10
ನಿಮಗೆ ಬರಬೇಕಾಗಿದ್ದ ಕೃಪೆಯನ್ನು ಕುರಿತು ಮುಂತಿಳಿಸಿದ ಪ್ರವಾದಿಗಳು ಈ ರಕ್ಷಣೆಯ ವಿಷಯದಲ್ಲಿ ಸೂಕ್ಷ್ಮವಾಗಿ ವಿಚಾರಿಸಿ ಪರಿಶೋಧನೆ ಮಾಡಿದರು.

1 ಪೇತ್ರನು 5:5
ಅದೇ ರೀತಿಯಾಗಿ ಯೌವನಸ್ಥರೇ, ಹಿರಿಯರಿಗೆ ಅಧೀನರಾಗಿರ್ರಿ; ನೀವೆಲ್ಲರೂ ದೀನತೆಯೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಅಧೀನರಾಗಿರ್ರಿ. ದೇವರು ಅಹಂಕಾರಿಗಳನ್ನು ಎದುರಿಸುತ್ತಾನೆ. ದೀನರಿ ಗಾದರೊ ಕೃಪೆಯನ್ನು ಅನುಗ್ರಹಿಸುತ್ತಾನೆ.

ರೋಮಾಪುರದವರಿಗೆ 5:20
ಹೇಗಾದರೂ ಅಪರಾಧವು ಹೆಚ್ಚಾಗಿ ಕಂಡುಬರುವ ಹಾಗೆ ನ್ಯಾಯಪ್ರಮಾಣವು ಪ್ರವೇಶಿಸಿತು; ಆದರೆ ಪಾಪವು ಹೆಚ್ಚಿದಲ್ಲೇ ಕೃಪೆಯು ಎಷ್ಟೋ ಹೆಚ್ಚಾಗಿ ಪ್ರಬಲವಾಯಿತು.